AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು

Krishna Nagar: ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು
Krishna Nagar
TV9 Web
| Edited By: |

Updated on:Sep 05, 2021 | 9:53 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ (Tokyo Paralympics) ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಎಸ್​ಹೆಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಹಾಂಕಾಂಗ್​ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್​ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಟ್ಟಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್​ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್​ನಲ್ಲಿ ಕಮ್​ಬ್ಯಾಕ್ ಮಾಡಿದ ಚು ಮನ್ ಕೈ 21-16 ಅಂಕಗಳಿಂದ ಗೆದ್ದು ಸಮಬಲ ಸಾಧಿಸಿದರು. ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ 21-17 ಅಂತರದಿಂದ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಕೃಷ್ಣ ಅವರು ಸಿಂಗಲ್ಸ್ ವಿಭಾಗದಲ್ಲಿ ಗ್ರೇಟ್ ಬ್ರಿಟನ್​​ನ ಕ್ರಿಸ್ಟನ್ ಕೋಂಬ್ಸ್​​ ಅವರನ್ನು ಸೋಲಿಸಿ ಫೈನಲ್​​​​ಗೆ ಪ್ರವೇಶಿಸಿದ್ದರು. ತನ್ನ ಸೆಮಿಫೈನಲ್ ಎದುರಾಳಿ ಗ್ರೇಟ್ ಬ್ರಿಟನ್‌ನ ಕ್ರಿಸ್ಟನ್ ಕೂಂಬ್ಸ್‌ನನ್ನು 21-10, 21-11 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿದ್ದರು.

ಇದಕ್ಕೂ ಮುನ್ನ ಇಂದು ಮುಂಜಾನೆ ನಡೆದ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದ ರೋಚಕ ಫೈನಲ್ ಪಂದ್ಯದಲ್ಲಿ ಭಾರತದ, ಕನ್ನಡಿಗ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದರು. ವಿಶ್ವದ ನಂಬರ್ ಒನ್ ಆಟಗಾರ ಫ್ರಾನ್ಸ್​ನ ಲೂಕಸ್ ಮಜೂರ್ ವಿರುದ್ಧ ವಿಶ್ವದ ನಂಬರ್ 3 ಆಟಗಾರ ಸುಹಾಸ್ 1-2 ಸೆಟ್​ಗಳ ಅಂತರದಲ್ಲಿ ಸೋಲುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದರು. ಈ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂದ ಸಾಧನೆಯನ್ನು ಸುಹಾಸ್ ಮಾಡಿದರು.

ಈ ಮೂಲಕ ಒಟ್ಟಾರೆಯಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ 2020ರ​ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಇದರಲ್ಲಿ ಚಿನ್ನ 5 ಗೆದ್ದಿದ್ದರೆ, ಬೆಳ್ಳಿ 8 ಮತ್ತು 6 ಕಂಚಿನ ಪದಕ ಭಾರತ ಬಾಜಿಕೊಂಡಿದೆ.

Published On - 9:47 am, Sun, 5 September 21

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್