AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ. ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ […]

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?
ಐಪಿಎಲ್​ ಟ್ರೋಪಿ
KUSHAL V
|

Updated on:Aug 10, 2020 | 9:09 PM

Share

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ.

ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ ಔಷಧಿಗಳನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ನೆರವಾಗಬಹುದು ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಂಸ್ಥೆಯ ವಕ್ತಾರ SK ತಿಜಾರವಾಲಾ ಹೇಳಿದ್ದಾರೆ.

ಪ್ರಧಾನಿ ಮೋದಿಯ Vocal for local ನಿಲುವಿಗೆ ಬೆಂಬಲ ಸೂಚಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಪರಿಚಯವೂ ಆಗಲಿದೆ ಎಂದು ತಿಜಾರವಾಲಾ ಹೇಳಿದ್ದಾರೆ. ಆದರೆ, ಈ ಕುರಿತು ಸದ್ಯ ಪತಂಜಲಿ ಸಂಸ್ಥೆಯು ಅಂತಿಮ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Published On - 9:01 pm, Mon, 10 August 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ