AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್ ಮತ್ತು ಸಹಾ ಭಾರತದ ಅತ್ಯುತ್ತಮ ವಿಕೆಟ್​ಕೀಪರ್-ಬ್ಯಾಟ್ಸ್​ಮನ್​ಗಳು: ಗಂಗೂಲಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ದೇಶದಲ್ಲಿ ಈಗ ಲಭ್ಯರಿರುವ ವಿಕೆಟ್​​ಕೀಪರ್-ಬ್ಯಾಟ್ಸ್​ಮನ್​ಗಳ ಪೈಕಿ ರಿಷಭ್ ಪಂತ್ ಮತ್ತು ವೃದ್ಧಿಮಾನ ಸಹಾ ಅತ್ಯುತ್ತಮರು ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.

ಪಂತ್ ಮತ್ತು ಸಹಾ ಭಾರತದ ಅತ್ಯುತ್ತಮ ವಿಕೆಟ್​ಕೀಪರ್-ಬ್ಯಾಟ್ಸ್​ಮನ್​ಗಳು: ಗಂಗೂಲಿ
ಸೌರವ್ ಗಂಗೂಲಿ
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 25, 2020 | 8:25 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರು ರಿಷಬ್ ಪಂತ್ ಮತ್ತು ವೃದ್ಧಿಮಾನ ಸಹಾ, ಪ್ರಸ್ತುತವಾಗಿ ಭಾರತದಲ್ಲಿ ಸದ್ಯಕ್ಕೆ ಲಭ್ಯರಿರುವ ಅತ್ಯುತ್ತಮ ವಿಕೆಟ್​ಕೀಪರ್ ಬ್ಯಾಟ್ಸ್​ಮನ್​ಗಳೆಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.

ಕನ್ನಡ

ರಿಷಭ್ ಪಂತ್

ಮಹೇಂದ್ರಸಿಂಗ್ ಧೋನಿ ಅವರ ನಿವೃತ್ತಿಯ ನಂತರ ಭಾರತ ಕೆಲವು ವಿಕೆಟ್​ಕೀಪರ್ ಬ್ಯಾಟ್ಸ್​ಮನ್​ಗಳನ್ನು ಪ್ರಯೋಗಿಸಿದೆ. ಪಂತ್ ಮತ್ತು ಸಹಾ ಅವರಲ್ಲದೆ, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್ ಅವರನ್ನು ಈ ಸ್ಪೆಷಲಿಸ್ಟ್ ಸ್ಥಾನಕ್ಕೆ ಬಳಸಿಕೊಂಡಿದೆ. ಸಹಾ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನಗಳನ್ನು ನೀಡಿ ಸ್ಥಾನವನ್ನು ಭದ್ರಪಡಿಸಿಕೊಂಡರು. ಅವರು ಗಾಯಗೊಂಡಾಗ ಅವಕಾಶ ಗಿಟ್ಟಿಸಿದ ಯುವ ಆಟಗಾರ ಪಂತ್ ಕೆಲವು ಉತ್ಕೃಷ್ಟ ಬ್ಯಾಟಿಂಗ್ ಪ್ರದರ್ಶನಗಳ ಮೂಲಕ ಗಮನ ಸೆಳೆಯುವುದರ ಜೊತೆಗೆ ಸಹಾ ಮರಳಿ ಬರುವುದಕ್ಕೆ ದೊಡ್ಡ ಥ್ರೆಟ್ ಎನಿಸಿದರು. ಆದರೆ ಬ್ಯಾಟಿಂಗ್​ನಲ್ಲಿ ಅವರಿಂದ ಪ್ರದರ್ಶನಗಳು ಅಸ್ಥಿರಗೊಳ್ಳಲಾರಂಭಿಸಿದ ನಂತರ ಸಹಾಗೆ ಪುನಃ ಅವಕಾಶ ಸಿಕ್ಕಿತು.

ಈಗ ಪಂತ್ ಮತ್ತು ಸಹಾ ಇಬ್ಬರಿಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೇವಲ ಟೆಸ್ಟ್​ ಸ್ಕ್ಯಾಡ್​ನಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಪಂತ್ ಮತ್ತು ಸಹಾ ಭಾರತದ ಅತ್ಯುತ್ತಮ ವಿಕೆಟ್​ ಕೀಪರ್​ಗಳಾದರೆ ಅವರಿಗೆ ಸೀಮಿತ ಓವರ್​ಗಳ ಕ್ರಿಕೆಟ್​ನಲ್ಲಿ ಯಾಕೆ ಅಡಿಸುತ್ತಿಲ್ಲ ಎಂಬ ಪ್ರಶ್ನೆಗೆ ಗಂಗೂಲಿ ಅವರಲ್ಲಿ ಸ್ಪಷ್ಟವಾದ ಉತ್ತರವಿಲ್ಲ. ಇಂದು ಪಿಟಿಐನೊಂದಿಗೆ ಮಾತಾಡಿದ ಭಾರತದ ಮಾಜಿ ನಾಯಕ ಗಂಗೂಲಿ, ಪಂತ್ ಅವರು ಐಪಿಎಲ್​ನಲ್ಲಿ ನೀಡಿದ ಕಳಪೆ ಪ್ರದರ್ಶನಗಳ ಬಗ್ಗೆಯೂ ಸಮಂಜಸ ಉತ್ತರ ನೀಡಲಿಲ್ಲ.

ಕನ್ನಡ

ವೃದ್ಧಿಮಾನ್ ಸಹಾ

‘‘ಅವನ ಬ್ಯಾಟಿಂಗ್ ಬಗ್ಗೆ ಯೋಚನೆ ಬೇಡ, ಅವನ ಮತ್ತೆ ಬ್ಯಾಟ್​ ಮೊದಲಿನಂತೆ ಬೀಸಲಾರಂಭಿಸುತ್ತದೆ. ಅವನಿನ್ನೂ ಯುವಕ ಮತ್ತು ಪ್ರಚಂಡ ಪ್ರತಿಭಾವಂತ. ಅವನಿಗೆ ಬೇಕಿರುವುದು ನಮ್ಮ ಮಾರ್ಗದರ್ಶನ, ಅವನ ಫಾರ್ಮ್ ಸುಧಾರಿಸಲಿದೆ,’’ ಎಂದು ಗಂಗೂಲಿ ಹೇಳಿದರು.

ಆದರೆ, ಪಂತ್​ ಅವರನ್ನು ಸೀಮಿತ ಪಂದ್ಯಗಳಿಗೆ ಡ್ರಾಪ್ ಮಾಡಿರುವುದರಿಂದ ಮತ್ತು ಸಹಾ ಅವರಿಗಿಂತ ಉತ್ತಮ ವಿಕೆಟ್​ಕೀಪರ್ ಆಗಿರುವುದರಿಂದ ಪಂತ್​ಗೆ ಟೆಸ್ಟ್​ಗಳಲ್ಲಿ ಆಡುವ ಅವಕಾಶ ಸಿಗುತ್ತದೆಯೇ ಎಂದು ಕೇಳಿದಾಗ ಗಂಗೂಲಿ ಡಿಪ್ಲೊಮ್ಯಾಟಿಕ್ ಉತ್ತರ ನೀಡಲು ಪ್ರಯತ್ನಿಸಿದರು.

‘‘ಇಬ್ಬರನ್ನೂ ಖಂಡಿತವಾಗಿಯೂ ಆಡಿಸಲಾಗದು, ಯಾರು ಉತ್ತಮ ಫಾರ್ಮ್​ನಲ್ಲಿದ್ದಾರೋ ಅವರು ಆಡುವ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸುತ್ತಾರೆ,’’ ಅಂತ ಗಂಗೂಲಿ ಹೇಳಿದರು.

Published On - 7:47 pm, Wed, 25 November 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ