AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PKL 8: ರೋಚಕ ಟೈನಲ್ಲಿ ಅಂತ್ಯಕಂಡ ತಮಿಳ್ ತಲೈವಾಸ್-ಜೈಪುರ್ ಪಿಂಕ್ ಪ್ಯಾಂಥರ್ಸ್ ಪಂದ್ಯ

Pro Kabaddi League: ಜೈಪುರ ಪಿಂಕ್ ಪ್ಯಾಂಥರ್ಸ್ ಹಾಗೂ ತಮಿಳ್ ತಲೈವಾಸ್ ತಂಡದ ಡಿಫೆಂಡರ್ ಗಳು ಭರ್ಜರಿ ಆಟವಾಡಿದ್ದರಿಂದ ಉಭಯ ತಂಡಗಳ ನಡುವಿನ ಪಂದ್ಯ 31-31 ರಿಂದ ಟೈ ಫಲಿತಾಂಶ ಕಂಡಿತು.

PKL 8: ರೋಚಕ ಟೈನಲ್ಲಿ ಅಂತ್ಯಕಂಡ ತಮಿಳ್ ತಲೈವಾಸ್-ಜೈಪುರ್ ಪಿಂಕ್ ಪ್ಯಾಂಥರ್ಸ್ ಪಂದ್ಯ
Jaipur Pink Panthers vs Tamil Thalaivas
TV9 Web
| Edited By: |

Updated on: Jan 17, 2022 | 7:22 AM

Share

8ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್​ನಲ್ಲಿ (Pro Kabaddi League) ಭಾನುವಾರ ನಡೆದ ಎರಡು ಪಂದ್ಯ ರೋಚಕತೆಯಿಂದ ಕೂಡಿತ್ತು. ಮೂರು ಬಾರಿಯ ಚಾಂಪಿಯನ್ಸ್ ಪಟ್ನಾ ಪೈರೇಟ್ಸ್ ತಂಡ 38-31 ಅಂಕಗಳಿಂದ ಬೆಂಗಳೂರು ಬುಲ್ಸ್ ಅನ್ನು ಸೋಲಿಸಿದರೆ ಮತ್ತೊಂದು ಪಂದ್ಯದಲ್ಲಿ ತಮಿಳ್ ತಲೈವಾಸ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ (Jaipur Pink Panthers vs Tamil Thalaivas) ಸಮಾನ ಅಂಕ ಹಂಚಿಕೊಂಡ ಪರಿಣಾಮ ಪಂದ್ಯ ರೋಚಕ ಟೈನಲ್ಲಿ ಅಂತ್ಯಕಂಡಿತು. ಡ್ರಾ ಮಾಡಿಕೊಂಡು ತಲಾ 3 ಅಂಕ ಗಳಿಸಿದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನಕ್ಕೆ ಏರಿವೆ. ಇತ್ತ ಬೆಂಗಳೂರು ಬುಲ್ಸ್ ಸೋಲುಂಡರೂ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಉಳಿಸಿಕೊಂಡಿದೆ.

ಜೈಪುರ ಪಿಂಕ್ ಪ್ಯಾಂಥರ್ಸ್ ಹಾಗೂ ತಮಿಳ್ ತಲೈವಾಸ್ ತಂಡದ ಡಿಫೆಂಡರ್ ಗಳು ಭರ್ಜರಿ ಆಟವಾಡಿದ್ದರಿಂದ ಉಭಯ ತಂಡಗಳ ನಡುವಿನ ಪಂದ್ಯ 31-31 ರಿಂದ ಟೈ ಫಲಿತಾಂಶ ಕಂಡಿತು. ತಲೈವಾಸ್ ತಂಡದ ನಾಯಕ ಸುರ್ಜೀತ್ ಸಿಂಗ್ ಹಾಗೂ ಜೈಪುರದ ಸಂದೀಪ್ ಧುಲ್ ಪಂದ್ಯದಲ್ಲಿ ಹೈ ಫೈವ್ ಸಾಧನೆ ಮಾಡಿದರು.

ಆರಂಭದಿಂದಲೇ ಭಾರಿ ಹೋರಾಟ ನಡೆದ ಪಂದ್ಯದ ಮೊದಲಾರ್ಧದ ಮುಕ್ತಾಯದ ವೇಳೆಗೆ ಜೈಪುರ 17-13ರಿಂದ ಮುಂದಿತ್ತು. ಆದರೆ ದ್ವಿತೀಯಾರ್ಧದಲ್ಲಿ 18 ಪಾಯಿಂಟ್ಸ್ ಗಳಿಸಿದ ತಲೈವಾಸ್ ತಂಡವು ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ಜೈಪುರ ತಂಡದ ಪರ ರೇಡರ್‌ ಅರ್ಜುನ್ ದೇಸ್ವಾಲ್‌ ಮತ್ತು ನವೀನ್ ತಲಾ ಆರು ಪಾಯಿಂಟ್ಸ್ ಕಲೆಹಾಕಿ ಮಿಂಚಿದರು. ಡಿಫೆಂಡರ್‌ ಸಂದೀಪ್ ಧುಳ್ ಕೂಡ ಐದು ಪಾಯಿಂಟ್ಸ್ ಗಳಿಸಿದರು. ಜೈಪುರಕ್ಕೆ ಇದು ಮೊದಲ ಟೈ ಫ‌ಲಿತಾಂಶವಾದರೆ, ತಲೈವಾಸ್‌ಗೆ ಐದನೆಯದು. ತಮಿಳ್‌ ಕೊನೆಯ ಹಂತದಲ್ಲಿ 2 ಅಂಕಗಳ ಮುನ್ನಡೆಯಲ್ಲಿತ್ತು. ಅಂತಿಮ ಡು ಆರ್‌ ಡೈನಲ್ಲಿ ರೈಡ್‌ ಮಾಡಿದ ಮನ್‌ಜಿàತ್‌ ಸೂಪರ್‌ ಟ್ಯಾಕಲ್‌ಗೆ ಸಿಲುಕಿದ್ದರಿಂದ ಜೈಪುರಕ್ಕೆ 2 ಅಂಕ ಸಿಕ್ಕಿತು. ಪಂದ್ಯ ಸಮಬಲಗೊಂಡಿತು.

ತಮಿಳ್ ತಲೈವಾಸ್ ತಂಡದ ಡಿಫೆಂಡಿಂಗ್ ಜೋಡಿ ಸುರ್ಜೀತ್ ಸಿಂಗ್ ಹಾಗೂ ಸಾಗರ್ ಬಲಾಢ್ಯವಾಗಿ ಕಂಡಿದ್ದರಿಂದ ಜೈಪುರದ ರೈಡರ್ ಅರ್ಜುನ್ ದೇಶ್ವಾಲ್, ಅಂಕ ಸಂಪಾದನೆ ಮಾಡುವ ಅವಕಾಶವನ್ನೇ ಪಡೆದಿರಲಿಲ್ಲ. ಇನ್ನೊಂದೆಡೆ ಜೈಪುರ ಪಿಂಕ್ ಪ್ಯಾಂಥರ್ಸ್ ಕೂಡ ಸಂದೀಪ್ ಧುಲ್ ಹಾಗೂ ಸಾಹುಲ್ ಕುಮಾರ್ ಸಾರಥ್ಯದಲ್ಲಿ ಅದ್ಭುತ ರಕ್ಷಣಾ ಕೋಟೆಯನ್ನು ರಚಿಸಿತ್ತು. ಆದರೆ, 7ನೇ ನಿಮಿಷದಲ್ಲಿ ಅನುಭವಿ ರೈಡರ್ ಕೆ. ಪ್ರಪಂಜನ್ ಭುಜದ ಗಾಯಕ್ಕೆ ತುತ್ತಾದ ಬಳಿಕ ಪಂದ್ಯದ ವೇಗದಲ್ಲಿ ಬದಲಾವಣೆಯಾಯಿತು.

ಇನ್ನು ನಿನ್ನೆ ನಡೆದ ಮತ್ತೊಂದು ಪಂದ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನ ಇರಾದೆಯೊಂದಿಗೆ ಆಡಲಿಳಿದ ಬೆಂಗಳೂರು ಬುಲ್ಸ್‌ ಕನ್ನಡಿಗ ಪ್ರಶಾಂತ್‌ ಕುಮಾರ್‌ ರೈ ಸಾರಥ್ಯದ ಪಾಟ್ನಾ ಪೈರೇಟ್ಸ್‌ ವಿರುದ್ಧ 38-31ಅಂತರದಿಂದ ಸೋಲನುಭವಿಸಿತು. ಬೆಂಗಳೂರು ಪರ ಮಹೇಂದರ್ ಸಿಂಗ್‌ ಹಾಗೂ ಸೌರಭ್ ನಂದಾಲ್ ತಲಾ ಆರು ಪಾಯಿಂಟ್ಸ್ ಗಳಿಸಿದರು. ಪಟ್ನಾ ಮೊದಲಾರ್ಧದಲ್ಲೇ 20-16ರಿಂದ ಮುನ್ನಡೆ ಸಾಧಿಸಿತ್ತು. ಬಳಿಕವೂ ಪಾರಮ್ಯ ಮೆರೆದು ಗೆಲುವು ಒಲಿಸಿಕೊಂಡಿತು. ಪಂದ್ಯ ಸೋತರೂ ಬುಲ್ಸ್ ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯಿತು. ಪಟ್ನಾ ಎರಡನೇ ಸ್ಥಾನದಲ್ಲಿದೆ.

Kapil Dev: ವಿರಾಟ್ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕು! ಕೊಹ್ಲಿ ಬಗ್ಗೆ ಕಪಿಲ್ ದೇವ್ ಮಾತು

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ