AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಪಾರುಲ್ ಚೌಧರಿ

Parul Chaudhary: ಈ ವರ್ಷದ ಆಗಸ್ಟ್‌ನಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವರು 9 ನಿಮಿಷ 15.31 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದರು. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅರ್ಹತೆ ಪಡೆದಿದ್ದರು.

Asian Games: ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಪಾರುಲ್ ಚೌಧರಿ
Parul Chaudhary
TV9 Web
| Edited By: |

Updated on: Oct 03, 2023 | 9:16 PM

Share

ಭಾರತದ ಪಾರುಲ್ ಚೌಧರಿ ಏಷ್ಯನ್ ಗೇಮ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಪಾರುಲ್ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೂರನೇ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ.

ವಿಶೇಷ ಎಂದರೆ ಪಾರುಲ್ 3000 ಮೀಟರ್ ಓಟದಲ್ಲಿ ಭಾರತಕ್ಕೆ ಬೆಳ್ಳಿ ಪದಕವನ್ನು ಗೆದ್ದಿದ್ದರು. ಇದೀಗ 5000 ಮೀಟರ್​ ರೇಸ್​ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿಯ ಏಷ್ಯನ್ ಗೇಮ್ಸ್‌ನ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಇದು ಭಾರತದ ಮೂರನೇ ಸ್ವರ್ಣ ಪದಕ. ಇದಕ್ಕೂ ಮುನ್ನ ಶಾಟ್‌ಪುಟ್ ಆಟಗಾರ ತಜಿಂದರ್‌ಪಾಲ್ ಸಿಂಗ್ ತೂರ್ ಮತ್ತು ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್ ವಿಜೇತ ಅವಿನಾಶ್ ಸಬ್ಲೆ ಚಿನ್ನದ ಪದಕಗಳನ್ನು ಗೆದ್ದಿದ್ದರು.

ಆದರೆ ಏಷ್ಯನ್ ಗೇಮ್ಸ್​ ಮೂಲಕ ಪಾರುಲ್​ಗೆ ತಮ್ಮ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. ಅಂದರೆ ಈ ವರ್ಷದ ಆಗಸ್ಟ್‌ನಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವರು 9 ನಿಮಿಷ 15.31 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದರು. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅರ್ಹತೆ ಪಡೆದಿದ್ದರು.

ವಿತ್ಯಾ ರಾಮ್‌ರಾಜ್​ಗೆ ಕಂಚಿನ ಪದಕ:

ಮಹಿಳೆಯರ 400 ಮೀ ಹರ್ಡಲ್ಸ್‌ನಲ್ಲಿ ವಿತ್ಯಾ ರಾಮ್‌ರಾಜ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ 55.68 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಕೊಂಡಿದ್ದಾರೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ