Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ

Pro Kabaddi 2022: ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು.

Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ
PKL 8
Follow us
| Updated By: ಝಾಹಿರ್ ಯೂಸುಫ್

Updated on: Jan 20, 2022 | 10:30 PM

ಪ್ರೋ ಕಬಡ್ಡಿ ಲೀಗ್​ನ 67ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್ ರೋಚಕ ಜಯ ಸಾಧಿಸಿದೆ. ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ಆರಂಭದಲ್ಲಿ ಬೆಂಗಾಲ್ ವಾರಿಯರ್ಸ್ ಮೇಲುಗೈ ಸಾಧಿಸಿತ್ತು. ಅದರಂತೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ ಕಲೆಹಾಕುವ ಮೂಲಕ ಆರಂಭದಲ್ಲೇ 5 ಪಾಯಿಂಟ್​ಗಳಿಸಿತು. ಈ ವೇಳೆ ಹಿಂದೆ ಉಳಿದಿದ್ದ ಬೆಂಗಳೂರು ಬುಲ್ಸ್ ಆ ಬಳಿಕ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾದರು. ಅದರಂತೆ ತಂಡದ ಉತ್ತಮ ಹೊಂದಾಣಿಕೆಯ ಆಟದಿಂದಾಗಿ ಮೊದಲಾರ್ಧ ಮುಕ್ತಾಯದ ವೇಳೆಗೆ ಬೆಂಗಳೂರು ಬುಲ್ಸ್ ತಂಡವು 13 ಪಾಯಿಂಟ್ ಕಲೆಹಾಕಿತು. ಈ ವೇಳೆಗೆ ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 14 ಪಾಯಿಂಟ್ ಮಾತ್ರ.

1 ಪಾಯಿಂಟ್ ಮುನ್ನಡೆ ಪಡೆದಿದ್ದ ಬೆಂಗಾಲ್ ವಾರಿಯರ್ಸ್​ ವಿರುದ್ದ ದ್ವಿತಿಯಾರ್ಧದಲ್ಲಿ ಬೆಂಗಳೂರು ಬುಲ್ಸ್​ ಆರಂಭದಲ್ಲೇ ಶಾಕ್ ನೀಡಿತು. ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ರೈಡಿಂಗ್ ಮೂಲಕ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸಿದರು. ಪರಿಣಾಮ ಬೆಂಗಾಲ್ ತಂಡ ಆಲೌಟ್ ಆಯಿತು.

ಇದರೊಂದಿಗೆ ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು. ಆದರೆ ಈ ಹಂತದಲ್ಲಿ ಕಂಬ್ಯಾಕ್ ಮಾಡಿ ಬೆಂಗಾಲ್ ವಾರಿಯರ್ಸ್ ಪರ ಸುಖೇಶ್ ಹೆಗ್ಡೆ, ನಬಿಭಕ್ಷ್ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಕಲೆಹಾಕಿದರು. ಪರಿಣಾಮ ಬೆಂಗಳೂರು ಬುಲ್ಸ್ 30 ಅಂಕಗಳಿಸುವಷ್ಟರಲ್ಲಿ ಬೆಂಗಾಲ್ ವಾರಿಯರ್ಸ್ 32 ಪಾಯಿಂಟ್​ಗಳಿಸಿತು.

ಕೊನೆಯ 5 ನಿಮಿಷಗಳಿರುವಾಗ 6 ಪಾಯಿಂಟ್ ಮುನ್ನಡೆ ಪಡೆದ ಬೆಂಗಾಲ್ ವಾರಿಯರ್ಸ್ ಮತ್ತೊಮ್ಮೆ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಕೊನೆಯ ಹಂತದಲ್ಲಿ ಬೆಂಗಳೂರು ಬುಲ್ಸ್ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ. ಅಂತಿಮವಾಗಿ ಬೆಂಗಾಲ್ ವಾರಿಯರ್ಸ್ ತಂಡವು 1 ಅಂಕದಿಂದ ರೋಚಕ ಜಯ ಸಾಧಿಸಿತು.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?