Paris Olympics 2024: ವಿನೇಶ್​ಗೆ ಫೈನಲ್ ಆಡುವ ಅವಕಾಶ ಸಿಗುತ್ತಾ ? ಅಂತರಾಷ್ಟ್ರೀಯ ಕುಸ್ತಿ ಒಕ್ಕೂಟ ಹೇಳಿದ್ದೇನು?

Paris Olympics 2024: ವಿನೇಶ್ ಫೋಗಟ್ ಫೈನಲ್ ಪಂದ್ಯವನ್ನು ಆಡಲು ಇನ್ನೂ ಏನಾದರೂ ಅವಕಾಶವಿದೆಯೇ ಎಂಬ ಪ್ರಶ್ನೆ ಭಾರತದ ಕೋಟ್ಯಂತರ ಕ್ರೀಡಾಭಿಮಾನಿಗಳ ಮನಸ್ಸಿನಲ್ಲಿ ಮೂಡುತ್ತಿದೆ. ಇದೀಗ ಈ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಸ್ಪಷ್ಟನೆ ನೀಡಿದೆ.

Paris Olympics 2024: ವಿನೇಶ್​ಗೆ ಫೈನಲ್ ಆಡುವ ಅವಕಾಶ ಸಿಗುತ್ತಾ ? ಅಂತರಾಷ್ಟ್ರೀಯ ಕುಸ್ತಿ ಒಕ್ಕೂಟ ಹೇಳಿದ್ದೇನು?
ವಿನೇಶ್ ಫೋಗಟ್
Follow us
|

Updated on: Aug 07, 2024 | 7:21 PM

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಅಥವಾ ಬೆಳ್ಳಿ ಪದಕದ ನಿರೀಕ್ಷೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಇದೀಗ ಯಾವ ಪದಕವೂ ಇಲ್ಲದೆ ಖಾಲಿ ಕೈಯಲ್ಲಿ ದೇಶಕ್ಕೆ ವಾಪಸ್ಸಾಗಬೇಕಾಗಿದೆ. ನಿಗದಿತ ತೂಕಕ್ಕಿಂತ ಕೇವಲ 100 ಗ್ರಾಂ ಹೆಚ್ಚಿದ್ದ ಕಾರಣ ವಿನೇಶ್ 50 ಕೆ.ಜಿ ವಿಭಾದ ಕುಸ್ತಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದಾರೆ. ಏತನ್ಮಧ್ಯೆ, ವಿನೇಶ್ ಫೋಗಟ್ ಫೈನಲ್ ಪಂದ್ಯವನ್ನು ಆಡಲು ಇನ್ನೂ ಏನಾದರೂ ಅವಕಾಶವಿದೆಯೇ ಎಂಬ ಪ್ರಶ್ನೆ ಭಾರತದ ಕೋಟ್ಯಂತರ ಕ್ರೀಡಾಭಿಮಾನಿಗಳ ಮನಸ್ಸಿನಲ್ಲಿ ಮೂಡುತ್ತಿದೆ. ಇದೀಗ ಈ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಸ್ಪಷ್ಟನೆ ನೀಡಿದೆ.

ಅಂತರಾಷ್ಟ್ರೀಯ ಕುಸ್ತಿ ಒಕ್ಕೂಟ ಹೇಳಿದ್ದೇನು?

ಅಂತರಾಷ್ಟ್ರೀಯ ಕುಸ್ತಿ ಫೆಡರೇಶನ್ (ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್) ಅಧ್ಯಕ್ಷ ನೆನಾದ್ ಲಾಲೋವಿಚ್ ಅವರು, ವಿನೇಶ್ ಅನರ್ಹತೆಯ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ‘ಇದರಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಾವು ನಿಯಮಗಳನ್ನು ಗೌರವಿಸಬೇಕು. ವಿನೇಶ್​ಗೆ ಈ ರೀತಿ ಆಗಿರುವುದು ನನಗೆ ತುಂಬಾ ದುಃಖ ತಂದಿದೆ. ಅವರು ನಿಗದಿತ ತೂಕಕ್ಕಿಂತ ಹೆಚ್ಚು ತೂಕ ಇದ್ದರು. ಅದೇನೆ ಇದ್ದರೂ ನಿಯಮಗಳು ಮತ್ತು ವಿಧಾನವು ಸಾರ್ವಜನಿಕವಾಗಿದೆ. ನಿಯಮಬಾಹಿರವಾಗಿ ವಿನೇಶ್​ಗೆ ಫೈನಲ್ ಆಡಲು ಅವಕಾಶ ನೀಡಬೇಕೆಂದು ಜನರು ಮಾತನಾಡುತ್ತಿರುವ ರೀತಿ ಸಮಂಜಸವಲ್ಲ. ಆಟದಲ್ಲಿ ಭಾಗವಹಿಸಲು ಬರುವವರಿಗೆ ನಿಯಮಗಳ ಅರಿವಿದೆ. ಹೀಗಾಗಿ ವಿನೇಶ್​ಗೆ ಮುಂದೆಯೂ ಸಾಕಷ್ಟು ಅವಕಾಶಗಳಿವೆ. ಆದರೆ ಈ ಬಾರಿ ಜನರು ನಿರೀಕ್ಷಿಸುತ್ತಿರುವಂತೆ ಯಾವುದು ನಡೆಯುವುದಿಲ್ಲ ಎಂದಿದ್ದಾರೆ.

ಭಾರತೀಯ ಕುಸ್ತಿ ಸಂಸ್ಥೆಯ ಪ್ರತಿಕ್ರಿಯೆ ಏನು?

ವಿನೇಶ್ ಅವರನ್ನು ಅನರ್ಹಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ಗೆ ಭಾರತೀಯ ಕುಸ್ತಿ ಫೆಡರೇಶನ್ ಮನವಿ ಮಾಡಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿಟಿ ಉಷಾ ಕೂಡ ತಮ್ಮ ಪ್ರತಿಕ್ರಿಯೆಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಒಕ್ಕೂಟದ ಮುಂದೆ ತಮ್ಮ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸುತ್ತಿರುವುದಾಗಿ ಹೇಳಿದ್ದಾರೆ.

ವಿನೇಶ್​ರನ್ನು ಅನರ್ಹಗೊಳಿಸಿದ್ಯಾಕೆ?

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿದ್ದರು. ಮೊದಲ ಪಂದ್ಯದಲ್ಲಿಯೇ ವಿಶ್ವದ ನಂ-1 ಶ್ರೇಯಾಂಕದ ಕುಸ್ತಿಪಟುವನ್ನು ಸೋಲಿಸುವ ಮೂಲಕ ಸ್ಪರ್ಧೆಯನ್ನು ಇನ್ನಷ್ಟು ರೋಚಕಗೊಳಿಸಿದ್ದರು. ಇದಾದ ಬಳಿಕ ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು. ಇದಾದ ನಂತರ, ಫೈನಲ್ ಪಂದ್ಯಕ್ಕೂ ಮುನ್ನ ಅವರ ತೂಕ ಮಾಡಿದಾಗ, ಅವರು ನಿಗದಿತ ತೂಕಕ್ಕಿಂತ 100 ಗ್ರಾಂ ಅಧಿಕವಿರುವುದು ಕಂಡುಬಂದಿತ್ತು. ಇದಾದ ಬಳಿಕ ಅವರ ವಿರುದ್ಧ ಕ್ರಮ ಕೈಗೊಂಡು ಟೂರ್ನಿಯಿಂದ ಅನರ್ಹರೆಂದು ಘೋಷಿಸಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್