Paris Olympics 2024: ವಿನೇಶ್ ಫೋಗಟ್ ಅನರ್ಹ; ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

Paris Olympics 2024: ವಿನೇಶ್​ರನ್ನು ಭೇಟಿಯಾಗಿದ್ದ ಐಒಎ ಅಧ್ಯಕ್ಷೆ ಪಿಟಿ ಉಷಾ ಮಾತನಾಡಿ, ವಿನೇಶ್ ಅವರ ಅನರ್ಹತೆ ಆಘಾತಕಾರಿಯಾಗಿದೆ. ನಾನು ಸ್ವಲ್ಪ ಸಮಯಕ್ಕೂ ಮುಂಚೆ ಒಲಿಂಪಿಕ್ ವಿಲೇಜ್ ಪಾಲಿಕ್ಲಿನಿಕ್‌ನಲ್ಲಿ ವಿನೇಶ್ ಅವರನ್ನು ಭೇಟಿಯಾಗಿದ್ದೆ ಮತ್ತು ಅವರಿಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ಇಡೀ ದೇಶದಿಂದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದಿದ್ದಾರೆ.

Paris Olympics 2024: ವಿನೇಶ್ ಫೋಗಟ್ ಅನರ್ಹ; ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ
ವಿನೇಶ್ ಫೋಗಟ್, ಪಿಟಿ ಉಷಾ
Follow us
|

Updated on:Aug 07, 2024 | 4:57 PM

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್​ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಕೂಡ ಭಗ್ನಗೊಂಡಿದೆ. ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಕಾರಣದಿಂದ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್ ಅವರನ್ನು ಪ್ಯಾರಿಸ್​ನ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿರುವ ಕ್ಲಿನಿಕ್​ನಲ್ಲಿ ದಾಖಲಿಸಲಾಗಿದೆ. ಇದೀಗ ವಿನೇಶ್​ರನ್ನು ಭೇಟಿಯಾಗಿದ್ದ ಐಒಎ ಅಧ್ಯಕ್ಷೆ ಪಿಟಿ ಉಷಾ ಮಾತನಾಡಿ, ‘ವಿನೇಶ್ ಅವರ ಅನರ್ಹತೆ ಆಘಾತಕಾರಿಯಾಗಿದೆ. ನಾನು ಸ್ವಲ್ಪ ಸಮಯಕ್ಕೂ ಮುಂಚೆ ಒಲಿಂಪಿಕ್ ವಿಲೇಜ್ ಪಾಲಿಕ್ಲಿನಿಕ್‌ನಲ್ಲಿ ವಿನೇಶ್ ಅವರನ್ನು ಭೇಟಿಯಾಗಿದ್ದೆ ಮತ್ತು ಅವರಿಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ಇಡೀ ದೇಶದಿಂದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ. ನಾವು ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಮಾತನಾಡಿರುವ ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಮತ್ತು ತಂಡದ ವೈದ್ಯ ಪದ್ರಿವಾಲಾ, ‘ವಿನೇಶ್ ಫೋಗಟ್ ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ ಸಮಿತಿಗೆ ಪತ್ರ ಬರೆದು ವಿನೇಶ್ ಅವರನ್ನು ಹೊರಗಿಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದಿದ್ದಾರೆ. ಇದರ ಜೊತೆಗೆ ವಿನೇಶ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಇವರು, ‘ವಿನೇಶ್ ಅವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ಹೇಳಿದ್ದಾರೆ.

ತೂಕ ಇಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ

ಇನ್ನು ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ‘ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ, ಅಂತಹ ಪರಿಸ್ಥಿತಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಅದನ್ನು ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನಗಳನ್ನು ಮಾಡಿತು, ಅವರ ಕೂದಲನ್ನು ಸಹ ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂತ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡುಬಂದಿತ್ತು ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Wed, 7 August 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ