AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಟೇಬಲ್ ಟೆನಿಸ್​ನಲ್ಲಿ ಐತಿಹಾಸಿಕ ಸಾಧನೆ: ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina patel: ಈ ಮೂಲಕ ಭಾವಿನಾ ಐತಿಹಾಸಿಕ ದಾಖಲೆ ಮಾಡಿದ್ದು, ಪ್ಯಾರಾಲಿಂಪಿಕ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಮೊಟ್ಟ ಮೊದಲ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಸಾಧನೆ ಮಾಡಿದ್ದಾರೆ.

Tokyo Paralympics: ಟೇಬಲ್ ಟೆನಿಸ್​ನಲ್ಲಿ ಐತಿಹಾಸಿಕ ಸಾಧನೆ: ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina
TV9 Web
| Edited By: |

Updated on:Aug 28, 2021 | 7:19 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್ -2020 (Tokyo Paralympics 2020) ರಲ್ಲಿ ಭಾಗವಹಿಸುತ್ತಿರುವ ಭಾರತೀಯ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಐತಿಹಾಸಿಕ ದಾಖಲೆ ಮಾಡಿದ್ದಾರೆ. ಕ್ಲಾಸ್ -4 ರ ಕ್ವಾರ್ಟರ್ ಫೈನಲ್​ನಲ್ಲಿ ಗೆದ್ದು ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದ್ದ ಭಾವಿನಾ ಸದ್ಯ ಸೆಮೀಸ್​ನಲ್ಲಿ ರೋಚಕ ಗೆಲುವು ದಾಖಲಿಸಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ. ಮೊದಲ ಸೆಟ್​ನಲ್ಲಿ ಭಾವಿನಾ 7-11ರ ಹಿನ್ನಡೆ ಅನುಭವಿಸಿದರೆ, ನಂತರ ಭರ್ಜರಿ ಕಮ್​ಬ್ಯಾಕ್ ಮಾಡಿದರು. ಎರಡನೇ ಸೆಟ್​ನಲ್ಲಿ 11-7, 11-4, 9-11 ಮತ್ತು ಅಂತಿಮ ಸೆಟ್​ನಲ್ಲಿ 11-8 ಅಂತರದಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದ್ದಾರೆ.

ಈ ಮೂಲಕ ಭಾವಿನಾ ಐತಿಹಾಸಿಕ ದಾಖಲೆ ಮಾಡಿದ್ದು, ಪ್ಯಾರಾಲಿಂಪಿಕ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಮೊಟ್ಟ ಮೊದಲ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಕ್ಲಾಸ್ -4 ರ ಕ್ವಾರ್ಟರ್ ಫೈನಲ್​ನಲ್ಲಿ ಗೆಲುವು ಸಾಧಿಸುವ ಮೂಲಕ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದ್ದ ಭಾವಿನಾ ಸರ್ಬಿಯಾದ ರಾಕೋವಿಕ್ ಅವರನ್ನು 3-0 ಅಂತರದಿಂದ ಸೋಲಿಸಿ ಗೆದ್ದರು. ಭಾವಿನಾ ಈ ಪಂದ್ಯವನ್ನು 11-5, 11-6, 11-7 ರಿಂದ ವಶಪಡಿಸಿಕೊಂಡರು.

ನಿನ್ನೆ ಮುಂಜಾನೆ ಭಾವಿನಾ ಬ್ರೆಜಿಲ್‌ನ ಒಲಿವೇರಾ ಅವರನ್ನು 16 ನೇ ಸುತ್ತಿನ ಪಂದ್ಯದ 20 ನೇ ಪಂದ್ಯದಲ್ಲಿ ಸೋಲಿಸಿದರು. ಭಾವಿನಾ ಮೊದಲ ಗೇಮ್ ಅನ್ನು 12-10, ಎರಡನೇ ಗೇಮ್ ಅನ್ನು 13-11 ಮತ್ತು ಮೂರನೇ ಗೇಮ್ ಅನ್ನು 11-6ರಿಂದ ಗೆದ್ದರು. ಈ ಸೆಮಿ ಫೈನಲ್ ಗೆಲುವಿನೊಂದಿಗೆ ಭಾವಿನಾ ಪಟೇಲ್ ದೇಶಕ್ಕಾಗಿ ಪದಕ ಗೆಲ್ಲಲು ಒಂದು ಹೆಜ್ಜೆ ಇದೆಯಷ್ಟೆ. ಒಳ್ಳೆಯ ವಿಷಯವೆಂದರೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾವಿನಾ ಅವರ ಫಾರ್ಮ್ ಉತ್ತಮವಾಗಿ ಕಾಣುತ್ತಿದೆ.

Published On - 7:12 am, Sat, 28 August 21

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ