AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ 11ನೇ ಪದಕ: ಹೈ ಜಂಪ್​ನಲ್ಲಿ ಪ್ರವೀಣ್​ಗೆ ಬೆಳ್ಳಿ

ಪುರುಷರ ಹೈ ಜಂಪ್ ಟಿ64 ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ 11ನೇ ಪದಕ: ಹೈ ಜಂಪ್​ನಲ್ಲಿ ಪ್ರವೀಣ್​ಗೆ ಬೆಳ್ಳಿ
Praveen Kumar
TV9 Web
| Edited By: |

Updated on:Sep 03, 2021 | 9:16 AM

Share

ಟೋಕಿಯೊದಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್ 2020 ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಶುಭ ಶುಕ್ರವಾರ ಎಂದೇ ಹೇಳಬಹುದು. ಪುರುಷರ ಹೈ ಜಂಪ್ ಟಿ64 ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಪ್ರವೀಣ್ ಅವರು ಹೈ ಜಂಪ್​ನಲ್ಲಿ 2.07 ಮೀಟರ್ ಜಿಗಿದು ಏಷ್ಯಾದಲ್ಲೇ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದರೆ, 2.04 ಮೀಟರ್ ಎತ್ತರಕ್ಕೆ ಜಿಗಿದ ಪೋಲೆಂಡ್ ನ ಮ್ಯಾಕೀಜ್ ಲೆಪಿಯಾಟೊ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.

ಇನ್ನು ಈ ಬೆಳ್ಳಿ ಪದಕದ ಮೂಲಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 11ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳಿವೆ.

ಈ ಹಿಂದೆ ಪುರುಷರ ಹೈ ಜಂಪ್​ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಇವರು ಟಿ 47 ಹೈ ಜಂಪ್​ನಲ್ಲಿ 2.06 ಮೀಟರ್ ಜಿಗಿದಿದ್ದರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದರು. ಸದ್ಯ ಪ್ರವೀಣ್ 2.07 ಮೀಟರ್ ಜಿಗಿದು ಬೆಳ್ಳಿ ಪದಕ ತಮ್ಮದಾಗಿಸಿದ್ದಾರೆ.

ಇನ್ನೂ 25 ಮೀ. ಪಿಸ್ತೂಲ್‌ ಮಿಶ್ರ ವಿಭಾಗದ ಎಸ್‌ಎಚ್‌1 ಸ್ಪರ್ಧೆಯಲ್ಲಿ ಶೂಟರ್‌ ರಾಹುಲ್‌ ಜಕ್ಕರ್‌ 5ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಅರ್ಹತಾ ಸುತ್ತಿನಲ್ಲಿ 576 ಅಂಕಗಳೊಂದಿಗೆ 2ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದ ಜಕ್ಕರ್‌ ಫೈನಲ್‌ನಲ್ಲಿ ನಿರಾಸೆ ಮೂಡಿಸಿದರು. ಭಾರತದ ಇನ್ನೊಬ್ಬ ಸ್ಪರ್ಧಿ ಆಕಾಶ್‌ ಅರ್ಹತಾ ಸುತ್ತಿನಲ್ಲಿ 20ನೇ ಸ್ಥಾನ ಪಡೆದು ಸ್ಪರ್ಧೆಯಿಂದ ಹೊರಬಿದ್ದರು.

ಪುರುಷರ ಶಾಟ್‌ಪುಟ್‌ನ ಎಫ್‌35 ಸ್ಪರ್ಧೆಯ ಫೈನಲ್‌ನಲ್ಲಿ ಅರವಿಂದ್‌ ಪದಕ ಗೆಲ್ಲಲು ವಿಫಲರಾದರು. ಅರವಿಂದ್‌ 13.48 ಮೀ. ದೂರಕ್ಕೆ ಶಾಟ್‌ಪುಟ್‌ ಎಸೆದು 7ನೇ ಸ್ಥಾನ ಪಡೆದರು. 16.13 ಮೀ. ದೂರ ಎಸೆದ ಉಜ್ಬೇಕಿಸ್ತಾನದ ಖುಸ್ನಿದ್ದಿನ್‌ ಚಿನ್ನ ಗೆದ್ದುಕೊಂಡರು.

Published On - 8:43 am, Fri, 3 September 21

Follow Us
Web contact
Web contact

TV9 Kannada

Read More
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ