AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​

Dilip Kumar Death: ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​
ಶಾಹಿದ್ ಅಫ್ರಿದಿ
TV9 Web
| Edited By: |

Updated on:Jul 07, 2021 | 1:02 PM

Share

ಇಂದು ಮುಂಜಾನೆ ನಿಧನರಾದ ದಿಲೀಪ್​ ಕುಮಾರ್​​ ಅವರಿಗೆ ದೇಶದ ಎಲ್ಲ ಕ್ಷೇತ್ರದ ಗಣ್ಯರು, ಅವರ ಅಭಿಮಾನಿಗಳು ಗೌರವ ಅರ್ಪಿಸುತ್ತಿದ್ದಾರೆ. ಅವರ ಸಾವಿನಿಂದಾದ ನೋವು ವ್ಯಕ್ತಪಡಿಸುತ್ತಿದ್ದಾರೆ. ಹಾಗೇ, ಪಾಕಿಸ್ತಾನದ ಕ್ರಿಕೆಟರ್ ಶಾಹಿದ್​ ಅಫ್ರಿದಿ ಕೂಡ ದಿಲೀಪ್​ ಕುಮಾರ್​ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್​ ಕಳೆದ ಕೆಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 7.30ರಹೊತ್ತಿಗೆ ಅವರು ನಿಧನರಾಗಿದ್ದಾರೆ.

ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಇದೀಗ ಶಾಹೀದ್​ ಅಫ್ರಿದಿ ಯೂಸುಫ್​ ಖಾನ್​ ಹೆಸರನ್ನು ಉಲ್ಲೇಖಿಸಿಯೇ ತಮ್ಮ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್ ಎಂಬ ಹ್ಯಾಷ್​ಟ್ಯಾಗ್ ಬಳಸಿದ್ದಾರೆ.

ನಾವೆಲ್ಲ ಅಲ್ಲಾನಿಗೇ ಸೇರಿದವರು..ಮತ್ತು ಒಂದು ದಿನ ಅವನಿದ್ದಲ್ಲಿಗೇ ಹೋಗುತ್ತೇವೆ. ಯೂಸುಫ್ ಖಾನ್​ ಸಾಹೀಬ್​ರನ್ನು ಕಳೆದುಕೊಂಡಿದ್ದು ನಮಗೆಲ್ಲರಿಗೂ ನಿಜಕ್ಕೂ ನಷ್ಟ. ಅವರು ನಮ್ಮ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ. ಸೈರಾ ಬಾನು ಸಾಹೀಬಾರಿಗೆ ನನ್ನ ಸಾಂತ್ವನಗಳು ಎಂದು ಅಫ್ರಿದಿ ಟ್ವೀಟ್ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​ ಆಟಗಾರರಾದ ವೀರೇಂದ್ರ ಸೆಹ್ವಾಗ್​, ಧವನ್​ ಸೇರಿ ಹಲವರು ದಿಲೀಪ್​ ಕುಮಾರ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

Published On - 1:00 pm, Wed, 7 July 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?