Neeraj Chopra: ವಿಶ್ವ ಚಾಂಪಿಯನ್​​ಶಿಪ್​ನಲ್ಲಿ ಬೆಳ್ಳಿ: ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರ

World Athletics Championships 2022: ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ, ಯೋಗಿ ಆದಿತ್ಯನಾಥ್, ರಾಜ್​ನಾಥ್ ಸಿಂಗ್ ಸೇರಿದಂತೆ ಅನೇಕರು ಚೋಪ್ರಾ ಸಾಧನೆಯನ್ನು ಕೊಂಡಾಡಿದ್ದಾರೆ.

Neeraj Chopra: ವಿಶ್ವ ಚಾಂಪಿಯನ್​​ಶಿಪ್​ನಲ್ಲಿ ಬೆಳ್ಳಿ: ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರ
Neeraj Chopra
Follow us
| Updated By: Vinay Bhat

Updated on:Jul 25, 2022 | 2:15 PM

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಗೈದಿದ್ದ ಭಾರತದ ನೀರಜ್‌ ಚೋಪ್ರಾ (Neeraj Chopra) ಇದೀಗ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ (World Athletics Championships) ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್​ನಲ್ಲಿ ಜಯಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. 89.23 ಮೀಟರ್ ದೂರ ಎಸೆಯುವ ಮೂಲಕ ಎರಡನೇ ಸ್ಥಾನ ಅಲಂಕರಿಸಿದ ನೀರಜ್ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟರು. ಇದಕ್ಕೂ ಮುನ್ನ 2003ರಲ್ಲಿ ಮಹಿಳೆಯರ ಲಾಂಗ್ ಜಂಪ್‌ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು. ಅದಾದ ಬಳಿಕ ಭಾರತಕ್ಕೆ (India) ಯಾವುದೇ ಪದಕ ಪಡೆದುಕೊಂಡಿರಲಿಲ್ಲ.

ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ, ಯೋಗಿ ಆದಿತ್ಯನಾಥ್, ರಾಜ್​ನಾಥ್ ಸಿಂಗ್ ಸೇರಿದಂತೆ ಅನೇಕ ಕ್ರೀಡಾ ದಿಗ್ಗಜರು, ಅಭಿಮಾನಿಗಳು ಚೋಪ್ರಾ ಸಾಧನೆಯನ್ನು ಕೊಂಡಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡಿದ್ದು, “ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುವಾದ ನೀರಜ್ ಚೋಪ್ರಾ ವಿಶೇಷ ಸಾಧನೆ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಭಾರತೀಯ ಕ್ರೀಡೆಗೆ ಇದೊಂದು ವಿಶೇಷ ಕ್ಷಣ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು,” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
IND vs WI: ಇಂದು ಎರಡನೇ ಏಕದಿನ: ಭಾರತದ ಪ್ಲೇಯಿಂಗ್ XI ನಿಂದ ಹೊರಬೀಳಲಿದ್ದಾರೆ ಈ ಆಟಗಾರ?
Image
Neeraj Chopra: ಬೆಳ್ಳಿ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸಿದ ಚಿನ್ನದ ಹುಡುಗ
Image
Sam Northeast: ಏಕಾಂಗಿಯಾಗಿ 410 ರನ್ ಗಳಿಸಿದ ಇಂಗ್ಲೆಂಡ್‌ ಬ್ಯಾಟರ್! 18 ವರ್ಷಗಳ ನಂತರ ಲಾರಾ ದಾಖಲೆ ನೆನಪು
Image
Hardik Pandya: ಏಕದಿನ ಕ್ರಿಕೆಟ್​ಗೆ ಹಾರ್ದಿಕ್ ಪಾಂಡ್ಯ ನಿವೃತ್ತಿ! ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಕೋಚ್ ರವಿಶಾಸ್ತ್ರಿ

Koo App

ಫೈನಲ್​ನಲ್ಲಿ ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ನೀರಜ್ ಮೊದಲ ಪ್ರಯತ್ನದಲ್ಲಿ ಫೌಲ್ ಅನುಭವಿಸಿದರೆ ಎರಡನೇ ಯತ್ನದಲ್ಲಿ 82.39 ಮೀಟರ್, ಮೂರನೇ ಪ್ರಯತ್ನದಲ್ಲಿ 86.37 ಮೀಟರ್ ದೂರ ಎಸೆದರಷ್ಟೆ. ಆದರೆ, ನಾಲ್ಕನೇ ಪ್ರಯತ್ವದಲ್ಲಿ 88.13 ಎಸೆದು ದಿಢೀರ್ ಎರಡನೇ ಸ್ಥಾನಕ್ಕೆ ಜಿಗಿದರು. ಐದನೇ ಮತ್ತು ಆರನೇ ರೌಂಡ್​ನಲ್ಲಿ ಮತ್ತೆ ಫೌಲ್ ಆಗಿದ್ದು ಹೊಡೆತ ಬಿದ್ದಿತು. ಆದರೂ 88.13 ಶ್ರೇಷ್ಠ ಸಾಧನೆಯ ದೂರ ಎಸೆದು ಅಂತಿಮವಾಗಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ ಇದು ಚೊಚ್ಚಲ ಪದಕವಾಗಿದೆ.

ಇದಕ್ಕೂ ಮುನ್ನ ನೀರಜ್ ಅರ್ಹತಾ ಸುತ್ತಿನಲ್ಲಿ 88.39 ಮೀ. ದೂರವನ್ನು ದಾಖಲಿಸಿ ಪದಕ ಸುತ್ತಿಗೆ ನೆಗೆದದ್ದು ವಿಶೇಷವಾಗಿತ್ತು. ಈ ಋತುವಿನಲ್ಲಿ ಅದ್ಭುತ ಫಲಿತಾಂಶಗಳನ್ನು ಕಂಡಿದ್ದ ಸ್ಟಾರ್ ಅಥ್ಲೀಟ್ ಎರಡು ಬಾರಿ ತನ್ನ ವೈಯಕ್ತಿಕ ಸಾಧನೆಯನ್ನೇ ಮುರಿದಿದ್ದಾರೆ. ಕಳೆದ ಜೂನ್ 14 ರಂದು ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀ. ಮತ್ತು ಕಳೆದ ತಿಂಗಳು 89.94 ಮೀ ಎಸೆದ ಸಾಧನೆ ಗೈದಿದ್ದರು. ಆದರೆ, ಈ ಬಾರಿ ಯಶಸ್ಸು ಸಿಗಲಿಲ್ಲ.

39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಪದಕ ಗೆದ್ದಿದ್ದು ಕೇವಲ 1 ಬಾರಿ ಮಾತ್ರ. 2003 ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕೂಟದಲ್ಲಿ ಲೆಜೆಂಡರಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಅವರು 6.70 ಮೀ ಜಿಗಿತದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದರು. ಇದಾದ ಬಳಿಕ ಯಾವುದೇ ಕ್ರೀಡಾಪಟುವು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಲು ಸಾಧ್ಯವಾಗಿಲ್ಲ. ಇದೀಗ ಸುದೀರ್ಘ ಇತಿಹಾಸದಲ್ಲಿ ದೇಶದ ಮೊಟ್ಟಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ವಿಶ್ವ ಚಾಂಪಿಯನ್ ಆಗುವ ಗುರಿಯನ್ನು ಹೊಂದಿದ್ದ ನೀರಜ್ ಚೋಪ್ರಾಗೆ ಬೆಳ್ಳಿ ದಕ್ಕಿದೆ.

Published On - 10:10 am, Sun, 24 July 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು