AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB Playing XI: Rcb ತಂಡದಲ್ಲಿ ಮಹತ್ವದ ಬದಲಾವಣೆ: ಉಭಯ ತಂಡಗಳು ಹೀಗಿವೆ

PBKS vs RCB Playing XI: ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್ ಇದ್ದರೆ, ಪಂಜಾಬ್ ತಂಡದಲ್ಲಿ ಶಿಖರ್ ಧವನ್ ಇದ್ದಾರೆ. ಹಾಗೆಯೇ ದಿನೇಶ್ ಕಾರ್ತಿಕ್​ಗೆ ಸರಿಸಾಟಿಯಾಗಿ ಮಯಾಂಕ್ ಅಗರ್ವಾಲ್ ಇದ್ದಾರೆ. ಇನ್ನು ಆರ್​ಸಿಬಿಯಲ್ಲಿ ವಿರಾಟ್ ಕೊಹ್ಲಿ ಇದ್ದರೆ ಪಂಜಾಬ್ ತಂಡದಲ್ಲಿ ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಕಾಣಿಸಿಕೊಂಡಿದ್ದಾರೆ.

PBKS vs RCB Playing XI: Rcb ತಂಡದಲ್ಲಿ ಮಹತ್ವದ ಬದಲಾವಣೆ: ಉಭಯ ತಂಡಗಳು ಹೀಗಿವೆ
PBKS vs RCB Playing XI
TV9 Web
| Edited By: |

Updated on:Mar 27, 2022 | 7:18 PM

Share

RCB Playing 11: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ (IPL 2022) 3ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು ಟಾಸ್ ಗೆದ್ದಿದೆ. ಅಲ್ಲದೆ ನಾಯಕ  ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೊದಲು ಬ್ಯಾಟ್ ಮಾಡಲಿದ್ದು, ಈ ಮೂಲಕ ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ. ಉಭಯ ತಂಡಗಳೂ ಮೊದಲ ಪಂದ್ಯದಲ್ಲಿ ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಹೀಗಾಗಿ ಎರಡೂ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು. ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದೆ. ಆದರೆ ಈ ಹಿಂದಿನ ಅಂಕಿ ಅಂಶಗಳನ್ನು ನೋಡಿದ್ರೆ ಪಂಜಾಬ್ ಕಿಂಗ್ಸ್​ ಮೇಲುಗೈ ಹೊಂದಿದೆ.

ಏಕೆಂದರೆ ಪಂಜಾಬ್ ಕಿಂಗ್ಸ್ ಹಾಗೂ RCB ಇದುವರೆಗೆ 28 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ 13 ಬಾರಿ ಮಾತ್ರ ಗೆದ್ದಿದೆ. ಅಂದರೆ 15 ಗೆಲುವು ದಾಖಲಿಸಿ ಪಂಜಾಬ್ ಕಿಂಗ್ಸ್​ ಮೇಲುಗೈ ಹೊಂದಿದೆ. ಹಾಗೆಯೇ ಕೊನೆಯ 5 ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ 3 ಪಂದ್ಯ ಗೆದ್ದಿದೆ. ಇದಾಗ್ಯೂ ಕಳೆದ ಬಾರಿ ಎರಡೂ ತಂಡಗಳು ಒಂದೊಂದು ಪಂದ್ಯ ಗೆದ್ದುಕೊಂಡಿತ್ತು. ಆದರೆ ಈ ಹಿಂದಿನ ಆರ್​ಸಿಬಿ ವಿರುದ್ದದ ಪಂದ್ಯದ ಗೆಲುವಿನಲ್ಲಿ ಕೆಎಲ್ ರಾಹುಲ್ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ಕೆಎಲ್ ರಾಹುಲ್ ಪಂಜಾಬ್ ತಂಡದಲ್ಲಿಲ್ಲ. ಅದೇ ರೀತಿ ಇತ್ತ ಆರ್​ಸಿಬಿ ತಂಡದಲ್ಲಿ ಎಬಿಡಿ ಕೂಡ ಇಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ. ಹೀಗಾಗಿ ಉಭಯ ತಂಡಗಳಿಂದ ಸಮಬಲದ ಹೋರಾಟ ನಿರೀಕ್ಷಿಸಬಹುದು.

ಇನ್ನು ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್ ಇದ್ದರೆ, ಪಂಜಾಬ್ ತಂಡದಲ್ಲಿ ಶಿಖರ್ ಧವನ್ ಇದ್ದಾರೆ. ಹಾಗೆಯೇ ದಿನೇಶ್ ಕಾರ್ತಿಕ್​ಗೆ ಸರಿಸಾಟಿಯಾಗಿ ಮಯಾಂಕ್ ಅಗರ್ವಾಲ್ ಇದ್ದಾರೆ. ಇನ್ನು ಆರ್​ಸಿಬಿಯಲ್ಲಿ ವಿರಾಟ್ ಕೊಹ್ಲಿ ಇದ್ದರೆ ಪಂಜಾಬ್ ತಂಡದಲ್ಲಿ ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಡೇಂಜರಸ್ ಶಾರೂಖ್ ಖಾನ್ ಕೂಡ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಹಾಗೆಯೇ ಬೌಲರ್​ಗಳಾಗಿ ಇತ್ತ ಹರ್ಷಲ್ ಪಟೇಲ್ ಹಾಗೂ ಸಿರಾಜ್ ಇದ್ದರೆ, ಅತ್ತ ಅರ್ಷದೀಪ್ ಸಿಂಗ್ ಹಾಗೂ ಸಂದೀಪ್ ಶರ್ಮಾ ಕಾಣಿಸಿಕೊಂಡಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.

ಆರ್​ಸಿಬಿ ಪ್ಲೇಯಿಂಗ್ 11: ಫಾಫ್ ಡುಪ್ಲೆಸಿಸ್, ಅನೂಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫಾನ್ ರುದರ್​ಫೋರ್ಡ್​, ದಿನೇಶ್ ಕಾರ್ತಿಕ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Published On - 7:16 pm, Sun, 27 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ