AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​

Dilip Kumar Death: ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​
ಶಾಹಿದ್ ಅಫ್ರಿದಿ
TV9 Web
| Edited By: |

Updated on:Jul 07, 2021 | 1:02 PM

Share

ಇಂದು ಮುಂಜಾನೆ ನಿಧನರಾದ ದಿಲೀಪ್​ ಕುಮಾರ್​​ ಅವರಿಗೆ ದೇಶದ ಎಲ್ಲ ಕ್ಷೇತ್ರದ ಗಣ್ಯರು, ಅವರ ಅಭಿಮಾನಿಗಳು ಗೌರವ ಅರ್ಪಿಸುತ್ತಿದ್ದಾರೆ. ಅವರ ಸಾವಿನಿಂದಾದ ನೋವು ವ್ಯಕ್ತಪಡಿಸುತ್ತಿದ್ದಾರೆ. ಹಾಗೇ, ಪಾಕಿಸ್ತಾನದ ಕ್ರಿಕೆಟರ್ ಶಾಹಿದ್​ ಅಫ್ರಿದಿ ಕೂಡ ದಿಲೀಪ್​ ಕುಮಾರ್​ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್​ ಕಳೆದ ಕೆಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 7.30ರಹೊತ್ತಿಗೆ ಅವರು ನಿಧನರಾಗಿದ್ದಾರೆ.

ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಇದೀಗ ಶಾಹೀದ್​ ಅಫ್ರಿದಿ ಯೂಸುಫ್​ ಖಾನ್​ ಹೆಸರನ್ನು ಉಲ್ಲೇಖಿಸಿಯೇ ತಮ್ಮ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್ ಎಂಬ ಹ್ಯಾಷ್​ಟ್ಯಾಗ್ ಬಳಸಿದ್ದಾರೆ.

ನಾವೆಲ್ಲ ಅಲ್ಲಾನಿಗೇ ಸೇರಿದವರು..ಮತ್ತು ಒಂದು ದಿನ ಅವನಿದ್ದಲ್ಲಿಗೇ ಹೋಗುತ್ತೇವೆ. ಯೂಸುಫ್ ಖಾನ್​ ಸಾಹೀಬ್​ರನ್ನು ಕಳೆದುಕೊಂಡಿದ್ದು ನಮಗೆಲ್ಲರಿಗೂ ನಿಜಕ್ಕೂ ನಷ್ಟ. ಅವರು ನಮ್ಮ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ. ಸೈರಾ ಬಾನು ಸಾಹೀಬಾರಿಗೆ ನನ್ನ ಸಾಂತ್ವನಗಳು ಎಂದು ಅಫ್ರಿದಿ ಟ್ವೀಟ್ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​ ಆಟಗಾರರಾದ ವೀರೇಂದ್ರ ಸೆಹ್ವಾಗ್​, ಧವನ್​ ಸೇರಿ ಹಲವರು ದಿಲೀಪ್​ ಕುಮಾರ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

Published On - 1:00 pm, Wed, 7 July 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ