AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​

Dilip Kumar Death: ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​
ಶಾಹಿದ್ ಅಫ್ರಿದಿ
TV9 Web
| Edited By: |

Updated on:Jul 07, 2021 | 1:02 PM

Share

ಇಂದು ಮುಂಜಾನೆ ನಿಧನರಾದ ದಿಲೀಪ್​ ಕುಮಾರ್​​ ಅವರಿಗೆ ದೇಶದ ಎಲ್ಲ ಕ್ಷೇತ್ರದ ಗಣ್ಯರು, ಅವರ ಅಭಿಮಾನಿಗಳು ಗೌರವ ಅರ್ಪಿಸುತ್ತಿದ್ದಾರೆ. ಅವರ ಸಾವಿನಿಂದಾದ ನೋವು ವ್ಯಕ್ತಪಡಿಸುತ್ತಿದ್ದಾರೆ. ಹಾಗೇ, ಪಾಕಿಸ್ತಾನದ ಕ್ರಿಕೆಟರ್ ಶಾಹಿದ್​ ಅಫ್ರಿದಿ ಕೂಡ ದಿಲೀಪ್​ ಕುಮಾರ್​ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್​ ಕಳೆದ ಕೆಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 7.30ರಹೊತ್ತಿಗೆ ಅವರು ನಿಧನರಾಗಿದ್ದಾರೆ.

ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಇದೀಗ ಶಾಹೀದ್​ ಅಫ್ರಿದಿ ಯೂಸುಫ್​ ಖಾನ್​ ಹೆಸರನ್ನು ಉಲ್ಲೇಖಿಸಿಯೇ ತಮ್ಮ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್ ಎಂಬ ಹ್ಯಾಷ್​ಟ್ಯಾಗ್ ಬಳಸಿದ್ದಾರೆ.

ನಾವೆಲ್ಲ ಅಲ್ಲಾನಿಗೇ ಸೇರಿದವರು..ಮತ್ತು ಒಂದು ದಿನ ಅವನಿದ್ದಲ್ಲಿಗೇ ಹೋಗುತ್ತೇವೆ. ಯೂಸುಫ್ ಖಾನ್​ ಸಾಹೀಬ್​ರನ್ನು ಕಳೆದುಕೊಂಡಿದ್ದು ನಮಗೆಲ್ಲರಿಗೂ ನಿಜಕ್ಕೂ ನಷ್ಟ. ಅವರು ನಮ್ಮ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ. ಸೈರಾ ಬಾನು ಸಾಹೀಬಾರಿಗೆ ನನ್ನ ಸಾಂತ್ವನಗಳು ಎಂದು ಅಫ್ರಿದಿ ಟ್ವೀಟ್ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​ ಆಟಗಾರರಾದ ವೀರೇಂದ್ರ ಸೆಹ್ವಾಗ್​, ಧವನ್​ ಸೇರಿ ಹಲವರು ದಿಲೀಪ್​ ಕುಮಾರ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

Published On - 1:00 pm, Wed, 7 July 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್