AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​

Dilip Kumar Death: ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​
ಶಾಹಿದ್ ಅಫ್ರಿದಿ
TV9 Web
| Edited By: |

Updated on:Jul 07, 2021 | 1:02 PM

Share

ಇಂದು ಮುಂಜಾನೆ ನಿಧನರಾದ ದಿಲೀಪ್​ ಕುಮಾರ್​​ ಅವರಿಗೆ ದೇಶದ ಎಲ್ಲ ಕ್ಷೇತ್ರದ ಗಣ್ಯರು, ಅವರ ಅಭಿಮಾನಿಗಳು ಗೌರವ ಅರ್ಪಿಸುತ್ತಿದ್ದಾರೆ. ಅವರ ಸಾವಿನಿಂದಾದ ನೋವು ವ್ಯಕ್ತಪಡಿಸುತ್ತಿದ್ದಾರೆ. ಹಾಗೇ, ಪಾಕಿಸ್ತಾನದ ಕ್ರಿಕೆಟರ್ ಶಾಹಿದ್​ ಅಫ್ರಿದಿ ಕೂಡ ದಿಲೀಪ್​ ಕುಮಾರ್​ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್​ ಕಳೆದ ಕೆಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 7.30ರಹೊತ್ತಿಗೆ ಅವರು ನಿಧನರಾಗಿದ್ದಾರೆ.

ದಿಲೀಪ್​ ಕುಮಾರ್​ ಮೂಲತಃ ಮುಸ್ಲಿಂ ಕುಟುಂಬದಿಂದ ಬಂದವರು. ಅವರ ಮೊದಲ ಹೆಸರು ಮೊಹಮ್ಮದ್​ ಯೂಸುಫ್ ಖಾನ್​. ನಂತರ ಅವರು ನಿರ್ಮಾಪಕಿ ದೇವಿಕಾ ರಾಣಿಯ ಮಾತಿಗೆ ಬೆಲೆ ಕೊಟ್ಟು ದಿಲೀಪ್​ ಕುಮಾರ್​ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಇದೀಗ ಶಾಹೀದ್​ ಅಫ್ರಿದಿ ಯೂಸುಫ್​ ಖಾನ್​ ಹೆಸರನ್ನು ಉಲ್ಲೇಖಿಸಿಯೇ ತಮ್ಮ ಗೌರವ ಸಲ್ಲಿಸಿದ್ದಾರೆ. ದಿಲೀಪ್​ ಕುಮಾರ್ ಎಂಬ ಹ್ಯಾಷ್​ಟ್ಯಾಗ್ ಬಳಸಿದ್ದಾರೆ.

ನಾವೆಲ್ಲ ಅಲ್ಲಾನಿಗೇ ಸೇರಿದವರು..ಮತ್ತು ಒಂದು ದಿನ ಅವನಿದ್ದಲ್ಲಿಗೇ ಹೋಗುತ್ತೇವೆ. ಯೂಸುಫ್ ಖಾನ್​ ಸಾಹೀಬ್​ರನ್ನು ಕಳೆದುಕೊಂಡಿದ್ದು ನಮಗೆಲ್ಲರಿಗೂ ನಿಜಕ್ಕೂ ನಷ್ಟ. ಅವರು ನಮ್ಮ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ. ಸೈರಾ ಬಾನು ಸಾಹೀಬಾರಿಗೆ ನನ್ನ ಸಾಂತ್ವನಗಳು ಎಂದು ಅಫ್ರಿದಿ ಟ್ವೀಟ್ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​ ಆಟಗಾರರಾದ ವೀರೇಂದ್ರ ಸೆಹ್ವಾಗ್​, ಧವನ್​ ಸೇರಿ ಹಲವರು ದಿಲೀಪ್​ ಕುಮಾರ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

Published On - 1:00 pm, Wed, 7 July 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?