AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್ 2020ರಲ್ಲಿ ಎರಡನೇ ಪದಕ ಗೆದ್ದ ಚಿನ್ನದ ಹುಡುಗಿ ಅವನಿ: ಶೂಟಿಂಗ್​ನಲ್ಲಿ ಕಂಚು

Avani Lekhara: ಅವನಿ ಮಹಿಳೆಯರ 50 ಮೀಟರ್​ನ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 12ಕ್ಕೆ ಏರಿಕೆಯಾಗಿದೆ.

Tokyo Paralympics: ಪ್ಯಾರಾಲಿಂಪಿಕ್ಸ್ 2020ರಲ್ಲಿ ಎರಡನೇ ಪದಕ ಗೆದ್ದ ಚಿನ್ನದ ಹುಡುಗಿ ಅವನಿ: ಶೂಟಿಂಗ್​ನಲ್ಲಿ ಕಂಚು
Avani Lekhara
TV9 Web
| Updated By: Vinay Bhat|

Updated on:Sep 03, 2021 | 11:16 AM

Share

ಟೋಕಿಯೊ ಪ್ಯಾರಾಲಿಂಪಿಕ್ 2020ರಲ್ಲಿ (Tokyo Paralympics 2020) ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಅವನಿ ಲೆಕೇರಾ ಈಗ ಮತ್ತೊಂದು ಪದಕಕ್ಕೆ ಮುತ್ತಿಕ್ಕಿದ್ದಾರೆ. ಮಹಿಳೆಯರ 50 ಮೀಟರ್​ನ ರೈಫಲ್ 3 ಪೊಸಿಶನ್ಸ್ ಎಸ್ ಎಚ್ 1ರ ವಿಭಾಗದ ಶೂಟಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿದ್ದಾರೆ. ಅವನಿ ಶೂಟಿಂಗ್​ನ​ ಈ ಫೈನಲ್​ ಪಂದ್ಯದಲ್ಲಿ 415 ಸ್ಕೋರ್ ಮಾಡಿದರು. ಇದಕ್ಕೂ ಮುನ್ನ ಇವರು 10 ಮೀಟರ್​ನ ಏರ್​ ರೈಫಲ್ ಶೂಟಿಂಗ್​ನಲ್ಲಿ ​249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿ ಚಿನ್ನ ಗೆದ್ದಿದ್ದರು.

ಈ ಮೂಲಕ 19ರ ಹರೆಯದ ಜೈಪುರದ ಅವನಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಸಾಧನೆ ಮಾಡಿದ್ದಾರೆ.

ಇಂದು ಭಾರತಕ್ಕೆ ಶುಭ ಶುಕ್ರವಾರ ಎಂದೇ ಹೇಳಬಹುದು. ಆರಂಭದಲ್ಲಿ ಪುರುಷರ ಹೈ ಜಂಪ್ ಟಿ64 ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಪ್ರವೀಣ್ ಅವರು ಹೈ ಜಂಪ್​ನಲ್ಲಿ 2.07 ಮೀಟರ್ ಜಿಗಿದು ಏಷ್ಯಾದಲ್ಲೇ ಹೊಸ ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಅವನಿ ಮಹಿಳೆಯರ 50 ಮೀಟರ್​ನ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 12ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 4 ಕಂಚಿನ ಪದಕಗಳಿವೆ.

Published On - 11:05 am, Fri, 3 September 21

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು