Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi Detained: ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಬಂಧನ

ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್​ಗೆ ಆಗಮಿಸಿದ್ದ ಮೆಸ್ಸಿಯನ್ನು ವೀಸಾ (Visa) ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆ ಯೋಧರು ಕೆಲ ಕಾಲ ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ.

Lionel Messi Detained: ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಬಂಧನ
Lionel Messi detained
Follow us
Vinay Bhat
|

Updated on: Jun 13, 2023 | 12:06 PM

ಫುಟ್ಬಾಲ್ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಚೀನಾ ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿ ಆಗಿದೆ. ಚೀನಾದ ರಾಜಧಾನಿ ಬೀಜಿಂಗ್‌ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅರ್ಜೆಂಟೀನಾ (Argentina) ಅಂತರರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕೂ ಮುನ್ನ ಬೀಜಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್​ಗೆ ಆಗಮಿಸಿದ್ದ ಮೆಸ್ಸಿಯನ್ನು ವೀಸಾ (Visa) ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆ ಯೋಧರು ಕೆಲ ಕಾಲ ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ. ಇದಾದ ಬಳಿಕ ವೀಸಾ ಕ್ಲಿಯರೆನ್ಸ್​ ಸಿಕ್ಕ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.

ಮೆಸ್ಸಿ ಅವರು ಬೀಜಿಂಗ್​ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರುನ್ನು ತಡೆದು ನಿಲ್ಲಿಸಿದ್ದಾರೆ. ಇದು ಮೆಸ್ಸಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಮೆಸ್ಸಿ ಚೀನಾ ಭೇಟಿಗೂ ಮೊದಲು ವೀಸಾಕ್ಕೆ ಅರ್ಜಿ ಸಲ್ಲಿಸಿರಲಿಲ್ಲ, ಅಲ್ಲದೇ, ತನ್ನ ಅರ್ಜೆಂಟೀನಾದ ಬದಲಿಗೆ ಸ್ಪ್ಯಾನಿಷ್ ಪಾಸ್‌ಪೋರ್ಟ್‌ನೊಂದಿಗೆ ಪ್ರಯಾಣಿಸುತ್ತಿದ್ದರು. ಅದು ಚೀನಾ ಪ್ರವೇಶದ ಅವಕಾಶ ಹೊಂದಿಲ್ಲ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ
Image
Arshdeep Singh: ಕೌಂಟಿ ಕ್ರಿಕೆಟ್​ನಲ್ಲಿ ಚೊಚ್ಚಲ ವಿಕೆಟ್ ಕಿತ್ತ ಅರ್ಶ್​ದೀಪ್ ಸಿಂಗ್: ಔಟ್ ಮಾಡಿದ್ದು ಯಾರನ್ನ ಗೊತ್ತೇ?
Image
Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Image
ವಿಶ್ವಕಪ್​ಗಿಂತ ಐಪಿಎಲ್​ ಟ್ರೋಫಿ ಗೆಲ್ಲುವುದು ಕಷ್ಟ, ರೋಹಿತ್ ಶರ್ಮಾ ಬೆಸ್ಟ್ ಕ್ಯಾಪ್ಟನ್: ಸೌರವ್ ಗಂಗೂಲಿ
Image
Virat Kohli vs Babar Azam: ವಿರಾಟ್ ಕೊಹ್ಲಿಗೆ ತಿರುಗೇಟು ನೀಡಿದ ಬಾಬರ್ ಆಝಂ

Rohit Sharma: ರೋಹಿತ್ ಶರ್ಮಾಗೆ ಇದುವೇ ಕೊನೆಯ ಚಾನ್ಸ್​..!

ಸುಮಾರು 30 ನಿಮಿಷಗಳ ನಂತರ ಪರಿಸ್ಥಿತಿಯನ್ನು ಬಗೆಹರಿಸಲಾಯಿತು. ಮೆಸ್ಸಿ ಅವರನ್ನು ಪೊಲೀಸ್ ಅಧಿಕಾರಿಗಳು ಸುತ್ತುವರಿದಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಿಯಾಮಿಯಲ್ಲಿ ನಡೆಯಲಿರುವ ಮೇಜರ್ ಲೀಗ್ ಸಾಕರ್ (ಎಂಎಲ್​ಎಸ್​) ಪಂದ್ಯಾವಳಿಗೂ ಮೊದಲು ಆಸ್ಟ್ರೇಲಿಯಾ ವಿರುದ್ಧ ಇದೇ ಜೂನ್ 15 ರಂದು ಬೀಜಿಂಗ್​ನ ವರ್ಕರ್ಸ್ ಸ್ಟೇಡಿಯಂನಲ್ಲಿ ಸೌಹಾರ್ದ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಭಾಗವಹಿಸಲು ಮೆಸ್ಸಿ ಚೀನಾಕ್ಕೆ ಬಂದಿಳಿದಿದ್ದಾರೆ.

ಹೊಸ ಕ್ಲಬ್​ ಪರ ಕಣಕ್ಕಿಳಿಯಲಿದ್ದಾರೆ ಮೆಸ್ಸಿ:

ಲಿಯೋನೆಲ್ ಮೆಸ್ಸಿ ಇಂಟರ್ ಮಿಯಾಮಿ ಕ್ಲಬ್ ಪರ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ನಾನು ಅಮೆರಿಕದ ಮೇಜರ್ ಲೀಗ್ ಸಾಕರ್ ತಂಡ “ಇಂಟರ್ ಮಿಯಾಮಿ” ಪರ ಆಡಲು ಸಹಿ ಹಾಕಲಿದ್ದೇನೆ ಎಂದು ಸ್ಪ್ಯಾನಿಷ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಯೂರೋಪ್​ನ ಇತರೆ ಕ್ಲಬ್​ಗಳಿಂದ ಆಫರ್ ಬಂದಿರುವುದನ್ನು ಖಚಿತಪಡಿಸಿದ ಮೆಸ್ಸಿ, ತಾನು ಯುರೋಪ್​ನಲ್ಲಿ ಆಡಿದ್ರೆ ಅದು ಬಾರ್ಸಿಲೋನಾ ತಂಡದ ಪರ ಮಾತ್ರ ಆಡುತ್ತೇನೆ ಎಂದು ನಿರ್ಧರಿಸಿದ್ದೆ. ಹೀಗಾಗಿ ಬೇರೆ ಕ್ಲಬ್​ಗಳ ಆಫರ್​ ಬಗ್ಗೆ ನಾನು ಆಸಕ್ತಿ ತೋರಲಿಲ್ಲ ಎಂದರು.

2004 ರಿಂದ 2021 ರವರೆಗೆ ಸ್ಪೇನ್​ನ ಬಾರ್ಸಿಲೋನಾ ಕ್ಲಬ್ ಪರ ಆಡಿದ್ದ ಲಿಯೋನೆಲ್ ಮೆಸ್ಸಿ 778 ಪಂದ್ಯಗಳಲ್ಲಿ 672 ಗೋಲ್​ಗಳನ್ನು ಬಾರಿಸಿದ್ದರು. ಇದಾದ ಬಳಿಕ ಫ್ರಾನ್ಸ್​ನ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಪರ ಕಣಕ್ಕಿಳಿದಿದ್ದ ಫುಟ್​ಬಾಲ್ ಅಂಗಳದ ಮಾಂತ್ರಿಕ 75 ಪಂದ್ಯಗಳಲ್ಲಿ ಕೇವಲ 32 ಗೋಲುಗಳಿಸಲಷ್ಟೇ ಶಕ್ತರಾಗಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ