AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ

Pro Kabaddi 2022: ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು.

Pro Kabaddi 2022: ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್​ಗೆ ರೋಚಕ ಜಯ
PKL 8
TV9 Web
| Edited By: |

Updated on: Jan 20, 2022 | 10:30 PM

Share

ಪ್ರೋ ಕಬಡ್ಡಿ ಲೀಗ್​ನ 67ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ವಿರುದ್ದ ಬೆಂಗಾಲ್ ವಾರಿಯರ್ಸ್ ರೋಚಕ ಜಯ ಸಾಧಿಸಿದೆ. ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ಆರಂಭದಲ್ಲಿ ಬೆಂಗಾಲ್ ವಾರಿಯರ್ಸ್ ಮೇಲುಗೈ ಸಾಧಿಸಿತ್ತು. ಅದರಂತೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ ಕಲೆಹಾಕುವ ಮೂಲಕ ಆರಂಭದಲ್ಲೇ 5 ಪಾಯಿಂಟ್​ಗಳಿಸಿತು. ಈ ವೇಳೆ ಹಿಂದೆ ಉಳಿದಿದ್ದ ಬೆಂಗಳೂರು ಬುಲ್ಸ್ ಆ ಬಳಿಕ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾದರು. ಅದರಂತೆ ತಂಡದ ಉತ್ತಮ ಹೊಂದಾಣಿಕೆಯ ಆಟದಿಂದಾಗಿ ಮೊದಲಾರ್ಧ ಮುಕ್ತಾಯದ ವೇಳೆಗೆ ಬೆಂಗಳೂರು ಬುಲ್ಸ್ ತಂಡವು 13 ಪಾಯಿಂಟ್ ಕಲೆಹಾಕಿತು. ಈ ವೇಳೆಗೆ ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 14 ಪಾಯಿಂಟ್ ಮಾತ್ರ.

1 ಪಾಯಿಂಟ್ ಮುನ್ನಡೆ ಪಡೆದಿದ್ದ ಬೆಂಗಾಲ್ ವಾರಿಯರ್ಸ್​ ವಿರುದ್ದ ದ್ವಿತಿಯಾರ್ಧದಲ್ಲಿ ಬೆಂಗಳೂರು ಬುಲ್ಸ್​ ಆರಂಭದಲ್ಲೇ ಶಾಕ್ ನೀಡಿತು. ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ರೈಡಿಂಗ್ ಮೂಲಕ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸಿದರು. ಪರಿಣಾಮ ಬೆಂಗಾಲ್ ತಂಡ ಆಲೌಟ್ ಆಯಿತು.

ಇದರೊಂದಿಗೆ ಬೆಂಗಳೂರು ಬುಲ್ಸ್ ತಂಡ ಮುನ್ನಡೆ ಪಡೆಯಿತು. ಒಂದು ಹಂತದಲ್ಲಿ ಬೆಂಗಳೂರು ಬುಲ್ಸ್ ತಂಡವು 27 ಅಂಕ ಪಡೆದಿದ್ದರೆ, ಬೆಂಗಾಲ್ ವಾರಿಯರ್ಸ್ ಗಳಿಸಿದ್ದು 21 ಅಂಕ ಮಾತ್ರ. 6 ಅಂಕಗಳ ಮುನ್ನಡೆಯೊಂದಿಗೆ ಬೆಂಗಳೂರು ಬುಲ್ಸ್ ಹೋರಾಟ ಮುಂದುವರೆಸಿತು. ಆದರೆ ಈ ಹಂತದಲ್ಲಿ ಕಂಬ್ಯಾಕ್ ಮಾಡಿ ಬೆಂಗಾಲ್ ವಾರಿಯರ್ಸ್ ಪರ ಸುಖೇಶ್ ಹೆಗ್ಡೆ, ನಬಿಭಕ್ಷ್ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಕಲೆಹಾಕಿದರು. ಪರಿಣಾಮ ಬೆಂಗಳೂರು ಬುಲ್ಸ್ 30 ಅಂಕಗಳಿಸುವಷ್ಟರಲ್ಲಿ ಬೆಂಗಾಲ್ ವಾರಿಯರ್ಸ್ 32 ಪಾಯಿಂಟ್​ಗಳಿಸಿತು.

ಕೊನೆಯ 5 ನಿಮಿಷಗಳಿರುವಾಗ 6 ಪಾಯಿಂಟ್ ಮುನ್ನಡೆ ಪಡೆದ ಬೆಂಗಾಲ್ ವಾರಿಯರ್ಸ್ ಮತ್ತೊಮ್ಮೆ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಕೊನೆಯ ಹಂತದಲ್ಲಿ ಬೆಂಗಳೂರು ಬುಲ್ಸ್ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ. ಅಂತಿಮವಾಗಿ ಬೆಂಗಾಲ್ ವಾರಿಯರ್ಸ್ ತಂಡವು 1 ಅಂಕದಿಂದ ರೋಚಕ ಜಯ ಸಾಧಿಸಿತು.

Follow Us
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು