Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina Patel: ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina Patel
Follow us
| Updated By: Vinay Bhat

Updated on: Aug 27, 2021 | 8:27 AM

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ನಲ್ಲಿ ಭಾರತ ಆರಂಭದಲ್ಲಿ ಹಿನ್ನಡೆ ಅನುಭವಿಸಿತಾದರೂ ನಂತರದಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡುತ್ತಿದೆ. ಇಂದು ಮೂರನೇ ದಿನ ಭಾರತಕ್ಕೆ ಮತ್ತೊಂದು ಗೆಲುವು ಸಿಕ್ಕಿದ್ದು ಮಹಿಳಾ ಸಿಂಗಲ್ಸ್​ನಲ್ಲಿ ಟೆಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ (BhavinaPatel) ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾವಿನಾ ಎದುರಾಳಿಗೆ ಒಂದು ಸೆಟ್​ನಲ್ಲೂ ಗೆಲ್ಲಲು ಅವಕಾಶ ಕೊಡಲಿಲ್ಲ.

ಮೊದಲ ಸುತ್ತಿನಲ್ಲಿ ಭಾವಿನಾ 12-10 ಅಂಕಗಳ ಮುನ್ನಡೆ ಸಾಧಿಸಿದರೆ ಎರಡನೇ ಸೆಟ್​ನಲ್ಲಿ 13-11 ಮತ್ತು ಅಂತಿಮ ಸೆಟ್​ನಲ್ಲಿ 11-6 ಮುನ್ನಡೆ ಸಾಧಿಸಿ 3-0 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಇಂದು ಮಧ್ಯಾಹ್ನ 3:50ಕ್ಕೆ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ.

ಪ್ಯಾರಾಲಿಂಪಿಕ್ಸ್​ನ ಮೊದಲ ದಿನ ನಡೆದ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಅವರು ಚೀನಾದ ಝೌ ಯಿಂಗ್ ವಿರುದ್ಧ 3-0 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದ್ದರು. ನಂತರ ನಡೆದ ಎರಡನೇ ಗುಂಪಿನ ಎ ಪಂದ್ಯದಲ್ಲಿ ಭಾವಿನಾ ಗ್ರೇಟ್ ಬ್ರಿಟನ್​ನ ಮೆಗನ್ ಶಾಕ್ಲೆಟನ್ ವಿರುದ್ಧ 3-1 ಅಂತರದಿಂದ ಗೆದ್ದು ಬೀಗಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ