AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina Patel: ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina Patel
TV9 Web
| Edited By: |

Updated on: Aug 27, 2021 | 8:27 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ನಲ್ಲಿ ಭಾರತ ಆರಂಭದಲ್ಲಿ ಹಿನ್ನಡೆ ಅನುಭವಿಸಿತಾದರೂ ನಂತರದಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡುತ್ತಿದೆ. ಇಂದು ಮೂರನೇ ದಿನ ಭಾರತಕ್ಕೆ ಮತ್ತೊಂದು ಗೆಲುವು ಸಿಕ್ಕಿದ್ದು ಮಹಿಳಾ ಸಿಂಗಲ್ಸ್​ನಲ್ಲಿ ಟೆಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ (BhavinaPatel) ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾವಿನಾ ಎದುರಾಳಿಗೆ ಒಂದು ಸೆಟ್​ನಲ್ಲೂ ಗೆಲ್ಲಲು ಅವಕಾಶ ಕೊಡಲಿಲ್ಲ.

ಮೊದಲ ಸುತ್ತಿನಲ್ಲಿ ಭಾವಿನಾ 12-10 ಅಂಕಗಳ ಮುನ್ನಡೆ ಸಾಧಿಸಿದರೆ ಎರಡನೇ ಸೆಟ್​ನಲ್ಲಿ 13-11 ಮತ್ತು ಅಂತಿಮ ಸೆಟ್​ನಲ್ಲಿ 11-6 ಮುನ್ನಡೆ ಸಾಧಿಸಿ 3-0 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಇಂದು ಮಧ್ಯಾಹ್ನ 3:50ಕ್ಕೆ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ.

ಪ್ಯಾರಾಲಿಂಪಿಕ್ಸ್​ನ ಮೊದಲ ದಿನ ನಡೆದ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಅವರು ಚೀನಾದ ಝೌ ಯಿಂಗ್ ವಿರುದ್ಧ 3-0 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದ್ದರು. ನಂತರ ನಡೆದ ಎರಡನೇ ಗುಂಪಿನ ಎ ಪಂದ್ಯದಲ್ಲಿ ಭಾವಿನಾ ಗ್ರೇಟ್ ಬ್ರಿಟನ್​ನ ಮೆಗನ್ ಶಾಕ್ಲೆಟನ್ ವಿರುದ್ಧ 3-1 ಅಂತರದಿಂದ ಗೆದ್ದು ಬೀಗಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟಿದ್ದರು.

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್