AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು

Krishna Nagar: ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

Tokyo Paralympics: ಭಾರತಕ್ಕೆ 5ನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್​ನಲ್ಲಿ ಕೃಷ್ಣ ನಗರ್​ಗೆ ರೋಚಕ ಗೆಲುವು
Krishna Nagar
TV9 Web
| Edited By: |

Updated on:Sep 05, 2021 | 9:53 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ (Tokyo Paralympics) ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಎಸ್​ಹೆಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಹಾಂಕಾಂಗ್​ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್​ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಟ್ಟಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್​ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್​ನಲ್ಲಿ ಕಮ್​ಬ್ಯಾಕ್ ಮಾಡಿದ ಚು ಮನ್ ಕೈ 21-16 ಅಂಕಗಳಿಂದ ಗೆದ್ದು ಸಮಬಲ ಸಾಧಿಸಿದರು. ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ 21-17 ಅಂತರದಿಂದ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಕೃಷ್ಣ ಅವರು ಸಿಂಗಲ್ಸ್ ವಿಭಾಗದಲ್ಲಿ ಗ್ರೇಟ್ ಬ್ರಿಟನ್​​ನ ಕ್ರಿಸ್ಟನ್ ಕೋಂಬ್ಸ್​​ ಅವರನ್ನು ಸೋಲಿಸಿ ಫೈನಲ್​​​​ಗೆ ಪ್ರವೇಶಿಸಿದ್ದರು. ತನ್ನ ಸೆಮಿಫೈನಲ್ ಎದುರಾಳಿ ಗ್ರೇಟ್ ಬ್ರಿಟನ್‌ನ ಕ್ರಿಸ್ಟನ್ ಕೂಂಬ್ಸ್‌ನನ್ನು 21-10, 21-11 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿದ್ದರು.

ಇದಕ್ಕೂ ಮುನ್ನ ಇಂದು ಮುಂಜಾನೆ ನಡೆದ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದ ರೋಚಕ ಫೈನಲ್ ಪಂದ್ಯದಲ್ಲಿ ಭಾರತದ, ಕನ್ನಡಿಗ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದರು. ವಿಶ್ವದ ನಂಬರ್ ಒನ್ ಆಟಗಾರ ಫ್ರಾನ್ಸ್​ನ ಲೂಕಸ್ ಮಜೂರ್ ವಿರುದ್ಧ ವಿಶ್ವದ ನಂಬರ್ 3 ಆಟಗಾರ ಸುಹಾಸ್ 1-2 ಸೆಟ್​ಗಳ ಅಂತರದಲ್ಲಿ ಸೋಲುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದರು. ಈ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂದ ಸಾಧನೆಯನ್ನು ಸುಹಾಸ್ ಮಾಡಿದರು.

ಈ ಮೂಲಕ ಒಟ್ಟಾರೆಯಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ 2020ರ​ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಇದರಲ್ಲಿ ಚಿನ್ನ 5 ಗೆದ್ದಿದ್ದರೆ, ಬೆಳ್ಳಿ 8 ಮತ್ತು 6 ಕಂಚಿನ ಪದಕ ಭಾರತ ಬಾಜಿಕೊಂಡಿದೆ.

Published On - 9:47 am, Sun, 5 September 21

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ