AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಸುಹಾಸ್ ಬಗ್ಗೆ ನಿಮಗೆಷ್ಟು ಗೊತ್ತು?

Suhas Lalinakere Yathiraj: ಸುಹಾಸ್‌ ಎಲ್.ವೈ. ಹಾಸನ ಮೂಲದವರಾದರೂ ಕರಾವಳಿಯ ನಂಟು ಬೆಸೆದಿದೆ. ಎನ್‌ಐಟಿಕೆ ಸುರತ್ಕಲ್‌ನಲ್ಲಿ ಇವರು ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು.

ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಸುಹಾಸ್ ಬಗ್ಗೆ ನಿಮಗೆಷ್ಟು ಗೊತ್ತು?
Suhas Lalinakere Yathiraj
TV9 Web
| Edited By: |

Updated on: Aug 20, 2021 | 2:36 PM

Share

ಸುಹಾಸ್ ಲಲಿನಕೆರೆ ಯತಿರಾಜ್. ಪ್ಯಾರಾ-ಬ್ಯಾಂಡ್ಮಿಂಟನ್‌ ಆಟಗಾರನಾಗಿರುವ ಇವರು 2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಪ್ರಯಾಗ್‌ರಾಜ್‌ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ ಒಂದು ವರ್ಷದಿಂದ ನೋಯ್ಡಾದ ಡಿಎಂ ಆಗಿ ಜಿಲ್ಲೆಯ ಕೋವಿಡ್‌ ವಿರುದ್ಧದ ಸಮರದ ನೇತೃತ್ವ ವಹಿಸಿದ್ದಾರೆ.

ಸುಹಾಸ್‌ ಎಲ್.ವೈ. ಹಾಸನ ಮೂಲದವರಾದರೂ ಕರಾವಳಿಯ ನಂಟು ಬೆಸೆದಿದೆ. ಎನ್‌ಐಟಿಕೆ ಸುರತ್ಕಲ್‌ನಲ್ಲಿ ಇವರು ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು. 2004ರ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದ ಸುಹಾಸ್‌ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. 2016ರ ಬೀಜಿಂಗ್‌ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2017ರ ಟರ್ಕಿಶ್‌ ಓಪನ್‌ ಬ್ಯಾಡ್ಮಿಂಟನ್‌ನಲ್ಲಿ ಅವಳಿ ಚಿನ್ನ ಗೆದ್ದ ಹೆಗ್ಗಳಿಕೆ ಸುಹಾಸ್‌ ಅವರದು. ಈ ಮೂಲಕ ಅಂತರಾಷ್ಟ್ರೀಯ ಕ್ರೀಡೆಯಲ್ಲಿ  ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಇವರಿಗಿದೆ.

ಸದ್ಯ ಮೆನ್ಸ್​ ಸಿಂಗಲ್ಸ್​ನಲ್ಲಿ ಮೂರನೇ ರಾಂಕ್​ ಗಳಿಸಿದ ಅವರ ಸಾಧನೆಯ ಆಧಾರದ ಮೇಲೆ ಅವರನ್ನು ಪ್ಯಾರಾಲಿಂಪಿಕ್ಸ್​ಗೆ ಆಯ್ಕೆ ಮಾಡಲಾಗಿದೆ. ಬ್ಯಾಡ್ಮಿಂಟನ್ ವರ್ಲ್ಡ್​ ಫೆಡರೇಶನ್​ನ ಆಹ್ವಾನದ ಮೇರೆಗೆ, ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

“ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವ ಹಿಸುತ್ತಿರುವ ಮೂಲಕ ನನ್ನ ಕನಸು ನನಸಾಗುತ್ತಿದೆ. ಕರ್ತವ್ಯದ ಜತೆಯಲ್ಲೇ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿತ್ಯ ಅಭ್ಯಾಸದಲ್ಲಿ ತೊಡಗಿಕೊಳ್ಳುತ್ತೇನೆ. ಪ್ಯಾರಾಲಿಂಪಿಕ್ಸ್‌ಗಾಗಿ ಒಂದು ವಾರವಷ್ಟೇ ರಜೆಯಲ್ಲಿ ತೆರಳಲಿದ್ದೇನೆ. ಇದರಿಂದ ತನ್ನ ಆಡಳಿತಾತ್ಮಕ ಕರ್ತವ್ಯಕ್ಕೆ ಅಡ್ಡಿಯಾಗದು’ ಎಂದು ಸುಹಾಸ್‌ ಹೇಳಿದ್ದಾರೆ.

“ಭಗವದ್ಗೀತೆಯ ಶ್ಲೋಕಗಳನ್ನು ನಾನು ನಂಬುತ್ತೇನೆ. ನಿಮ್ಮ ಕಾರ್ಯವನ್ನು ಮಾಡಿ ಮತ್ತು ನೀವು ಫಲಾಪೇಕ್ಷಗಳನ್ನು ಪಡೆಯುತ್ತೀರಿ. ನಾನು ಯಾವುದೇ ಒತ್ತಡಕ್ಕೆ ಒಳಗಾಗುತ್ತಿಲ್ಲ. ದೇವರು ನನ್ನನ್ನು ಈ ಮಟ್ಟಕ್ಕೆ ಕರೆತಂದಿದ್ದರೆ, ನನ್ನ ಎಲ್ಲ ಪ್ರಯತ್ನಗಳನ್ನು ನಾನು ಮಾಡಲಿದ್ದೇನೆ ”ಎಂದು ಹೇಳಿದರು.

ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ಗಾಗಿ ಭಾರತ 7 ಸದಸ್ಯರ ಬಲಿಷ್ಠ ತಂಡವನ್ನು ರವಾನಿಸಲಿದೆ. ಸುಹಾಸ್‌ ಎಸ್‌ಎಲ್‌4 ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

Cricket Match: 1900ರ ಒಲಿಂಪಿಕ್ಸ್‌ನಲ್ಲಿ ಈ ದಿನದಂದು ನಡೆದಿತ್ತು ಏಕೈಕ ಕ್ರಿಕೆಟ್ ಪಂದ್ಯ: ಯಾರಿಗೆ ಗೆಲುವು?

IPL 2021: ಆರ್​ಸಿಬಿಗೆ ಬಿಗ್ ಶಾಕ್: ತಂಡದ ಸ್ಟಾರ್ ಆಟಗಾರ ಐಪಿಎಲ್ 2021 ರಿಂದಲೇ ಹೊರಕ್ಕೆ

(Meet Suhas LY who is Indias first IAS officer to win gold at an international sporting event)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ