AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi Detained: ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಬಂಧನ

ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್​ಗೆ ಆಗಮಿಸಿದ್ದ ಮೆಸ್ಸಿಯನ್ನು ವೀಸಾ (Visa) ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆ ಯೋಧರು ಕೆಲ ಕಾಲ ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ.

Lionel Messi Detained: ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಬಂಧನ
Lionel Messi detained
Vinay Bhat
|

Updated on: Jun 13, 2023 | 12:06 PM

Share

ಫುಟ್ಬಾಲ್ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಚೀನಾ ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿ ಆಗಿದೆ. ಚೀನಾದ ರಾಜಧಾನಿ ಬೀಜಿಂಗ್‌ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅರ್ಜೆಂಟೀನಾ (Argentina) ಅಂತರರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕೂ ಮುನ್ನ ಬೀಜಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್​ಗೆ ಆಗಮಿಸಿದ್ದ ಮೆಸ್ಸಿಯನ್ನು ವೀಸಾ (Visa) ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆ ಯೋಧರು ಕೆಲ ಕಾಲ ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ. ಇದಾದ ಬಳಿಕ ವೀಸಾ ಕ್ಲಿಯರೆನ್ಸ್​ ಸಿಕ್ಕ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.

ಮೆಸ್ಸಿ ಅವರು ಬೀಜಿಂಗ್​ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರುನ್ನು ತಡೆದು ನಿಲ್ಲಿಸಿದ್ದಾರೆ. ಇದು ಮೆಸ್ಸಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಮೆಸ್ಸಿ ಚೀನಾ ಭೇಟಿಗೂ ಮೊದಲು ವೀಸಾಕ್ಕೆ ಅರ್ಜಿ ಸಲ್ಲಿಸಿರಲಿಲ್ಲ, ಅಲ್ಲದೇ, ತನ್ನ ಅರ್ಜೆಂಟೀನಾದ ಬದಲಿಗೆ ಸ್ಪ್ಯಾನಿಷ್ ಪಾಸ್‌ಪೋರ್ಟ್‌ನೊಂದಿಗೆ ಪ್ರಯಾಣಿಸುತ್ತಿದ್ದರು. ಅದು ಚೀನಾ ಪ್ರವೇಶದ ಅವಕಾಶ ಹೊಂದಿಲ್ಲ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ
Image
Arshdeep Singh: ಕೌಂಟಿ ಕ್ರಿಕೆಟ್​ನಲ್ಲಿ ಚೊಚ್ಚಲ ವಿಕೆಟ್ ಕಿತ್ತ ಅರ್ಶ್​ದೀಪ್ ಸಿಂಗ್: ಔಟ್ ಮಾಡಿದ್ದು ಯಾರನ್ನ ಗೊತ್ತೇ?
Image
Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Image
ವಿಶ್ವಕಪ್​ಗಿಂತ ಐಪಿಎಲ್​ ಟ್ರೋಫಿ ಗೆಲ್ಲುವುದು ಕಷ್ಟ, ರೋಹಿತ್ ಶರ್ಮಾ ಬೆಸ್ಟ್ ಕ್ಯಾಪ್ಟನ್: ಸೌರವ್ ಗಂಗೂಲಿ
Image
Virat Kohli vs Babar Azam: ವಿರಾಟ್ ಕೊಹ್ಲಿಗೆ ತಿರುಗೇಟು ನೀಡಿದ ಬಾಬರ್ ಆಝಂ

Rohit Sharma: ರೋಹಿತ್ ಶರ್ಮಾಗೆ ಇದುವೇ ಕೊನೆಯ ಚಾನ್ಸ್​..!

ಸುಮಾರು 30 ನಿಮಿಷಗಳ ನಂತರ ಪರಿಸ್ಥಿತಿಯನ್ನು ಬಗೆಹರಿಸಲಾಯಿತು. ಮೆಸ್ಸಿ ಅವರನ್ನು ಪೊಲೀಸ್ ಅಧಿಕಾರಿಗಳು ಸುತ್ತುವರಿದಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಿಯಾಮಿಯಲ್ಲಿ ನಡೆಯಲಿರುವ ಮೇಜರ್ ಲೀಗ್ ಸಾಕರ್ (ಎಂಎಲ್​ಎಸ್​) ಪಂದ್ಯಾವಳಿಗೂ ಮೊದಲು ಆಸ್ಟ್ರೇಲಿಯಾ ವಿರುದ್ಧ ಇದೇ ಜೂನ್ 15 ರಂದು ಬೀಜಿಂಗ್​ನ ವರ್ಕರ್ಸ್ ಸ್ಟೇಡಿಯಂನಲ್ಲಿ ಸೌಹಾರ್ದ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಭಾಗವಹಿಸಲು ಮೆಸ್ಸಿ ಚೀನಾಕ್ಕೆ ಬಂದಿಳಿದಿದ್ದಾರೆ.

ಹೊಸ ಕ್ಲಬ್​ ಪರ ಕಣಕ್ಕಿಳಿಯಲಿದ್ದಾರೆ ಮೆಸ್ಸಿ:

ಲಿಯೋನೆಲ್ ಮೆಸ್ಸಿ ಇಂಟರ್ ಮಿಯಾಮಿ ಕ್ಲಬ್ ಪರ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ನಾನು ಅಮೆರಿಕದ ಮೇಜರ್ ಲೀಗ್ ಸಾಕರ್ ತಂಡ “ಇಂಟರ್ ಮಿಯಾಮಿ” ಪರ ಆಡಲು ಸಹಿ ಹಾಕಲಿದ್ದೇನೆ ಎಂದು ಸ್ಪ್ಯಾನಿಷ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಯೂರೋಪ್​ನ ಇತರೆ ಕ್ಲಬ್​ಗಳಿಂದ ಆಫರ್ ಬಂದಿರುವುದನ್ನು ಖಚಿತಪಡಿಸಿದ ಮೆಸ್ಸಿ, ತಾನು ಯುರೋಪ್​ನಲ್ಲಿ ಆಡಿದ್ರೆ ಅದು ಬಾರ್ಸಿಲೋನಾ ತಂಡದ ಪರ ಮಾತ್ರ ಆಡುತ್ತೇನೆ ಎಂದು ನಿರ್ಧರಿಸಿದ್ದೆ. ಹೀಗಾಗಿ ಬೇರೆ ಕ್ಲಬ್​ಗಳ ಆಫರ್​ ಬಗ್ಗೆ ನಾನು ಆಸಕ್ತಿ ತೋರಲಿಲ್ಲ ಎಂದರು.

2004 ರಿಂದ 2021 ರವರೆಗೆ ಸ್ಪೇನ್​ನ ಬಾರ್ಸಿಲೋನಾ ಕ್ಲಬ್ ಪರ ಆಡಿದ್ದ ಲಿಯೋನೆಲ್ ಮೆಸ್ಸಿ 778 ಪಂದ್ಯಗಳಲ್ಲಿ 672 ಗೋಲ್​ಗಳನ್ನು ಬಾರಿಸಿದ್ದರು. ಇದಾದ ಬಳಿಕ ಫ್ರಾನ್ಸ್​ನ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಪರ ಕಣಕ್ಕಿಳಿದಿದ್ದ ಫುಟ್​ಬಾಲ್ ಅಂಗಳದ ಮಾಂತ್ರಿಕ 75 ಪಂದ್ಯಗಳಲ್ಲಿ ಕೇವಲ 32 ಗೋಲುಗಳಿಸಲಷ್ಟೇ ಶಕ್ತರಾಗಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ