AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paralympics 2024: ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಸುಮಿತ್ ಆಂಟಿಲ್

Paris Paralympics 2024: ಸುಮಿತ್ ಬಾಲ್ಯದಿಂದಲೂ ತುಂಬಾ ಶ್ರಮಜೀವಿ. ಬಾಲ್ಯದಿಂದಲೂ ಕುಸ್ತಿಯಲ್ಲಿ ಆಸಕ್ತಿ ಹೊಂದಿದ್ದರು. ಅದಕ್ಕೇ ಕುಸ್ತಿಪಟು ಆಗಬೇಕು ಎಂದು ಆಸೆಪಟ್ಟು ಬಾಲ್ಯದಿಂದಲೂ ಅದಕ್ಕಾಗಿ ಶ್ರಮಿಸುತ್ತಿದ್ದ. ಆದರೆ ದುರಾದೃಷ್ಟ ಎಂಬಂತೆ 2015 ರಲ್ಲಿ ಸುಮಿತ್ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಯಿತು.

Paralympics 2024: ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಸುಮಿತ್ ಆಂಟಿಲ್
Sumit Antil
ಝಾಹಿರ್ ಯೂಸುಫ್
|

Updated on: Sep 03, 2024 | 7:29 AM

Share

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವಲ್ಲಿ ಸುಮಿತ್ ಆಂಟಿಲ್ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ಕೊಟ್ಟಿದ್ದ ಸುಮಿತ್ ಈ ಬಾರಿ ದಾಖಲೆಯೊಂದಿಗೆ ಬಂಗಾರದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಚಿನ್ನದ ಪದಕ ಗೆದ್ದರೆ, 67.03 ಮೀಟರ್ ದೂರ ಎಸೆದ ಶ್ರೀಲಂಕಾದ ದುಲಾನ್ ಬೆಳ್ಳಿ ಪದಕ ಗೆದ್ದರು. ಇನ್ನು ಆಸ್ಟ್ರೇಲಿಯಾದ ಬುರಿಯಾನ್ 64.89 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಹೊಸ ದಾಖಲೆ ಬರೆದ ಸುಮಿತ್:

ಸುಮಿತ್ ಆಂಟಿಲ್ ತನ್ನ ಮೊದಲ ಪ್ರಯತ್ನದಲ್ಲಿಯೇ ಪ್ಯಾರಾಲಿಂಪಿಕ್ಸ್​​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಮೊದಲ ಎಸೆತದಲ್ಲೇ 69.11 ಮೀಟರ್‌ ದೂರ ಕ್ರಮಿಸಿದ ಸುಮಿತ್, ಎರಡನೇ ಪ್ರಯತ್ನದ ಮೂಲಕ 70.59 ಮೀಟರ್ ತಲುಪಿ ಚಿನ್ನವನ್ನು ಖಚಿತಪಡಿಸಿಕೊಂಡರು. ಇನ್ನು ಮೂರನೇ ಪ್ರಯತ್ನದಲ್ಲಿ 66.66 ಮೀಟರ್ ದೂರವನ್ನು ಸಾಧಿಸಿದರು. ನಾಲ್ಕನೇ ಪ್ರಯತ್ನದಲ್ಲಿ ಫೌಲ್ ಥ್ರೋ ಮಾಡಿದರು. ಐದನೇ ಪ್ರಯತ್ನದಲ್ಲಿ 69.04 ಮೀಟರ್ ದೂರವನ್ನು ಸಾಧಿಸಿದರು. ಹಾಗೆಯೇ ಕೊನೆಯ ಪ್ರಯತ್ನದಲ್ಲಿ 66.57 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ಫೈನಲ್ ಸ್ಪರ್ಧೆಯನ್ನು ಮುಗಿಸಿದರು.

ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸುಮಿತ್ ಆಂಟಿಲ್ ಚಿನ್ನದ ಪದಕವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ವರ್ಷ ನಡೆದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 69.50 ಮೀಟರ್ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದರು. ಹಾಗೆಯೇ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು 68.55 ಮೀಟರ್‌ ದೂರ ಎಸೆದು ಚಿನ್ನದ ಪದಕವನ್ನು ಗೆದ್ದಿದ್ದರು. ಇದೀಗ ಈ ದಾಖಲೆಗಳನ್ನು ಮುರಿಯುವ ಮೂಲಕ 70.59 ಮೀಟರ್​ನೊಂದಿಗೆ ಸುಮಿತ್ ಆಂಟಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಪಘಾತದಿಂದ ಪ್ಯಾರಾಲಿಂಪಿಕ್ಸ್​ಗೆ:

ಸುಮಿತ್ ಆಂಟಿಲ್ ಅವರು 6 ಜುಲೈ 1998 ರಂದು ಹರಿಯಾಣದ ಖೇವ್ರಾದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ವಾಯುಪಡೆಯಲ್ಲಿ JWO ಅಧಿಕಾರಿಯಾಗಿದ್ದರು. ಸುಮಿತ್ ಬಾಲ್ಯದಿಂದಲೂ ತುಂಬಾ ಶ್ರಮಜೀವಿ. ಬಾಲ್ಯದಿಂದಲೂ ಕುಸ್ತಿಯಲ್ಲಿ ಆಸಕ್ತಿ ಹೊಂದಿದ್ದರು. ಅದಕ್ಕೇ ಕುಸ್ತಿಪಟು ಆಗಬೇಕು ಎಂದು ಆಸೆಪಟ್ಟು ಬಾಲ್ಯದಿಂದಲೂ ಅದಕ್ಕಾಗಿ ಶ್ರಮಿಸುತ್ತಿದ್ದ.

ಆದರೆ ದುರಾದೃಷ್ಟ ಎಂಬಂತೆ 2015 ರಲ್ಲಿ ಸುಮಿತ್ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಯಿತು. ಅವರ ತಂದೆ ಭಾರತೀಯ ಸೇನೆಯಲ್ಲಿದ್ದ ಕಾರಣ ಅವರನ್ನು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಸುಮಿತ್ ಅವರ ಮೊಣಕಾಲಿನ ಕೆಳಗಿನ ಭಾಗವನ್ನು ಕತ್ತರಿಸಬೇಕಾಯಿತು. 53 ದಿನಗಳ ವಿಶ್ರಾಂತಿಯ ನಂತರ ಅವರನ್ನು ಪುಣೆಯ ಕೃತಕ ಅಂಗ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಕೃತಕ ಕಾಲು ಅಥವಾ ಕೃತಕ ಕಾಲನ್ನು ಅಳವಡಿಸಲಾಯಿತು. ಇದರೊಂದಿಗೆ ಕುಸ್ತಿಪಟುವಾಗುವ ಅವರ ಕನಸುಗಳು ನುಚ್ಚುನೂರಾಯಿತು.

ಇದನ್ನೂ ಓದಿ: 2 ವರ್ಷ ಬೆಂಚ್ ಕಾಯಿಸಿದ RCBಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ ಮನೋಜ್ ಭಾಂಡಗೆ

ಅತ್ತ ಕೃತಕ ಕಾಲಿನ ಕಾರಣ ಕುಸ್ತಿಪಟುವಾಗುವ ಕನಸನ್ನು ತ್ಯಜಿಸಿದ ಸುಮಿತ್ ಆ ಬಳಿಕ ಪ್ಯಾರಾಲಿಂಪಿಕ್ಸ್​ನತ್ತ ಮುಖ ಮಾಡಿದರು. ಆರಂಭದಲ್ಲಿ ಅವರು ಶಾಟ್‌ಪುಟ್‌ ಆಗಬೇಕೆಂದು ಬಯಸಿದ್ದರು. ಈ ಬಗ್ಗೆ ಅಭಿಪ್ರಾಯ ಪಡೆಯಲು ಭಾರತದ ಕೋಚ್ ವೀರೇಂದ್ರ ಧಂಖರ್ ಅವರನ್ನು ಭೇಟಿಯಾದರು. ಅವರು ಜಾವೆಲಿನ್ ಕೋಚ್ ನವಲ್ ಸಿಂಗ್ ಅವರಿಗೆ ಸುಮಿತ್ ಅವರನ್ನು ಪರಿಚಯಿಸಿದರು. ಅವರ ಭೇಟಿಯ ಬಳಿಕ ಸುಮಿತ್ ಆಂಟಿಲ್ ಜಾವೆಲಿನ್ ಥ್ರೋನತ್ತ ಆಕರ್ಷಿತರಾದರು. ಆ ಬಳಿಕ ಶುರುವಾದ ಸತತ ಪ್ರಯತ್ನದ ಫಲವಾಗಿ ಇದೀಗ ಸುಮಿತ್ ಆಂಟಿಲ್ ಅಂತಾರಾಷ್ಟ್ರೀಯ ಮಟ್ಟದ ಪ್ಯಾರಾಲಿಂಪಿಯನ್​ ಆಗಿ ಮಿಂಚುತ್ತಿದ್ದಾರೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ