AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಟೇಬಲ್ ಟೆನಿಸ್​ನಲ್ಲಿ ಐತಿಹಾಸಿಕ ಸಾಧನೆ: ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina patel: ಈ ಮೂಲಕ ಭಾವಿನಾ ಐತಿಹಾಸಿಕ ದಾಖಲೆ ಮಾಡಿದ್ದು, ಪ್ಯಾರಾಲಿಂಪಿಕ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಮೊಟ್ಟ ಮೊದಲ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಸಾಧನೆ ಮಾಡಿದ್ದಾರೆ.

Tokyo Paralympics: ಟೇಬಲ್ ಟೆನಿಸ್​ನಲ್ಲಿ ಐತಿಹಾಸಿಕ ಸಾಧನೆ: ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina
Follow us
TV9 Web
| Updated By: Vinay Bhat

Updated on:Aug 28, 2021 | 7:19 AM

ಟೋಕಿಯೊ ಪ್ಯಾರಾಲಿಂಪಿಕ್ಸ್ -2020 (Tokyo Paralympics 2020) ರಲ್ಲಿ ಭಾಗವಹಿಸುತ್ತಿರುವ ಭಾರತೀಯ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಐತಿಹಾಸಿಕ ದಾಖಲೆ ಮಾಡಿದ್ದಾರೆ. ಕ್ಲಾಸ್ -4 ರ ಕ್ವಾರ್ಟರ್ ಫೈನಲ್​ನಲ್ಲಿ ಗೆದ್ದು ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದ್ದ ಭಾವಿನಾ ಸದ್ಯ ಸೆಮೀಸ್​ನಲ್ಲಿ ರೋಚಕ ಗೆಲುವು ದಾಖಲಿಸಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ. ಮೊದಲ ಸೆಟ್​ನಲ್ಲಿ ಭಾವಿನಾ 7-11ರ ಹಿನ್ನಡೆ ಅನುಭವಿಸಿದರೆ, ನಂತರ ಭರ್ಜರಿ ಕಮ್​ಬ್ಯಾಕ್ ಮಾಡಿದರು. ಎರಡನೇ ಸೆಟ್​ನಲ್ಲಿ 11-7, 11-4, 9-11 ಮತ್ತು ಅಂತಿಮ ಸೆಟ್​ನಲ್ಲಿ 11-8 ಅಂತರದಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದ್ದಾರೆ.

ಈ ಮೂಲಕ ಭಾವಿನಾ ಐತಿಹಾಸಿಕ ದಾಖಲೆ ಮಾಡಿದ್ದು, ಪ್ಯಾರಾಲಿಂಪಿಕ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಮೊಟ್ಟ ಮೊದಲ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಕ್ಲಾಸ್ -4 ರ ಕ್ವಾರ್ಟರ್ ಫೈನಲ್​ನಲ್ಲಿ ಗೆಲುವು ಸಾಧಿಸುವ ಮೂಲಕ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದ್ದ ಭಾವಿನಾ ಸರ್ಬಿಯಾದ ರಾಕೋವಿಕ್ ಅವರನ್ನು 3-0 ಅಂತರದಿಂದ ಸೋಲಿಸಿ ಗೆದ್ದರು. ಭಾವಿನಾ ಈ ಪಂದ್ಯವನ್ನು 11-5, 11-6, 11-7 ರಿಂದ ವಶಪಡಿಸಿಕೊಂಡರು.

ನಿನ್ನೆ ಮುಂಜಾನೆ ಭಾವಿನಾ ಬ್ರೆಜಿಲ್‌ನ ಒಲಿವೇರಾ ಅವರನ್ನು 16 ನೇ ಸುತ್ತಿನ ಪಂದ್ಯದ 20 ನೇ ಪಂದ್ಯದಲ್ಲಿ ಸೋಲಿಸಿದರು. ಭಾವಿನಾ ಮೊದಲ ಗೇಮ್ ಅನ್ನು 12-10, ಎರಡನೇ ಗೇಮ್ ಅನ್ನು 13-11 ಮತ್ತು ಮೂರನೇ ಗೇಮ್ ಅನ್ನು 11-6ರಿಂದ ಗೆದ್ದರು. ಈ ಸೆಮಿ ಫೈನಲ್ ಗೆಲುವಿನೊಂದಿಗೆ ಭಾವಿನಾ ಪಟೇಲ್ ದೇಶಕ್ಕಾಗಿ ಪದಕ ಗೆಲ್ಲಲು ಒಂದು ಹೆಜ್ಜೆ ಇದೆಯಷ್ಟೆ. ಒಳ್ಳೆಯ ವಿಷಯವೆಂದರೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾವಿನಾ ಅವರ ಫಾರ್ಮ್ ಉತ್ತಮವಾಗಿ ಕಾಣುತ್ತಿದೆ.

Published On - 7:12 am, Sat, 28 August 21

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?