AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್

Suhas Yathiraj: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಸಿಂಗಲ್ಸ್ ಎಸ್​ಎಲ್4 ಈವೆಂಟ್‌ನಲ್ಲಿ ಭಾರತದ ಅನುಭವಿ ಶಟ್ಲರ್ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಸುಹಾಸ್ ಪಾತ್ರರಾಗಿದ್ದಾರೆ.

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್
ಸುಹಾಸ್ ಯತಿರಾಜ್
ಪೃಥ್ವಿಶಂಕರ
|

Updated on:Sep 02, 2024 | 10:43 PM

Share

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಸಿಂಗಲ್ಸ್ ಎಸ್​ಎಲ್4 ಈವೆಂಟ್‌ನಲ್ಲಿ ಭಾರತದ ಅನುಭವಿ ಶಟ್ಲರ್ ಕನ್ನಡಿಗ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಫ್ರಾನ್ಸ್​ನ ಲ್ಯೂಕಾಸ್ ಮಜೂರ್ ವಿರುದ್ಧ 0-2 (9-21, 13-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ವಿಶ್ವ ನಂ.1 ಶ್ರೇಯಾಂಕದ ಸುಹಾಸ್ ಯತಿರಾಜ್ ಸತತ ಎರಡನೇ ಪ್ಯಾರಾಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ಬಾರಿ ಅಂದರೆ 2020 ರ ಟೋಕಿಯೋ ಒಲಿಂಪಿಕ್ಸ್​ನಲ್ಲೂ ಸುಹಾಸ್ ಬೆಳ್ಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ಸುಹಾಸ್ ಪದಕದ ಬಣ್ಣವನ್ನು ಚಿನ್ನವನ್ನಾಗಿ ಪರಿವರ್ತಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಫ್ರಾನ್ಸ್​ನ ಲ್ಯೂಕಾಸ್ ಮಜೂರ್ ವಿರುದ್ಧ ಸುಹಾಸ್​ಗೆ ಈ ಚಮತ್ಕಾರ ಮಾಡಲು ಸಾಧ್ಯವಾಗಲಿಲ್ಲ.

ಫೈನಲ್ ಪಂದ್ಯದಲ್ಲಿ ಸೋಲು

ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್ 4 ವಿಭಾಗದ ಫೈನಲ್ ಪಂದ್ಯ ಸುಹಾಸ್ ಯತಿರಾಜ್ ಮತ್ತು ಫ್ರಾನ್ಸ್‌ನ ಲೂಕಾಸ್ ಮಜೂರ್ ನಡುವೆ ನಡೆಯಿತು. ಈ ಚಿನ್ನದ ಪದಕದ ಪಂದ್ಯದಲ್ಲಿ ಸುಹಾಸ್ ಸತತ ಎರಡು ಸೆಟ್‌ಗಳಲ್ಲಿ ಸೋತರು. ಸುಹಾಸ್‌ ಮೊದಲ ಸೆಟ್​ನಲ್ಲಿ 9-21 ರಿಂದ ಸೋಲನ್ನು ಎದುರಿಸಿದರೆ, ಎರಡನೇ ಸೆಟ್ ಅನ್ನು 13-21 ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.

ಸುಹಾಸ್ ಯತಿರಾಜ್ ಯಾರು?

ಹುಟ್ಟಿನಿಂದಲೇ ಅಂಗವಿಕಲರಾಗಿರುವ ಸುಹಾಸ್ ಕರ್ನಾಟಕದ ಶಿವಮೊಗ್ಗದವರು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಮಾಡಿರುವ ಸುಹಾಸ್, ಬಾಲ್ಯದಿಂದಲೂ ಬ್ಯಾಡ್ಮಿಂಟನ್​ನಲ್ಲಿ ಆಸಕ್ತಿ ಹೊಂದಿದ್ದರು. ಸುಹಾಸ್ ಅವರ ಈ ಕನಸಿಗೆ ನೀರೇರದ ಮನೆಯವರು ಸುಹಾಸ್​ಗೆ ಎಲ್ಲಾ ರೀತಿಯಲ್ಲೂ ಪ್ರೋತ್ಸಾಹ ನೀಡಿದರು. ಆದರೆ 2005 ರಲ್ಲಿ ಸುಹಾಸ್ ಅವರ ತಂದೆಯ ನಿಧನ, ಅವರ ಜೀವನದಲ್ಲಿ ದೊಡ್ಡ ತೀರುವು ನೀಡಿತು. ತನ್ನ ತಂದೆಯ ಮರಣದ ನಂತರ, ಸುಹಾಸ್ ಅವರು ನಾಗರಿಕ ಸೇವೆಗೆ ಸೇರಬೇಕೆಂದು ನಿರ್ಧರಿಸಿದ್ದರು. ಇದಾದ ನಂತರ UPSC ಪರೀಕ್ಷೆಯಲ್ಲಿ ಉತ್ತೀರ್ಣರಾದರು. 2007ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಸುಹಾಸ್ ಅವರು ಅಜಂಗಢದಲ್ಲಿ ಡಿಎಂ ಆಗಿದ್ದಾಗ ವೃತ್ತಿಪರವಾಗಿ ಬ್ಯಾಡ್ಮಿಂಟನ್ ಆರಂಭಿಸಿ ಇಂದು ಎರಡನೇ ಬಾರಿ ಪ್ಯಾರಾಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಪದಕಗಳ ಸಂಖ್ಯೆ 12ಕ್ಕೇರಿಕೆ

ಸುಹಾಸ್ ಅವರ ಬೆಳ್ಳಿ ಪದಕದೊಂದಿಗೆ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕಗಳ ಸಂಖ್ಯೆ ಒಟ್ಟು 12ಕ್ಕೇರಿದೆ. ಶೂಟರ್ ಅವನಿ ಲೆಖರಾ ಮತ್ತು ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿದ್ದಾರೆ. ಇದಲ್ಲದೇ ಭಾರತ ಇದುವರೆಗೆ 5 ಬೆಳ್ಳಿ ಹಾಗೂ 5 ಕಂಚಿನ ಪದಕ ಗೆದ್ದಿದೆ. ಸದ್ಯ ಭಾರತಕ್ಕೆ ಇನ್ನೂ ಹಲವು ಪದಕದ ಪಂದ್ಯಗಳು ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Mon, 2 September 24

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ