AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಸಾಕ್ಷಿ, ವಿನೇಶ್, ಬಜರಂಗ್ ವಿರುದ್ಧ ಎಫ್‌ಐಆರ್‌ಗೆ ಅರ್ಜಿ: ಪ್ರತಿಭಟನೆ ತೀವ್ರಗೊಳಿಸಲು ಮತ್ತೊಂದು ಹೆಜ್ಜೆ ಇಟ್ಟಿ ಕುಸ್ತಿಪಟುಗಳು

FIR: ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆರಂಭವಾಗಿರುವ ಪ್ರತಿಭಟನೆಯಲ್ಲಿ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಭಾಗವಹಿಸಿದ್ದು, ಇದೀಗ ಇವರ ಮೇಲೆ ಪಟಿಯಾಲ ಹೌಸ್ ಕೋರ್ಟ್​ನಲ್ಲಿ ದೂರು ದಾಖಲಾಗಿದೆ.

Wrestlers Protest: ಸಾಕ್ಷಿ, ವಿನೇಶ್, ಬಜರಂಗ್ ವಿರುದ್ಧ ಎಫ್‌ಐಆರ್‌ಗೆ ಅರ್ಜಿ: ಪ್ರತಿಭಟನೆ ತೀವ್ರಗೊಳಿಸಲು ಮತ್ತೊಂದು ಹೆಜ್ಜೆ ಇಟ್ಟಿ ಕುಸ್ತಿಪಟುಗಳು
wrestlers protest
Vinay Bhat
|

Updated on: May 26, 2023 | 7:54 AM

Share

ಭಾರತದ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆರಂಭವಾಗಿರುವ ಪ್ರತಿಭಟನೆಯಲ್ಲಿ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಭಾಗವಹಿಸಿದ್ದು, ಇದೀಗ ಇವರ ಮೇಲೆ ಪಟಿಯಾಲ ಹೌಸ್ ಕೋರ್ಟ್​ನಲ್ಲಿ ದೂರು ದಾಖಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುಳ್ಳು ಆರೋಪ ಮಾಡಿರುವುದಾಗಿ ಹೇಳಿಕೆ ನೀಡಲಾಗಿದೆ.

ಗುರುವಾರ ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದ್ದು ಜೂನ್ 9 ರೊಳಗೆ ತೆಗೆದುಕೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆ ಜೂನ್ 9 ರಂದು ನಡೆಯಲಿದೆ. ಬಾಮ್ ಬಾಮ್ ಮಹಾರಾಜ್ ನೌಹತಿಯಾ ಎಂಬುವವರು ದೂರು ನೀಡಿದ್ದು ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಸಂಸದೀಯ ಭಾಷೆ ಬಳಸಿದ್ದಾರೆ. ಆರೋಪಿಗಳು ಸಿಂಗ್ ಅವರ ಚಾರಿತ್ರ್ಯವಧೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

IPL 2023: ಬೆಸ್ಟ್ ಐಪಿಎಲ್ ತಂಡ ಪ್ರಕಟಿಸಿದ ಸುರೇಶ್ ರೈನಾ; ಧೋನಿಗಿಲ್ಲ ತಂಡದಲ್ಲಿ ಸ್ಥಾನ..!

ಇದನ್ನೂ ಓದಿ
Image
GT vs MI, Qualifier 2: ಐಪಿಎಲ್​ನಲ್ಲಿಂದು ಗುಜರಾತ್-ಮುಂಬೈ ನಡುವೆ ಕ್ವಾಲಿಫೈಯರ್-2: ಸೋತರೆ ಔಟ್, ಗೆದ್ದರೆ ಫೈನಲ್​ಗೆ
Image
Virat Kohli: ಮೈದಾನಕ್ಕಿಳಿಯದೇ ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2023: ವಿರಾಟ್ ಕೊಹ್ಲಿ ಜೊತೆ ಕ್ಷಮೆ ಕೇಳಿದ್ರಾ ನವೀನ್ ಉಲ್ ಹಕ್?
Image
Asia Cup 2023: 3 ಮಂಡಳಿ ಅಧ್ಯಕ್ಷರ ಹಾಜರಿ; ಐಪಿಎಲ್ ಫೈನಲ್ ಪಂದ್ಯದಲ್ಲಿ ಏಷ್ಯಾಕಪ್ ಭವಿಷ್ಯ ನಿರ್ಧಾರ!

ಸಿಂಗ್ ಮೇಲೆ ಎರಡು ಎಫ್‌ಐಆರ್ ಆಗಿದ್ದರೂ ಇನ್ನೂ ಬಂಧಿಸಿಲ್ಲ. ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ ಪೈಲ್ವಾನರು ಅವರನ್ನು ಲೈಂಗಿಕ ಶೋಷಣೆಯ ಆರೋಪಗಳಲ್ಲಿ ಬಂಧಿಸದ ಹೊರತು ಪ್ರತಿಭಟನೆಯಿಂದ ಹಿಂತೆಗೆಯುವುದಿಲ್ಲ ಎಂದು ಸಂಕಲ್ಪ ಮಾಡಿದ್ದಾರೆ. 2012 ರಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಈ ಹಿಂದೆ ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು.

ಇದರ ನಡುವೆ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಹಾಗೂ ವಿನೇಶಾ ಪೋಗಟ್ ಅವರು ಇದೇ 28ರಂದು ಮಹಿಳಾ ಮಹಾಪಂಚಾಯತ್‌ ಆಯೋಜನೆಗೆ ಸಿದ್ಧತೆ ನಡೆಸಿದ್ದಾರೆ. ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಖಾಪ್ ಪಂಚಾಯತ್‌ ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲ ಕೋರುತ್ತಿದ್ದಾರೆ. ಮಹಾಪಂಚಾಯತ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರುತ್ತಿದ್ದಾರೆ. ಅದೇ ದಿನ ರಾಜಧಾನಿಯಲ್ಲಿ ನೂತನ ಸಂಸತ್ ಭವನವೂ ಉದ್ಘಾಟನೆಗೊಳ್ಳಲಿದೆ. ಇತ್ತ ಜಂತರ್ ಮಂಥರ್‌ನಲ್ಲಿ ಸಂಗೀತಾ ಪೋಗಟ್ ಅವರು ಧರಣಿಯ ಮುಂದಾಳತ್ವ ವಹಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ