AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚೊಚ್ಚಲ ಪದಕ: ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ

Bhavina Patel: ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 3-4 ಅಂಕಗಳ ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚೊಚ್ಚಲ ಪದಕ: ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ
Bhavina Patel
TV9 Web
| Edited By: |

Updated on:Aug 29, 2021 | 8:19 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್ 2020 (Tokyo Paralympics 2020) ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕ ದಕ್ಕಿದೆ. ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ (Bhavina Patel) ಅವರು ಬೆಳ್ಳೆ ಪದಕಕ್ಕೆ ಕೊರಳೊಡ್ಡಿದ್ದಾರೆ. ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್​ನ ಟೇಬಲ್ ಟೆನಿಸ್​ನಲ್ಲಿ ಭಾರತ ಈವರೆಗೆ ಫೈನಲ್​ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಫೈನಲ್​ಗೆ ತಲುಪಿ ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆಯಾಗಿದೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಮೊದಲ ಪಂದ್ಯ 11-7 ಪಾಯಿಂಟ್​ನಿಂದ ಭಾರತ ಕಳೆದುಕೊಂಡಿತು. ಎರಡನೇ ಸೆಟ್​ನಲ್ಲೂ ಝೋ ಯಿಂಗ್ ಗೆಲುವು ಸಾಧಿಸಿ 2-0 ಯಿಂದ ಮುನ್ನಡೆ ಪಡೆದುಕೊಂಡರು. ಮೂರನೇ ಸೆಟ್​ನಲ್ಲೂ ಭಾರತಕ್ಕೆ ಕಮ್​ಬ್ಯಾಕ್ ಮಾಡಲು ಸಾಧ್ಯವಾಗಲಿಲ್ಲ.

ಅಂತಿಮವಾಗಿ ಚೀನಾದ ಝೋ ಯಿಂಗ್ -3-0 ಅಂತರದಿಂದ ಗೆದ್ದು ಚಿನ್ನದ ಪದಕ ತಮ್ಮದಾಗಿಸಿದರು. ಭಾವಿನಾ ಬೆಳ್ಳಿಗೆ ತೃಪ್ತಿಪಡಬೇಕಾಯಿತು.

ಇದಕ್ಕೂ ಮುನ್ನ ಶನಿವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾವಿನಾ ಅವರು 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಫೈನಲ್​ಗೆ ಪ್ರವೇಶಿಸಿದ್ದರು. ಮೊದಲ ಸೆಟ್​ನಲ್ಲಿ ಭಾವಿನಾ 7-11ರ ಹಿನ್ನಡೆ ಅನುಭವಿಸಿದರೆ, ನಂತರ ಭರ್ಜರಿ ಕಮ್​ಬ್ಯಾಕ್ ಮಾಡಿದರು. ಎರಡನೇ ಸೆಟ್​ನಲ್ಲಿ 11-7, 11-4, 9-11 ಮತ್ತು ಅಂತಿಮ ಸೆಟ್​ನಲ್ಲಿ 11-8 ಅಂತರದಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದರು.

ತನ್ನ 12ನೇ ವಯಸ್ಸಿನಲ್ಲಿ ಪೋಲಿಯೊ ಪತ್ತೆಯಾದ 34 ರ ಹರೆಯದ ಭಾವಿನಾ ಪಂದ್ಯ ಮುಗಿದ ಬಳಿಕ ಮಾತನಾಡಿದ್ದು, “ನಾನು ನನ್ನನ್ನು ಅಂಗವಿಕಲೆ ಎಂದು ಪರಿಗಣಿಸುವುದಿಲ್ಲ, ನಾನು ಏನು ಬೇಕಾದರೂ ಮಾಡಬಲ್ಲೆ ಎಂದು ನನಗೆ ಯಾವಾಗಲೂ ವಿಶ್ವಾಸವಿದೆ. ನಾವು ಹಿಂದೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದೇನೆ. ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ” ಎಂದು ಹೇಳಿದ್ದಾರೆ.

Published On - 7:52 am, Sun, 29 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ