AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ

World Athletics Championships: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನ ಅರ್ಹತಾ ಸುತ್ತಿನಲ್ಲಿ 88.39 ಮೀಟರ್ ದೂರದ ಸಾಧನೆ ಗೈದ ನೀರಜ್ ಚೋಪ್ರಾ ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದರು.

Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ
Neeraj Chopra
TV9 Web
| Edited By: |

Updated on:Jul 22, 2022 | 7:25 AM

Share

ಭಾರತದ ನೀರಜ್ ಚೋಪ್ರಾ (Neeraj Chopra) ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನ (World Athletics Championships) ಪುರುಷರ ಜಾವೆಲಿನ್ ಥ್ರೋನಲ್ಲಿ (Javelin throw) ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ 88.39 ಮೀಟರ್ ದೂರದ ಸಾಧನೆ ಗೈದ ಚೋಪ್ರಾ ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದರು. ಇದೀಗ ಭಾನುವಾರ ಮುಂಜಾನೆ ನಡೆಯಲಿರುವ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಕಳೆದ ತಿಂಗಳು ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿ ನೀರಜ್ 89.94 ಮೀಟರ್‌ಗಳ ಹೊಸ ರಾಷ್ಟ್ರೀಯ ದಾಖಲೆಯನ್ನು ಸ್ಥಾಪಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು. ಚೋಪ್ರಾ ಈ ಬಾರಿ ಕೂಡ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಆಟಗಾರನಾಗಿದ್ದಾರೆ.

ಈ ಋತುವಿನಲ್ಲಿ ಅದ್ಭುತ ಫಲಿತಾಂಶಗಳನ್ನು ಕಂಡಿರುವ ಸ್ಟಾರ್ ಅಥ್ಲೀಟ್ ಎರಡು ಬಾರಿ ತನ್ನ ವೈಯಕ್ತಿಕ ಸಾಧನೆಯನ್ನೇ ಮುರಿದಿದ್ದಾರೆ. ಕಳೆದ ಜೂನ್ 14 ರಂದು ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀ. ಮತ್ತು ಕಳೆದ ತಿಂಗಳು 89.94 ಮೀ ಎಸೆದ ಸಾಧನೆ ಗೈದಿದ್ದರು. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಗೆದ್ದಿದ್ದೇ ಆದಲ್ಲಿ ಪದಕ ಗೆದ್ದ ದೇಶದ ಎರಡನೇ ಮತ್ತು ಮೊದಲ ಪುರುಷ ಆಟಗಾರನಾಗುತ್ತಾರೆ.

9 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಪದಕ ಗೆದ್ದಿದ್ದು ಕೇವಲ 1 ಬಾರಿ ಮಾತ್ರ. 2003 ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕೂಟದಲ್ಲಿ ಲೆಜೆಂಡರಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಅವರು 6.70 ಮೀ ಜಿಗಿತದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದರು. ಇದಾದ ಬಳಿಕ ಯಾವುದೇ ಕ್ರೀಡಾಪಟುವು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಲು ಸಾಧ್ಯವಾಗಿಲ್ಲ. ಇದೀಗ ಸುದೀರ್ಘ ಇತಿಹಾಸದಲ್ಲಿ ದೇಶದ ಮೊಟ್ಟಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ವಿಶ್ವ ಚಾಂಪಿಯನ್ ಆಗುವ ಗುರಿಯನ್ನು ಹೊಂದಿರುವ ನೀರಜ್ ಚೋಪ್ರಾ ಫೈನಲ್​ ಪ್ರವೇಶಿಸಿದ್ದಾರೆ.

ಇದನ್ನೂ ಓದಿ
Image
Asia Cup2022: ಏಷ್ಯಾ ಕಪ್ ಆಯೋಜನೆಗೆ ಅಧಿಕೃತ ಸ್ಥಳ ನಿಗದಿ! ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
Virat Kohli: ಕ್ರಿಕೆಟ್​ಗೆ ಬ್ರೇಕ್; ಮಡದಿಯೊಂದಿಗೆ ಈ ರೊಮ್ಯಾಂಟಿಕ್ ಸಿಟಿಯಲ್ಲಿ ಒಂದು ತಿಂಗಳು ಕಳೆಯಲಿದ್ದಾರೆ ಕೊಹ್ಲಿ
Image
CWG 2022: ಕಾಮನ್‌ವೆಲ್ತ್ ಗೇಮ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಮಹಿಳಾ ಸ್ಟಾರ್ ಕ್ರಿಕೆಟರ್​ಗೆ ಕೊರೊನಾ
Image
IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?

ಇನ್ನು ಭಾರತದ ಜಾವೆಲಿನ್‌ ಎಸೆತಗಾರ್ತಿ ಅನ್ನುರಾಣಿ ಸತತ ಎರಡನೇ ಸಲ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ಅವರು 59.60 ಮೀ. ದೂರದ ಸಾಧನೆಗೈದರು. ಫೌಲ್‌ನೊಂದಿಗೆ ಸ್ಪರ್ಧೆ ಆರಂಭಿಸಿದ ಅನ್ನು ರಾಣಿ, ದ್ವಿತೀಯ ಪ್ರಯತ್ನದಲ್ಲಿ 55.35 ಮೀ. ದೂರಕ್ಕೆಸೆದರು. ಬಳಿಕ ಈ ದೂರವನ್ನು 59.60 ಮೀಟರ್‌ಗೆ ಹೆಚ್ಚಿಸಿಕೊಂಡು “ಬಿ’ ವಿಭಾಗದ 5ನೇ ಸ್ಥಾನಿಯಾದರು. ಒಟ್ಟಾರೆಯಾಗಿ 8ನೇ ಸ್ಥಾನ ಪಡೆದರು. ಇದೇನೂ ಅವರ ಶ್ರೇಷ್ಠ ಸಾಧನೆಯೇನಲ್ಲ. ಆದರೆ ಫೈನಲ್‌ ಪ್ರವೇಶಕ್ಕೆ ಇದು ಸಾಕಾಯಿತು. ಶನಿವಾರ ಬೆಳಗ್ಗೆ 6.50ಕ್ಕೆ ನಡೆಯುವ ಫೈನಲ್‌ನಲ್ಲಿ ಅನ್ನು ಪದಕವೊಂದರ ರಾಣಿ ಆಗಬಲ್ಲರೇ ಎಂಬುದು ನೋಡಬೇಕಿದೆ.

ಕಾಮನ್​ವೆಲ್ತ್​ ಕ್ರೀಡಾಕೂಟಕ್ಕೆ ಕ್ಷಣಗಣನೆ:

ಜುಲೈ 28 ರಿಂದ ಇಂಗ್ಲೆಂಡ್​ನ ಬರ್ಮಿಂಗ್​ಹ್ಯಾಮ್​ನಲ್ಲಿ ಶುರುವಾಗಲಿರುವ ಕಾಮನ್‌ವೆಲ್ತ್ ಗೇಮ್ಸ್​ ನಲ್ಲಿ (CWG 2022) ಈ ಬಾರಿ 5 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅದರಲ್ಲೂ ಭಾರತವನ್ನು 300 ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿಯೇ ಈ ಸಲ ಪದಕಗಳ ನಿರೀಕ್ಷೆ ಹೆಚ್ಚಿದೆ.

Published On - 7:25 am, Fri, 22 July 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!