AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ

ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಜಿದ್ದು, P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ
manish narwal
TV9 Web
| Edited By: |

Updated on:Sep 04, 2021 | 9:43 AM

Share

ಟೋಕಿಯೊದಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ (Tokyo Paralympics) ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಇಂದು ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಜಿದ್ದು, P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

19 ವರ್ಷ ಪ್ರಾಯದ ಮನೀಶ್ ವಿಶ್ವ ದಾಖಲೆಯ 218.2 ಪಾಯಿಂಟ್​ನೊಂದಿಗೆ ಚಿನ್ನದ ಪದಕ ಗೆದ್ದರು. ಸಿಂಗ್​ರಾಜ್ 216.7 ಪಾಯಿಂಟ್​ನೊಂದಿಗೆ ಎರಡನೇ ಸ್ಥಾನ ಪಡೆದು ಬೆಳ್ಳಿ ತಮ್ಮದಾಗಿಸಿದರು. ಪ್ಯಾರಾಲಿಂಪಿಕ್ಸ್ 2020 ರಲ್ಲಿ ಇದು ಸಿಂಗ್​ರಾಜ್​ಗೆ ಸಿಗುತ್ತಿರುವ ಎರಡನೇ ಪದಕವಾಗಿದೆ. ಭಾರತೀಯರಿಗೆ ಪ್ರಬಲ ಪೈಪೋಟಿ ನೀಡಿದ್ದ ರಷ್ಯಾದ ಶೂಟರ್​ ಸೆರ್ಗೆ, 196.8 ಅಂಕ ಗಳಿಸುವುದರೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್​ನಲ್ಲಿ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ 533-7x ಮತ್ತು ಸಿಂಗರಾಜ್ 536-4x ಅಂಕಗಳೊಂದಿಗೆ ಫೈನಲ್ ಗೇರಿದ್ದರು. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳಿವೆ.

ಇತ್ತ ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಪುರುಷರ ಸಿಂಗಲ್ಸ್ ಎಸ್ ಎಲ್ 3 ಸೆಮಿ ಫೈನಲ್ ಪಂದ್ಯದಲ್ಲಿ ಪ್ರಮೋದ ಭಗತ್ ಜಪಾನ್ ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದರು. ಬ್ಯಾಡ್ಮಿಂಟನ್ ನಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಪಾದಾರ್ಪಣೆ ಮಾಡುತ್ತಿರುವುದರಿಂದ, ಭಗತ್ ಈಗಾಗಲೇ ಫೈನಲ್ ಹೆಜ್ಜೆ ಇಟ್ಟಿರುವುದರಿಂದ ದೇಶಕ್ಕೆ ಬೆಳ್ಳಿ ಪದಕದ ಭರವಸೆ ನೀಡಿದ್ದಾರೆ.

Published On - 9:21 am, Sat, 4 September 21

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ