AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕೇರ್ಸ್ ಫಂಡ್​ಗೆ ನಾನು ದೇಣಿಗೆ ನೀಡುವುದಿಲ್ಲ! ಉಲ್ಟಾ ಹೊಡೆದ ಪ್ಯಾಟ್​ ಕಮ್ಮಿನ್ಸ್.. ಕಾರಣವೇನು ಗೊತ್ತಾ?

Pat Cummins: ಯುನಿಸೆಫ್ ಆಸ್ಟ್ರೇಲಿಯಾಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಆರ್ಥಿಕ ನೆರವು ನೀಡಿದ ನಂತರ, ಕಮ್ಮಿನ್ಸ್ ತನ್ನ ಮನಸ್ಸನ್ನು ಬದಲಾಯಿಸಿದಂತೆ ತೋರುತ್ತದೆ.

ಪಿಎಂ ಕೇರ್ಸ್ ಫಂಡ್​ಗೆ ನಾನು ದೇಣಿಗೆ ನೀಡುವುದಿಲ್ಲ! ಉಲ್ಟಾ ಹೊಡೆದ ಪ್ಯಾಟ್​ ಕಮ್ಮಿನ್ಸ್.. ಕಾರಣವೇನು ಗೊತ್ತಾ?
ಪ್ಯಾಟ್ ಕಮ್ಮಿನ್ಸ್
ಪೃಥ್ವಿಶಂಕರ
|

Updated on: May 03, 2021 | 7:48 PM

Share

ಆಸ್ಟ್ರೇಲಿಯಾದ ವೇಗದ ಬೌಲರ್ ಕೋಲ್ಕತಾ ನೈಟ್ ರೈಡರ್ಸ್‌ನ ಪ್ಯಾಟ್ ಕಮ್ಮಿನ್ಸ್ ಇತ್ತೀಚೆಗೆ ಭಾರತದ ಕೊರೊನಾ ರೋಗಿಗಳಿಗೆ ಆಮ್ಲಜನಕದ ಸರಬರಾಜಿಗೆ ಸಹಾಯವಾಗಲು 50000 ಡಾಲರ್​ ಹಣವನ್ನು ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಪಿಎಂ ಕೇರ್ಸ್ ಫಂಡ್​ಗೆ 37 ಲಕ್ಷ ರೂಪಾಯಿ ನೀಡುವ ಬಗ್ಗೆ ಮಾತನಾಡಿದರು. ಆದರೆ ಈಗ ಅವರು ಪಿಎಂ ಕೇರ್ಸ್ ಫಂಡ್ ಬದಲಿಗೆ ಬೇರೆಡೆ ಹಣವನ್ನು ನೀಡಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಈ ಹಣವನ್ನು ಯುನಿಸೆಫ್ ಆಸ್ಟ್ರೇಲಿಯಾದ ಇಂಡಿಯಾ ಕೋವಿಡ್ -19 ಕ್ರೈಸಿಸ್ ಅಪೀಲ್‌ಗೆ ನೀಡಿದ್ದಾರೆ. ಕಮ್ಮಿನ್ಸ್ ಈ ಮೊತ್ತವನ್ನು ಒಂದು ವಾರದ ಹಿಂದೆ ಪಿಎಂ ಕೇರ್ಸ್ ಫಂಡ್‌ಗೆ ನೀಡುವುದಾಗಿ ಭರವಸೆ ನೀಡಿದರು.

ಯುನಿಸೆಫ್ ಆಸ್ಟ್ರೇಲಿಯಾವನ್ನು ಆರಿಸಿಕೊಂಡಿದ್ದಾರೆ ಭಾರತವು ಗಂಭೀರ ಆರೋಗ್ಯ ಬಿಕ್ಕಟ್ಟಿನಿಂದ ಬಳಲುತ್ತಿದ್ದು, 27 ವರ್ಷದ ವೇಗದ ಬೌಲರ್ ಕಳೆದ ಸೋಮವಾರ ಕೋವಿಡ್‌ನ ಹೆಚ್ಚುತ್ತಿರುವ ಪ್ರಕರಣಗಳೊಂದಿಗೆ ಹೋರಾಡುತ್ತಿರುವ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಗಾಗಿ ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಕಮ್ಮಿನ್ಸ್ ಪಿಎಂ ಕೇರ್ಸ್ ಫಂಡ್‌ಗೆ ಹಣವನ್ನು ನೀಡುವುದಾಗಿ ಘೋಷಿಸಿದಾಗ, ಅನೇಕ ಜನರು ಸೋಷಿಯಲ್ ಮೀಡಿಯಾದಲ್ಲಿ ಅವರ ನಿರ್ಧಾರವನ್ನು ಪ್ರಶ್ನಿಸಿದರು. ಪಾರದರ್ಶಕತೆಯ ಕೊರತೆಯನ್ನು ಉಲ್ಲೇಖಿಸಿ ಹಣವನ್ನು ಬೇರೆಡೆ ದಾನ ಮಾಡಲು ಅವರನ್ನು ಕೇಳಿದ್ದರು. ಆದಾಗ್ಯೂ, ಪ್ಯಾಟ್ ಕಮ್ಮಿನ್ಸ್ ಅವರು ಪಿಎಂ ಕೇರ್ಸ್ ಫಂಡ್‌ಗೆ ಹಣವನ್ನು ನೀಡುವ ನಿರ್ಧಾರವನ್ನು ಏಕೆ ಬದಲಾಯಿಸಿದರು ಮತ್ತು ಯುನಿಸೆಫ್ ಆಸ್ಟ್ರೇಲಿಯಾವನ್ನು ಏಕೆ ಆರಿಸಿಕೊಂಡರು ಎಂಬುದನ್ನು ವಿವರಿಸಲಿಲ್ಲ.

ಕ್ರಿಕೆಟ್ ಆಸ್ಟ್ರೇಲಿಯಾ ಅದ್ಭುತ ಕೆಲಸ ಮಾಡಿದೆ ಯುನಿಸೆಫ್ ಆಸ್ಟ್ರೇಲಿಯಾಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಆರ್ಥಿಕ ನೆರವು ನೀಡಿದ ನಂತರ, ಕಮ್ಮಿನ್ಸ್ ತನ್ನ ಮನಸ್ಸನ್ನು ಬದಲಾಯಿಸಿದಂತೆ ತೋರುತ್ತದೆ. ಕಮಿನ್ಸ್ ತನ್ನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೀಗೆ ಬರೆದಿದ್ದಾರೆ, ‘ಕ್ರಿಕೆಟ್ ಆಸ್ಟ್ರೇಲಿಯಾ ಅದ್ಭುತ ಕೆಲಸ ಮಾಡಿದೆ, ನನ್ನ ದೇಣಿಗೆಯನ್ನು ಯುನಿಸೆಫ್ ಆಸ್ಟ್ರೇಲಿಯಾದ ಇಂಡಿಯಾ ಕೋವಿಡ್ -19 ಕ್ರೈಸಿಸ್ ಅಪೀಲ್‌ಗೆ ಹಂಚಿಕೆ ಮಾಡಿದ್ದೇನೆ. ನಿಮಗೆ ಸಾಧ್ಯವಾದರೆ, ದಯವಿಟ್ಟು ಯುನಿಸೆಫ್ ಆಸ್ಟ್ರೇಲಿಯಾವನ್ನು ಬೆಂಬಲಿಸಿ ಎಂದಿದ್ದಾರೆ.

ಭಾರತದ ಕೋವಿಡ್ -19 ವಿರುದ್ಧದ ಹೋರಾಟಕ್ಕೆ 50,000 ಆಸ್ಟ್ರೇಲಿಯಾ ಡಾಲರ್‌ಗಳನ್ನು ಸಹಾಯ ಮಾಡುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸೋಮವಾರ ವಾಗ್ದಾನ ಮಾಡಿದೆ ಮತ್ತು ತಮ್ಮ ಆಟಗಾರರ ಸಂಘ ಮತ್ತು ಯುನಿಸೆಫ್‌ನ ಬೆಂಬಲದೊಂದಿಗೆ ಹೆಚ್ಚಿನ ಹಣವನ್ನು ಸಂಗ್ರಹಿಸುವುದಾಗಿ ಹೇಳಿದರು.

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ