AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PKL 2021-22: ಆಡಿದ ಎಂಟನೇ ಪಂದ್ಯವೂ ಸೋತ ತೆಲುಗು ಟೈಟಾನ್ಸ್: ಪುಣೇರಿ ವಿರುದ್ಧ ಯುಪಿ ಯೋದ್ಧಾಗೆ ಗೆಲುವು

Pro Kabaddi 2022 result: ಎಂಟನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್​ನಲ್ಲಿ ಇನ್ನೂ ಖಾತೆ ತೆರೆಯದೆ ತೆಲುಗು ಟೈಟಾನ್ಸ್ ತಂಡ ತನ್ನ ಸೋಲಿನ ಪಯಣವನ್ನು ಮುಂದುವರೆಸಿದೆ. ಸೋಮವಾರದ ಮುಖಾಮುಖಿಯಲ್ಲಿ ಅದು ಬೆಂಗಾಲ್‌ ವಾರಿಯರ್ ಕೈಯಲ್ಲಿ 27-28 ಅಂತರದ ಆಘಾತಕ್ಕೆ ಸಿಲುಕಿತು. ಮೊದಲ ಪಂದ್ಯದಲ್ಲಿ ಯುಪಿ ಯೋದ್ಧಾ 50-40 ರಿಂದ ಪುಣೇರಿಗೆ ಸೋಲುಣಿಸಿತು.

PKL 2021-22: ಆಡಿದ ಎಂಟನೇ ಪಂದ್ಯವೂ ಸೋತ ತೆಲುಗು ಟೈಟಾನ್ಸ್: ಪುಣೇರಿ ವಿರುದ್ಧ ಯುಪಿ ಯೋದ್ಧಾಗೆ ಗೆಲುವು
Telugu Titans
TV9 Web
| Edited By: |

Updated on: Jan 18, 2022 | 7:24 AM

Share

ಎಂಟನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್​ನಲ್ಲಿ (Pro Kabaddi League) ಇನ್ನೂ ಖಾತೆ ತೆರೆಯದೆ ತೆಲುಗು ಟೈಟಾನ್ಸ್ ತಂಡ ತನ್ನ ಸೋಲಿನ ಪಯಣವನ್ನು ಮುಂದುವರೆಸಿದೆ. ಸೋಮವಾರದ ಮುಖಾಮುಖಿಯಲ್ಲಿ ಅದು ಬೆಂಗಾಲ್‌ ವಾರಿಯರ್ ಕೈಯಲ್ಲಿ 27-28 ಅಂತರದ ಆಘಾತಕ್ಕೆ ಸಿಲುಕಿತು. ಇದು 10 ಪಂದ್ಯಗಳಲ್ಲಿ ಟೈಟಾನ್ಸ್‌ಗೆ ಎದುರಾದ 8ನೇ ಸೋಲು. ಉಳಿದೆರಡು ಪಂದ್ಯ ಡ್ರಾ ಆಗಿತ್ತು. ಬಿ ಸಿ ರಮೇಶ್ ಕೋಚ್ ಆಗಿರುವ ಬೆಂಗಾಲ್ ವಾರಿಯರ್ಸ್ ತಂಡದ ಗೆಲುವಿನಲ್ಲಿ ಕ್ಯಾಪ್ಟನ್ ಮಣಿಂದರ್ ಸಿಂಗ್ ಮತ್ತೆ ಪ್ರಮುಖ ಪಾತ್ರ ವಹಿಸಿದರು. ಆದರೆ, ಅವರು 10 ಅಂಕಗಳನ್ನ ಗಳಿಸಲು 21 ರೇಡ್​ಗಳು ಬೇಕಾಯಿತು. ಇದು ಅವರ ಸತತ 9ನೇ ಸುಪರ್10 ರೇಡ್. ಕರ್ನಾಟಕದ ಸುಕೇಶ್ ಹೆಗ್ಡೆ 9 ರೇಡ್ ಮಾಡಿ 5 ಅಂಕ ಗಳಿಸಿದರು.

ತೆಲುಗು ಟೈಟಾನ್ಸ್ ಪರ ರೇಡರ್ ರಜನೀಶ್ 11 ಅಂಕ ಗಳಿಸಿ ಸೈ ಎನಿಸಿದರು. ಆದರೆ, ಟೂರ್ನಿಯಲ್ಲಿ ತಂಡಕ್ಕೆ ಚೊಚ್ಚಲ ಗೆಲುವು ತಂದುಕೊಡಬಲ್ಲ ಆಟ ಬರಲಿಲ್ಲ. ತೆಲುಗು ಟೈಟಾನ್ಸ್ ಈ ಸೀಸನ್​ನಲ್ಲಿ ಆಡಿರುವ 10 ಪಂದ್ಯಗಳಲ್ಲಿ ಒಂದೂ ಗೆಲುವು ಸಿಕ್ಕಿಲ್ಲ.

ಇತ್ತಂಡಗಳ ನಡುವೆ ನಡೆದ ಈ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಮಧ್ಯಂತರಕ್ಕೆ ತೆಲುಗು ಟೈಟನ್ಸ್ 13 ಅಂಕ ಗಳಿಸಿದರೆ ಬೆಂಗಾಲ್ ವಾರಿಯರ್ಸ್ 14 ಅಂಕಗಳನ್ನು ಪಡೆದುಕೊಂಡು 1 ಅಂಕದ ಮುನ್ನಡೆಯನ್ನು ಸಾಧಿಸಿತ್ತು. ದ್ವಿತೀಯಾರ್ಧದ ಐದನೇ ನಿಮಿಷದಲ್ಲಿ ತೆಲುಗು ಟೈಟಾನ್ಸ್ ತಂಡದ ರಜನೀಶ್ ಮಾಡಿದ 3 ಅಂಕಗಳ ರೈಟ್ ತಂಡಕ್ಕೆ 4 ಅಂಕಗಳ ಮುನ್ನಡೆಯನ್ನು ತಂದುಕೊಟ್ಟಿತ್ತು. ಹೀಗೆ ಮುನ್ನಡೆಯನ್ನು ಸಾಧಿಸಿದ್ದ ತೆಲುಗು ಟೈಟಾನ್ಸ್ ತಂಡವನ್ನು ಬೆಂಗಾಲ್ ವಾರಿಯರ್ಸ್ ತಂಡ ಕಟ್ಟಿ ಹಾಕಿತು. ಪಂದ್ಯ ಮುಕ್ತಾಯವಾಗುವುದಕ್ಕೆ 2 ನಿಮಿಷಗಳು ಬಾಕಿ ಇದ್ದಾಗ ತೆಲುಗು ಟೈಟಾನ್ಸ್ ತಂಡದ ರಜನೀಶ್ ಅವರನ್ನು ಬೆಂಗಾಲ್ ವಾರಿಯರ್ಸ್ ತಂಡದ ರಣ್ ಸಿಂಗ್ ಟ್ಯಾಕಲ್ ಮಾಡಿದರು. ಈ ಮೂಲಕ ತೆಲುಗು ಟೈಟಾನ್ಸ್ ಆಲ್ ಔಟ್ ಆಗಿ ಬೆಂಗಾಲ್ ವಾರಿಯರ್ಸ್ ವಿರುದ್ಧ 1 ಅಂಕದ ಸೋಲನ್ನು ಅನುಭವಿಸಿತು.

ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಯುಪಿ ಯೋದ್ಧಾ 50-40 ರಿಂದ ಪುಣೇರಿಗೆ ಸೋಲುಣಿಸಿತು. ಸುರೇಂದರ್ ಗಿಲ್ ಮತ್ತು ಪ್ರದೀಪ್ ನರ್ವಾಲ್ ಮಿಂಚಿದರು. ಇಬ್ಬರೂ ಕ್ರಮವಾಗಿ 21 ಮತ್ತು 10 ಪಾಯಿಂಟ್ ಕಲೆ ಹಾಕಿದರು. ಪುಣೇರಿ ಪಲ್ಟನ್‌ ತಂಡಕ್ಕಾಗಿ ಅಸ್ಲಾಂ ಇನಾಮದಾರ್ ಮತ್ತು ಮೋಹಿತ್ ಗೋಯತ್ ಸೂಪರ್ ಟೆನ್ ಸಾಧನೆ ಮಾಡಿದರು. ಆದರೆ ಟ್ಯಾಕ್ಲಿಂಗ್‌ನಲ್ಲಿ ಆದ ವೈಫಲ್ಯಗಳಿಂದಾಗಿ ತಂಡ ಸೋಲಿನ ಬಲೆಯಲ್ಲಿ ಸಿಲುಕಿತು.

ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳೂ ಧಾರಾಳ ಪಾಯಿಂಟ್‌ಗಳನ್ನು ಕಲೆ ಹಾಕಿದವು. ಮೂರು ಪಾಯಿಂಟ್‌ಗಳೊಂದಿಗೆ ಪ್ರದೀಪ್ ನರ್ವಾಲ್‌ ಮೊದಲ ರೇಡ್‌ನಲ್ಲೇ ಮಿಂಚಿದರು. ಅಸ್ಲಾಂ ಮತ್ತು ಮೋಹಿತ್‌ ಅವರ ಸಾಧನೆಯಿಂದಾಗಿ ಯುಪಿ ಯೋದ್ಧಾ ಆಲೌಟಾಯಿತು. ಮೊದಲಾರ್ಧ 20-20ರಲ್ಲಿ ಸಮ ಆಯಿತು. ಆದರೆ ದ್ವಿತೀಯಾರ್ಧದಲ್ಲಿ ಯೋದ್ಧಾ ಭರ್ಜರಿ ಆಟವಾಡಿ 30 ಪಾಯಿಂಟ್ ಕಲೆ ಹಾಕಿತು. ಯುಪಿ ಯೋದ್ಧಾ ತಂಡ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಏರಿದೆ. ಪುಣೇರಿ ಪಲ್ಟನ್ 10ನೇ ಸ್ಥಾನದಲ್ಲಿ ಮುಂದುವರಿದಿದೆ.

IPL 2022: ಹರಾಜಿಗೂ ಮುನ್ನ ಅಹಮದಾಬಾದ್ ತಂಡ ಸೇರಲಿದ್ದಾರೆ ಕೆಕೆಆರ್​ನ ಸ್ಟಾರ್ ಬ್ಯಾಟರ್! ಯಾರು ಗೊತ್ತಾ?

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?