AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinesh Phogat: ವಿನೇಶ್ ಫೋಗಟ್ ಅನರ್ಹ: ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ CAS

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ 2024 ರಿಂದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿರುವ ಬಗ್ಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಇಂದು ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್ 11 ಕ್ಕೂ ಮುನ್ನ ತೀರ್ಪು ನೀಡುವುದಾಗಿ ತಿಳಿಸಿದೆ.

Vinesh Phogat: ವಿನೇಶ್ ಫೋಗಟ್ ಅನರ್ಹ: ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ CAS
ವಿನೇಶ್ ಫೋಗಟ್
ಪೃಥ್ವಿಶಂಕರ
|

Updated on:Aug 09, 2024 | 4:36 PM

Share

ಪ್ಯಾರಿಸ್ ಒಲಿಂಪಿಕ್ಸ್​ನ ಮಹಿಳಯೆರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿದ್ದ ಕಾರಣ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಆ ಬಳಿಕ ಈ ನಿರ್ಧಾರದ ವಿರುದ್ಧ ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಇದೀಗ ವಿನೇಶ್ ಅವರ ಮನವಿಯ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ, ‘ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್ 11 ಕ್ಕೂ ಮುನ್ನ ತೀರ್ಪು ನೀಡುವುದಾಗಿ ತಿಳಿಸಿದೆ.

ವಿನೇಶ್ ತನ್ನ ಮನವಿಯಲ್ಲಿ ತನಗೆ ಫೈನಲ್ ಪಂದ್ಯವನ್ನು ಆಡಲು ಅನುಮತಿ ನೀಡಬೇಕೆಂದು ಕೋರಿದ್ದರು. ಆದರೆ ವಿನೇಶ್ ಅವರ ಮನವಿಯ ಮೇರೆಗೆ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಆ ನಂತರ ಫೋಗಟ್ ಜಂಟಿ ಬೆಳ್ಳಿ ಪದಕವನ್ನಾದರೂ ನೀಡಬೇಕೆಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವನ್ನು ಕೋರಿದ್ದರು. ಇದೀಗ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು (ಸಿಎಎಸ್) ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ವಿನೇಶ್ ಫೋಗಟ್ ಅವರ ಅನರ್ಹತೆಯ ವಿರುದ್ಧದ ಅರ್ಜಿಯ ಬಗ್ಗೆ ಒಲಿಂಪಿಕ್ ಕ್ರೀಡಾಕೂಟ ಮುಗಿಯುವ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದಾಗಿ ತಿಳಿಸಿದೆ.

Vinesh Phogat CAS Appeal Live Updates: "The decision on Vinesh Phogat's plea against her disqualification is expected to be issued before the end of the Olympic Games," said CAS in an official statement.

ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಿನೇಶ್ ಫೋಗಟ್​ ಅವರ ಮನವಿಯ ಬಗ್ಗೆ ವಾದಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ದೇಶದ ಪ್ರಖ್ಯಾತ ವಕೀಲರಾದ ಮತ್ತು ದುಬಾರಿ ವಕೀಲರಲ್ಲಿ ಒಬ್ಬರಾಗಿರುವ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರನ್ನು ನೇಮಿಸಿದೆ.

ಕೋರ್ಟ್ ಆಫ್ ಆರ್ಬಿಟ್ರೇಶನ್ ಕಾರ್ಯವೇನು?

ಕೋರ್ಟ್ ಆಫ್ ಆರ್ಬಿಟ್ರೇಶನ್, ಕ್ರೀಡಾ ವಿವಾದಗಳನ್ನು ಪರಿಹರಿಸಲು 1984 ರಲ್ಲಿ ಸ್ಥಾಪಿಸಲಾದ ಸ್ವತಂತ್ರ ಸಂಸ್ಥೆಯಾಗಿದೆ. ಇದು ಸ್ವಿಟ್ಜರ್ಲೆಂಡ್‌ನ ಲೌಸನ್ನೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ನ್ಯೂಯಾರ್ಕ್ ನಗರ ಮತ್ತು ಸಿಡ್ನಿಯಲ್ಲಿ ನ್ಯಾಯಾಲಯಗಳನ್ನು ಹೊಂದಿದೆ. ಇದರ ಜೊತೆಗೆ ಪ್ರತಿ ಬಾರಿಯ ಒಲಿಂಪಿಕ್ಸ್​ನಲ್ಲೂ ಆತಿಥೇಯ ನಗರಗಳಲ್ಲಿ ತಾತ್ಕಾಲಿಕ ನ್ಯಾಯಾಲಯಗಳನ್ನು ಸ್ಥಾಪಿಸಿ ಕ್ರೀಡಾಕೂಟದಲ್ಲಿ ಕೇಳಿಬರುವ ದೂರಗಳನ್ನು ಇತ್ಯರ್ಥಗೊಳಿಸುವ ಕೆಲಸವನ್ನು ಮಾಡುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Fri, 9 August 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು