AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಭಾರತಕ್ಕೆ ಪದಕಗಳ ಸುರಿಮಳೆ: ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ದೇವೇಂದ್ರ

Devendra Jhajharia: ಪುರುಷರ ಜಾವೆಲಿನ್ ಥ್ರೋನ ಥ್ರೋನ ಎಫ್ 46 ಫೈನಲ್​ ವಿಭಾಗದಲ್ಲಿ ದೇವೇಂದ್ರ 64.35 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

Tokyo Paralympics: ಭಾರತಕ್ಕೆ ಪದಕಗಳ ಸುರಿಮಳೆ: ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ದೇವೇಂದ್ರ
Devendra Jhajharia
TV9 Web
| Edited By: |

Updated on:Aug 30, 2021 | 9:18 AM

Share

ಟೋಕಿಯೊ ಪ್ಯಾರಾಲಿಂಪಿಕ್​ನಲ್ಲಿ ಭಾರತ ಪದಕಗಳ ಬೇಟೆ ಭರ್ಜರಿಯಾಗಿ ನಡೆಯುತ್ತಿದೆ. ಸೋಮವಾರದ ಆರಂಭದಲ್ಲೇ ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ ನಂತರದಲ್ಲಿ ಪುರುಷರ ಡಿಸ್ಕಸ್ ಥ್ರೋನ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳೆ ಪದಕಕ್ಕೆ ಮುತ್ತಿಕ್ಕಿದರು. ಸದ್ಯ ಜಾವೆಲಿನ್ ಥ್ರೋ ಸ್ಫರ್ಧೆಯಲ್ಲಿ ದೇವೇಂದ್ರ ಜಜರಿಯಾ ಫೈನಲ್​ನಲ್ಲಿ ಗೆದ್ದು ಬೆಳ್ಳಿ ಪದಕ ತಮ್ಮದಾಗಿಸಿದ್ದಾರೆ. 

ಪುರುಷರ ಜಾವೆಲಿನ್ ಥ್ರೋನ ಥ್ರೋನ ಎಫ್ 46 ಫೈನಲ್​ ವಿಭಾಗದಲ್ಲಿ ದೇವೇಂದ್ರ 64.35 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿಗೆ ಮುತ್ತಿಕ್ಕಿದ್ದಾರೆ. ಇದರ ಜೊತೆಗೆ ಸುಂದರ್ ಸಿಂಗ್ ಗುರ್ಜರ್ 64.01 ಮೀಟರ್ ದೂರ ಜಾವೆಲಿನ್ ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್​ ಸುತ್ತಿನಲ್ಲಿ ಲಂಕಾದ ದಿನೇಶ್​ ಪ್ರಿಯನ್, ದೇವೆಂದ್ರ, ಸುಂದರ್ ಸಿಂಗ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದ್ರೆ, ಲಂಕಾದ ದಿನೇಶ್​ ಪ್ರಿಯನ್ 67.79 ಮೀಟರ್​ನೊಂದಿಗೆ ಮೊದಲ ಸ್ಥಾನ ಕಾಯ್ದುಕೊಂಡರೆ, 64.35 ಮೀಟರ್ ದೂರ ಎಸೆದ ದೇವೇಂದ್ರ 2ನೇ ಸ್ಥಾನಕ್ಕೆ ತೃಪ್ತಿಪಟ್ಟರು, ಇನ್ನೂ 64.01 ಮೀಟರ್​ ದೂರ ಎಸೆದಿದ್ದ ಸುಂದರ್ ಗುರ್ಜರ್​ ಸಿಂಗ್ 3ನೇ ಸ್ಥಾನ ಕಾಯ್ದುಕೊಂಡು ಕಂಚಿಗೆ ತೃಪ್ತಿಪಟ್ಟರು. ಇವರ ಬೆಳ್ಳಿಯ ಪದಕದೊಂದಿಗೆ ಭಾರತ ಈ ವರೆಗೆ 1 ಚಿನ್ನ, 4 ಬೆಳ್ಳಿ ಮತ್ತು 2 ಕಂಚಿನ ಪದಕದೊಂದಿಗೆ ಒಟ್ಟು 7 ಪದಕ ಗೆದ್ದಂತಾಗಿದೆ.

Published On - 9:01 am, Mon, 30 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?