AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ

Pro Kabaddi 2022: ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು.

Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ
PKL 8
TV9 Web
| Edited By: |

Updated on: Jan 20, 2022 | 10:30 PM

Share

ಪ್ರೋ ಕಬಡ್ಡಿ ಲೀಗ್​ನ 67ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್ ರೋಚಕ ಜಯ ಸಾಧಿಸಿದೆ. ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ಆರಂಭದಲ್ಲಿ ಬೆಂಗಾಲ್ ವಾರಿಯರ್ಸ್ ಮೇಲುಗೈ ಸಾಧಿಸಿತ್ತು. ಅದರಂತೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ ಕಲೆಹಾಕುವ ಮೂಲಕ ಆರಂಭದಲ್ಲೇ 5 ಪಾಯಿಂಟ್​ಗಳಿಸಿತು. ಈ ವೇಳೆ ಹಿಂದೆ ಉಳಿದಿದ್ದ ಬೆಂಗಳೂರು ಬುಲ್ಸ್ ಆ ಬಳಿಕ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾದರು. ಅದರಂತೆ ತಂಡದ ಉತ್ತಮ ಹೊಂದಾಣಿಕೆಯ ಆಟದಿಂದಾಗಿ ಮೊದಲಾರ್ಧ ಮುಕ್ತಾಯದ ವೇಳೆಗೆ ಬೆಂಗಳೂರು ಬುಲ್ಸ್ ತಂಡವು 13 ಪಾಯಿಂಟ್ ಕಲೆಹಾಕಿತು. ಈ ವೇಳೆಗೆ ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 14 ಪಾಯಿಂಟ್ ಮಾತ್ರ.

1 ಪಾಯಿಂಟ್ ಮುನ್ನಡೆ ಪಡೆದಿದ್ದ ಬೆಂಗಾಲ್ ವಾರಿಯರ್ಸ್​ ವಿರುದ್ದ ದ್ವಿತಿಯಾರ್ಧದಲ್ಲಿ ಬೆಂಗಳೂರು ಬುಲ್ಸ್​ ಆರಂಭದಲ್ಲೇ ಶಾಕ್ ನೀಡಿತು. ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ರೈಡಿಂಗ್ ಮೂಲಕ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸಿದರು. ಪರಿಣಾಮ ಬೆಂಗಾಲ್ ತಂಡ ಆಲೌಟ್ ಆಯಿತು.

ಇದರೊಂದಿಗೆ ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು. ಆದರೆ ಈ ಹಂತದಲ್ಲಿ ಕಂಬ್ಯಾಕ್ ಮಾಡಿ ಬೆಂಗಾಲ್ ವಾರಿಯರ್ಸ್ ಪರ ಸುಖೇಶ್ ಹೆಗ್ಡೆ, ನಬಿಭಕ್ಷ್ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಕಲೆಹಾಕಿದರು. ಪರಿಣಾಮ ಬೆಂಗಳೂರು ಬುಲ್ಸ್ 30 ಅಂಕಗಳಿಸುವಷ್ಟರಲ್ಲಿ ಬೆಂಗಾಲ್ ವಾರಿಯರ್ಸ್ 32 ಪಾಯಿಂಟ್​ಗಳಿಸಿತು.

ಕೊನೆಯ 5 ನಿಮಿಷಗಳಿರುವಾಗ 6 ಪಾಯಿಂಟ್ ಮುನ್ನಡೆ ಪಡೆದ ಬೆಂಗಾಲ್ ವಾರಿಯರ್ಸ್ ಮತ್ತೊಮ್ಮೆ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಕೊನೆಯ ಹಂತದಲ್ಲಿ ಬೆಂಗಳೂರು ಬುಲ್ಸ್ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ. ಅಂತಿಮವಾಗಿ ಬೆಂಗಾಲ್ ವಾರಿಯರ್ಸ್ ತಂಡವು 1 ಅಂಕದಿಂದ ರೋಚಕ ಜಯ ಸಾಧಿಸಿತು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು