AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಿಳಿಸಿದೆ.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ
ಪಾಕಿಸ್ತಾನ ಕ್ರಿಕೇಟ್ ಲೀಗ್​ನ ಟ್ರೋಫಿ
guruganesh bhat
| Edited By: ಸಾಧು ಶ್ರೀನಾಥ್​|

Updated on: Mar 04, 2021 | 4:51 PM

Share

ಕೊರೊನಾ ಸ್ವಲ್ಪ ಕಡಿಮೆಯಾಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸೋಂಕು ನಿಯಂತ್ರಿಸಬೇಕು ಎಂದು ಎಷ್ಟೋ ಪಂದ್ಯಾವಳಿಗಳನ್ನು, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು, ಮುಂದೂಡಲಾಗಿತ್ತು. ಕೊರೊನಾದಿಂದ ಆದಷ್ಟು ದೂರವಿದ್ದೇ ನಿಧಾನವಾಗಿ ಕ್ರೀಡಾರಂಗ ಚಿಗುರುತ್ತಿದ್ದರೂ, ಪಾಕಿಸ್ತಾನ ಸೂಪರ್ ಲೀಗ್​ಗೆ ಅಡ್ಡಗಾಲಾಗಿ ಪರಿಣಮಿಸಿದೆ.

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಏಳು ಕ್ರಿಕೆಟಿಗರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯಾವಳಿ ಸ್ಥಗಿತಗೊಂಡಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಮಾರ್ಚ್ 1ರಂದು ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭಾಗವಹಿಸಿದ್ದ ಇಸ್ಲಾಮಾಬಾದ್ ಯನೈಟೆಡ್ ತಂಡದ ಆಟಗಾರ ಫವಾದ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ನಂತರ ಅವರ ಜತೆ ಬೆರೆತ ಆಟಗಾರರಿಗೆ ಕೊರೊನೊ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಟ್ಟು 7 ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕಾರಣ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ ಕೈಗೊಂಡಿದೆ.

2020 ಪಾಕಿಸ್ತಾನ ಸೂಪರ್​ ಲೀಗ್ ಸಹ ಕೊರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಬಾಕಿ ಉಳಿದಿದ್ದ ಮೂರು ಪ್ಲೇ ಆಫ್ ಪಂದ್ಯಗಳು ಮತ್ತು ಫೈನಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆಯೇ ಆಡಿಸಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ಕರಾಚಿ ಕಿಂಗ್ಸ್​ ಜಯಗಳಿಸಿತ್ತು.

ಇದನ್ನೂ ಓದಿ: ಐಪಿಎಲ್​ ಬಗ್ಗೆ ರೇಜಿಗೆ: ಪಾಕಿಸ್ತಾನ್​ ಸೂಪರ್​​ ಲೀಗ್​ ಆಡೋಕೆ ಹೊರಟ ಆರ್​ಸಿಬಿ ಆಟಗಾರ

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ