AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina Patel: ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina Patel
TV9 Web
| Edited By: |

Updated on: Aug 27, 2021 | 8:27 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ನಲ್ಲಿ ಭಾರತ ಆರಂಭದಲ್ಲಿ ಹಿನ್ನಡೆ ಅನುಭವಿಸಿತಾದರೂ ನಂತರದಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡುತ್ತಿದೆ. ಇಂದು ಮೂರನೇ ದಿನ ಭಾರತಕ್ಕೆ ಮತ್ತೊಂದು ಗೆಲುವು ಸಿಕ್ಕಿದ್ದು ಮಹಿಳಾ ಸಿಂಗಲ್ಸ್​ನಲ್ಲಿ ಟೆಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ (BhavinaPatel) ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾವಿನಾ ಎದುರಾಳಿಗೆ ಒಂದು ಸೆಟ್​ನಲ್ಲೂ ಗೆಲ್ಲಲು ಅವಕಾಶ ಕೊಡಲಿಲ್ಲ.

ಮೊದಲ ಸುತ್ತಿನಲ್ಲಿ ಭಾವಿನಾ 12-10 ಅಂಕಗಳ ಮುನ್ನಡೆ ಸಾಧಿಸಿದರೆ ಎರಡನೇ ಸೆಟ್​ನಲ್ಲಿ 13-11 ಮತ್ತು ಅಂತಿಮ ಸೆಟ್​ನಲ್ಲಿ 11-6 ಮುನ್ನಡೆ ಸಾಧಿಸಿ 3-0 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಇಂದು ಮಧ್ಯಾಹ್ನ 3:50ಕ್ಕೆ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ.

ಪ್ಯಾರಾಲಿಂಪಿಕ್ಸ್​ನ ಮೊದಲ ದಿನ ನಡೆದ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಅವರು ಚೀನಾದ ಝೌ ಯಿಂಗ್ ವಿರುದ್ಧ 3-0 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದ್ದರು. ನಂತರ ನಡೆದ ಎರಡನೇ ಗುಂಪಿನ ಎ ಪಂದ್ಯದಲ್ಲಿ ಭಾವಿನಾ ಗ್ರೇಟ್ ಬ್ರಿಟನ್​ನ ಮೆಗನ್ ಶಾಕ್ಲೆಟನ್ ವಿರುದ್ಧ 3-1 ಅಂತರದಿಂದ ಗೆದ್ದು ಬೀಗಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟಿದ್ದರು.

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ