AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು

Krishna Nagar: ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು
Krishna Nagar
TV9 Web
| Edited By: |

Updated on:Sep 05, 2021 | 9:53 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ (Tokyo Paralympics) ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಎಸ್​ಹೆಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಹಾಂಕಾಂಗ್​ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್​ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಟ್ಟಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್​ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್​ನಲ್ಲಿ ಕಮ್​ಬ್ಯಾಕ್ ಮಾಡಿದ ಚು ಮನ್ ಕೈ 21-16 ಅಂಕಗಳಿಂದ ಗೆದ್ದು ಸಮಬಲ ಸಾಧಿಸಿದರು. ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ 21-17 ಅಂತರದಿಂದ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಕೃಷ್ಣ ಅವರು ಸಿಂಗಲ್ಸ್ ವಿಭಾಗದಲ್ಲಿ ಗ್ರೇಟ್ ಬ್ರಿಟನ್​​ನ ಕ್ರಿಸ್ಟನ್ ಕೋಂಬ್ಸ್​​ ಅವರನ್ನು ಸೋಲಿಸಿ ಫೈನಲ್​​​​ಗೆ ಪ್ರವೇಶಿಸಿದ್ದರು. ತನ್ನ ಸೆಮಿಫೈನಲ್ ಎದುರಾಳಿ ಗ್ರೇಟ್ ಬ್ರಿಟನ್‌ನ ಕ್ರಿಸ್ಟನ್ ಕೂಂಬ್ಸ್‌ನನ್ನು 21-10, 21-11 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿದ್ದರು.

ಇದಕ್ಕೂ ಮುನ್ನ ಇಂದು ಮುಂಜಾನೆ ನಡೆದ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದ ರೋಚಕ ಫೈನಲ್ ಪಂದ್ಯದಲ್ಲಿ ಭಾರತದ, ಕನ್ನಡಿಗ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದರು. ವಿಶ್ವದ ನಂಬರ್ ಒನ್ ಆಟಗಾರ ಫ್ರಾನ್ಸ್​ನ ಲೂಕಸ್ ಮಜೂರ್ ವಿರುದ್ಧ ವಿಶ್ವದ ನಂಬರ್ 3 ಆಟಗಾರ ಸುಹಾಸ್ 1-2 ಸೆಟ್​ಗಳ ಅಂತರದಲ್ಲಿ ಸೋಲುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದರು. ಈ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂದ ಸಾಧನೆಯನ್ನು ಸುಹಾಸ್ ಮಾಡಿದರು.

ಈ ಮೂಲಕ ಒಟ್ಟಾರೆಯಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ 2020ರ​ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಇದರಲ್ಲಿ ಚಿನ್ನ 5 ಗೆದ್ದಿದ್ದರೆ, ಬೆಳ್ಳಿ 8 ಮತ್ತು 6 ಕಂಚಿನ ಪದಕ ಭಾರತ ಬಾಜಿಕೊಂಡಿದೆ.

Published On - 9:47 am, Sun, 5 September 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!