AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ

ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಜಿದ್ದು, P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ
manish narwal
TV9 Web
| Edited By: |

Updated on:Sep 04, 2021 | 9:43 AM

Share

ಟೋಕಿಯೊದಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ (Tokyo Paralympics) ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಇಂದು ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಜಿದ್ದು, P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

19 ವರ್ಷ ಪ್ರಾಯದ ಮನೀಶ್ ವಿಶ್ವ ದಾಖಲೆಯ 218.2 ಪಾಯಿಂಟ್​ನೊಂದಿಗೆ ಚಿನ್ನದ ಪದಕ ಗೆದ್ದರು. ಸಿಂಗ್​ರಾಜ್ 216.7 ಪಾಯಿಂಟ್​ನೊಂದಿಗೆ ಎರಡನೇ ಸ್ಥಾನ ಪಡೆದು ಬೆಳ್ಳಿ ತಮ್ಮದಾಗಿಸಿದರು. ಪ್ಯಾರಾಲಿಂಪಿಕ್ಸ್ 2020 ರಲ್ಲಿ ಇದು ಸಿಂಗ್​ರಾಜ್​ಗೆ ಸಿಗುತ್ತಿರುವ ಎರಡನೇ ಪದಕವಾಗಿದೆ. ಭಾರತೀಯರಿಗೆ ಪ್ರಬಲ ಪೈಪೋಟಿ ನೀಡಿದ್ದ ರಷ್ಯಾದ ಶೂಟರ್​ ಸೆರ್ಗೆ, 196.8 ಅಂಕ ಗಳಿಸುವುದರೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್​ನಲ್ಲಿ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ 533-7x ಮತ್ತು ಸಿಂಗರಾಜ್ 536-4x ಅಂಕಗಳೊಂದಿಗೆ ಫೈನಲ್ ಗೇರಿದ್ದರು. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳಿವೆ.

ಇತ್ತ ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಪುರುಷರ ಸಿಂಗಲ್ಸ್ ಎಸ್ ಎಲ್ 3 ಸೆಮಿ ಫೈನಲ್ ಪಂದ್ಯದಲ್ಲಿ ಪ್ರಮೋದ ಭಗತ್ ಜಪಾನ್ ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದರು. ಬ್ಯಾಡ್ಮಿಂಟನ್ ನಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಪಾದಾರ್ಪಣೆ ಮಾಡುತ್ತಿರುವುದರಿಂದ, ಭಗತ್ ಈಗಾಗಲೇ ಫೈನಲ್ ಹೆಜ್ಜೆ ಇಟ್ಟಿರುವುದರಿಂದ ದೇಶಕ್ಕೆ ಬೆಳ್ಳಿ ಪದಕದ ಭರವಸೆ ನೀಡಿದ್ದಾರೆ.

Published On - 9:21 am, Sat, 4 September 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!