AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avani Lekhara: ಚಿನ್ನದ ಹುಡುಗಿ ಅವನಿಗೆ 3 ಕೋಟಿ ಬಹುಮಾನ ಘೋಷಣೆ; ಮಹೀಂದ್ರಾದಿಂದ ವಿಶೇಷ ಉಡುಗೊರೆ

Tokyo Paralympics 2020: ಭಾರತೀಯ ಶೂಟರ್ ಅವನಿ ಲೇಖರಾ ಸೋಮವಾರ ನಡೆದ ಮಹಿಳಾ ಆರ್2 - 10 ಮೀ. ಏರ್ ರೈಫಲ್ ಸ್ಟ್ಯಾಂಡ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು.

Avani Lekhara: ಚಿನ್ನದ ಹುಡುಗಿ ಅವನಿಗೆ 3 ಕೋಟಿ ಬಹುಮಾನ ಘೋಷಣೆ; ಮಹೀಂದ್ರಾದಿಂದ ವಿಶೇಷ ಉಡುಗೊರೆ
Avani Lekhara
TV9 Web
| Edited By: |

Updated on: Aug 31, 2021 | 7:09 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ (Tokyo Paralympics) ಚಿನ್ನದ ಪದಕ ಗೆಲ್ಲುವ ಮೂಲಕ ಅವನಿ ಲೇಖರಾ (Avani Lekhara) ಹೊಸ ದಾಖಲೆ ಬರೆದಿದ್ದಾರೆ. ಏರ್​ ರೈಫಲ್​ ಸ್ಟ್ಯಾಂಡಿಂಗ್​ ಎಸ್​ಎಚ್​1 (Air Rifle Standing SH1) ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿರುವ ಇವರ ಸಾಧನೆಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಇದರ ನಡುವೆ ಮಹೀಂದ್ರಾ ಗ್ರೂಪ್​ ಚೇರ್​ಮನ್​​​ ಆನಂದ್​ ಮಹೀಂದ್ರಾ ಅವನಿ ಲೇಖಾರಾಗೆ ಮೊದಲ ಕಸ್ಟಮೈಸಡ್​​ ಎಸ್​ಯುವಿ ನೀಡೋದಾಗಿ ಟ್ವಿಟರ್​ನಲ್ಲಿ ಘೋಷಣೆ ಮಾಡಿದ್ದಾರೆ.

ಈ ರೀತಿಯ ವಾಹನವನ್ನು ನಿರ್ಮಾಣ ಮಾಡುವ ಪರಿಕಲ್ಪನೆಯನ್ನು ಭಾರತದ ಪ್ಯಾರಾಲಿಂಪಿಕ್​ ಕಮಿಟಿಯ ಅಧ್ಯಕ್ಷೆ ದೀಪಾ ಮಲಿಕ್​ ನೀಡಿದ್ದಾರೆ ಎಂದು ಹೇಳಿರುವ ಆನಂದ್, ಈ ವಿಶೇಷ ಕಾರು ದಿವ್ಯಾಂಗರು ಕೂಡ ಅನಾಯಾಸವಾಗಿ ರಸ್ತೆಯಲ್ಲಿ ಡ್ರೈವ್​ ಮಾಡಿಕೊಂಡು ಹೋಗುವ ರೀತಿಯಲ್ಲಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಟೋಕಿಯೋ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ಚಿನ್ನದ ಪದಕ ವಿಜೇತರಿಗೆ 3 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ರೂ. ಹಾಗೂ ಕಂಚು ಪದಕ ವಿಜೇತರಿಗೆ 1 ಕೋಟಿ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಚಿನ್ನದ ಪದಕ ಗೆದ್ದಿದ್ದಕ್ಕೆ ಅವನಿ ಲೇಖರಾಗೆ 3 ಕೋಟಿ ಬಹುಮಾನ, ಬೆಳ್ಳಿ ಗೆದ್ದಿರುವ ದೇವೇಂದ್ರ ಜಜಾರಿಯಾ ಅವರಿಗೆ 2 ಕೋಟಿ ಹಾಗೂ ಕಂಚಿನ ಪದಕ ಗೆದ್ದಿರುವ ಸುಂದರ್ ಸಿಂಗ್ ಅವರಿಗೆ 1 ಕೋಟಿ ಬಹುಮಾನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಭಾರತೀಯ ಶೂಟರ್ ಅವನಿ ಲೇಖರಾ ಸೋಮವಾರ ನಡೆದ ಮಹಿಳಾ ಆರ್2 – 10 ಮೀ. ಏರ್ ರೈಫಲ್ ಸ್ಟ್ಯಾಂಡ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. 19 ವರ್ಷದ ಅವನಿ, ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

IND vs ENG: 4ನೇ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಯಾದವ್ ಆಡುವುದಿಲ್ಲ! ಅಶ್ವಿನ್​ಗೆ ಅವಕಾಶ ಖಚಿತ; ಆಕಾಶವಾಣಿ

Tokyo Paralympics: 8 ನೇ ವಯಸ್ಸಿಗೆ ಪಾರ್ಶ್ವವಾಯು.. ಕೋಚ್ ಇಲ್ಲದೆ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಗೆದ್ದ ಯೋಗೀಶ್ ಜೀವನಗಾಥೆಯಿದು

(Tokyo Paralympics 2020 Anand Mahindras Gift For Avani Lekhara As She Wins Historic Gold At Tokyo Paralympics)

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ