AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಿಳಿಸಿದೆ.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ
ಪಾಕಿಸ್ತಾನ ಕ್ರಿಕೇಟ್ ಲೀಗ್​ನ ಟ್ರೋಫಿ
guruganesh bhat
| Edited By: ಸಾಧು ಶ್ರೀನಾಥ್​|

Updated on: Mar 04, 2021 | 4:51 PM

Share

ಕೊರೊನಾ ಸ್ವಲ್ಪ ಕಡಿಮೆಯಾಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸೋಂಕು ನಿಯಂತ್ರಿಸಬೇಕು ಎಂದು ಎಷ್ಟೋ ಪಂದ್ಯಾವಳಿಗಳನ್ನು, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು, ಮುಂದೂಡಲಾಗಿತ್ತು. ಕೊರೊನಾದಿಂದ ಆದಷ್ಟು ದೂರವಿದ್ದೇ ನಿಧಾನವಾಗಿ ಕ್ರೀಡಾರಂಗ ಚಿಗುರುತ್ತಿದ್ದರೂ, ಪಾಕಿಸ್ತಾನ ಸೂಪರ್ ಲೀಗ್​ಗೆ ಅಡ್ಡಗಾಲಾಗಿ ಪರಿಣಮಿಸಿದೆ.

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಏಳು ಕ್ರಿಕೆಟಿಗರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯಾವಳಿ ಸ್ಥಗಿತಗೊಂಡಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಮಾರ್ಚ್ 1ರಂದು ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭಾಗವಹಿಸಿದ್ದ ಇಸ್ಲಾಮಾಬಾದ್ ಯನೈಟೆಡ್ ತಂಡದ ಆಟಗಾರ ಫವಾದ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ನಂತರ ಅವರ ಜತೆ ಬೆರೆತ ಆಟಗಾರರಿಗೆ ಕೊರೊನೊ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಟ್ಟು 7 ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕಾರಣ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ ಕೈಗೊಂಡಿದೆ.

2020 ಪಾಕಿಸ್ತಾನ ಸೂಪರ್​ ಲೀಗ್ ಸಹ ಕೊರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಬಾಕಿ ಉಳಿದಿದ್ದ ಮೂರು ಪ್ಲೇ ಆಫ್ ಪಂದ್ಯಗಳು ಮತ್ತು ಫೈನಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆಯೇ ಆಡಿಸಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ಕರಾಚಿ ಕಿಂಗ್ಸ್​ ಜಯಗಳಿಸಿತ್ತು.

ಇದನ್ನೂ ಓದಿ: ಐಪಿಎಲ್​ ಬಗ್ಗೆ ರೇಜಿಗೆ: ಪಾಕಿಸ್ತಾನ್​ ಸೂಪರ್​​ ಲೀಗ್​ ಆಡೋಕೆ ಹೊರಟ ಆರ್​ಸಿಬಿ ಆಟಗಾರ

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ