AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಂಚೆಸ್ಟರ್ ಫುಟ್ಬಾಲ್​​​​ಗೆ ಭಾರತದಲ್ಲೇ ಶೇ. 38ರಷ್ಟು ಫ್ಯಾನ್ಸ್​​ ಇದ್ದಾರೆ: ಲೆಜೆಂಡ್ ಆಟಗಾರ ಗುನ್ನಾರ್ ಫುಲ್​ ಖುಷ್​​!

Football Legend Ole Gunnar Solskjaer: ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್​​ನ ಲೆಜೆಂಡ್ ಆಗಿರುವ ಮಾಜಿ ಫುಟ್ಬಾಲ್ ಆಟಗಾರ ಹಾಗೂ ಕೋಚ್ ಗುನ್ನಾರ್ ಸೋಲ್ಸ್ಜೇರ್ ಬೆಂಗಳೂರಿಗೆ ಭೇಟಿ ನೀಡಿದ್ದು ಭಾರತದಲ್ಲಿ ಫುಟ್ಬಾಲ್ ಸಾಕಷ್ಟು ಬೆಳೆದಿದ್ದು, ಮತ್ತಷ್ಟು ಪ್ರತಿಭೆಗಳು ಹೊರಹೊಮ್ಮಲಿದ್ದಾರೆ ಎಂದಿದ್ದಾರೆ.

ಸಾಧು ಶ್ರೀನಾಥ್​
|

Updated on: Feb 10, 2024 | 2:07 PM

Share

ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್​​ನ (Manchester United) ಲೆಜೆಂಡ್ ಆಗಿರುವ ಮಾಜಿ ಫುಟ್ಬಾಲ್ ಆಟಗಾರ ಹಾಗೂ ಕೋಚ್ ಗುನ್ನಾರ್ ಸೋಲ್ಸ್ಜೇರ್ (Ole Gunnar Solskjaer) ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಗುನ್ನಾರ್ ಸೋಲ್ಸ್ಜೇರ್, ಭಾರತದ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಬೆಂಗಳೂರು (Bengaluru) ಸೇರಿದಂತೆ ಮುಂಬೈ ಹಾಗೂ ದೆಹಲಿಗೂ ಭೇಟಿ ನೀಡಲಿದ್ದು, ಫುಟ್ಬಾಲ್ ಅಭಿಮಾನಿಗಳನ್ನ (football fans) ಭೇಟಿಯಾಗಲಿದ್ದಾರೆ.

ಇನ್ನು, ಇದೇ ವೇಳೆ ಮಾತಾಡಿದ ಗುನ್ನಾರ್, ಭಾರತಕ್ಕೆ ಆಗಮಿಸಿರುವುದು ಬಹಳ ಸಂತೋಷ ನೀಡಿದೆ. ಮ್ಯಾಂಚೆಸ್ಟರ್ ಫುಟ್ಬಾಲ್ ಕ್ಲಬ್​ಗೆ ಭಾರತದಲ್ಲೇ ಶೇಕಡ 38ರಷ್ಟು ಅಭಿಮಾನಿಗಳಿದ್ದಾರೆ. ಹಾಗಾಗಿ ಅವರನ್ನ ಭೇಟಿಯಾಗುತ್ತಿರುವುದು ನನ್ನ ಭಾಗ್ಯ ಅಂತಾ ತಿಳಿಸಿದ್ರು.

ಇದನ್ನೂ ಓದಿ: Cheteshwar Pujara: 62ನೇ ಶತಕ ಸಿಡಿಸಿ ದಾಖಲೆ ಬರೆದ ಚೇತೇಶ್ವರ ಪೂಜಾರ

ಅಲ್ಲದೇ ತಮ್ಮ ಫುಟ್ಬಾಲ್ ಆಟವನ್ನ ಕೂಡ ಮೆಲುಕು ಹಾಕಿದ್ರು. ಭಾರತದಲ್ಲಿ ಫುಟ್ಬಾಲ್ ಸಾಕಷ್ಟು ಬೆಳೆದಿದ್ದು, ಮತ್ತಷ್ಟು ಪ್ರತಿಭೆಗಳು ಹೊರಹೊಮ್ಮಲಿದ್ದಾರೆ ಅಂತಾ ತಿಳಿಸಿದ್ರು. ಇದೇ ವೇಳೆ ತಮ್ಮನ್ನ ಭಾರತಕ್ಕೆ ಕರೆ ತಂದ ಏಸ್ ಆಫ್ ಪಬ್ಸ್​​​ ಸಂಸ್ಥೆಯ ಮಾಲೀಕ ತಿಲಕ್​ ಅವರನ್ನು ಕೂಡ ಹಾಡಿಹೊಗಳಿದ್ದಾರೆ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!