AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಿಳಿಸಿದೆ.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ
ಪಾಕಿಸ್ತಾನ ಕ್ರಿಕೇಟ್ ಲೀಗ್​ನ ಟ್ರೋಫಿ
guruganesh bhat
| Updated By: ಸಾಧು ಶ್ರೀನಾಥ್​|

Updated on: Mar 04, 2021 | 4:51 PM

Share

ಕೊರೊನಾ ಸ್ವಲ್ಪ ಕಡಿಮೆಯಾಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸೋಂಕು ನಿಯಂತ್ರಿಸಬೇಕು ಎಂದು ಎಷ್ಟೋ ಪಂದ್ಯಾವಳಿಗಳನ್ನು, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು, ಮುಂದೂಡಲಾಗಿತ್ತು. ಕೊರೊನಾದಿಂದ ಆದಷ್ಟು ದೂರವಿದ್ದೇ ನಿಧಾನವಾಗಿ ಕ್ರೀಡಾರಂಗ ಚಿಗುರುತ್ತಿದ್ದರೂ, ಪಾಕಿಸ್ತಾನ ಸೂಪರ್ ಲೀಗ್​ಗೆ ಅಡ್ಡಗಾಲಾಗಿ ಪರಿಣಮಿಸಿದೆ.

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಏಳು ಕ್ರಿಕೆಟಿಗರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯಾವಳಿ ಸ್ಥಗಿತಗೊಂಡಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಮಾರ್ಚ್ 1ರಂದು ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭಾಗವಹಿಸಿದ್ದ ಇಸ್ಲಾಮಾಬಾದ್ ಯನೈಟೆಡ್ ತಂಡದ ಆಟಗಾರ ಫವಾದ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ನಂತರ ಅವರ ಜತೆ ಬೆರೆತ ಆಟಗಾರರಿಗೆ ಕೊರೊನೊ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಟ್ಟು 7 ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕಾರಣ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ ಕೈಗೊಂಡಿದೆ.

2020 ಪಾಕಿಸ್ತಾನ ಸೂಪರ್​ ಲೀಗ್ ಸಹ ಕೊರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಬಾಕಿ ಉಳಿದಿದ್ದ ಮೂರು ಪ್ಲೇ ಆಫ್ ಪಂದ್ಯಗಳು ಮತ್ತು ಫೈನಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆಯೇ ಆಡಿಸಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ಕರಾಚಿ ಕಿಂಗ್ಸ್​ ಜಯಗಳಿಸಿತ್ತು.

ಇದನ್ನೂ ಓದಿ: ಐಪಿಎಲ್​ ಬಗ್ಗೆ ರೇಜಿಗೆ: ಪಾಕಿಸ್ತಾನ್​ ಸೂಪರ್​​ ಲೀಗ್​ ಆಡೋಕೆ ಹೊರಟ ಆರ್​ಸಿಬಿ ಆಟಗಾರ

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ