AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ‘ಯುವ ಸಂವಾದ’

PM Narendra Modi: ರಾಷ್ಟ್ರೀಯ ಕ್ರೀಡಾದಿನದ ಅಂಗವಾಗಿ ಇಂದು ದೇಶಾದ್ಯಂತ ಕ್ರೀಡಾ ಕ್ರಾಂತಿಯ ಹೊಸ ಸಂಚಲನ ಸೃಷ್ಟಿಯಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ ಸಂವಾದ' ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಶದ ಮೂಲೆ ಮೂಲೆಗಳ ಲಕ್ಷಾಂತರ ಯುವಜನತೆಯನ್ನು ನೇರವಾಗಿ ಮಾತನಾಡಲಿದ್ದಾರೆ.

ಯುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ 'ಯುವ ಸಂವಾದ'
Pm Modi
ಝಾಹಿರ್ ಯೂಸುಫ್
|

Updated on:Aug 27, 2026 | 11:29 AM

Share

ರಾಷ್ಟ್ರೀಯ ಕ್ರೀಡಾದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ (VC) ಮೂಲಕ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಖೇಲೋ ಇಂಡಿಯಾ ಸಂವಾದ’ (ಯುವ ಸಂವಾದ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯುವಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

‘ಮೇರಾ ಯುವ ಭಾರತ್’ (MY Bharat) ಸಂಸ್ಥೆಯು ಆಯೋಜಿಸಿರುವ ಈ ಬೃಹತ್ ಕಾರ್ಯಕ್ರಮವು ದೇಶದ ಪ್ರತಿಯೊಂದು ಜಿಲ್ಲೆಯ ಆಯ್ದ ಎರಡು ಕಾಲೇಜುಗಳನ್ನು ವರ್ಚುವಲ್ ಆಗಿ ಸಂಪರ್ಕಿಸುವ ಮೂಲಕ ಲಕ್ಷಾಂತರ ಯುವಕರನ್ನು ಒಟ್ಟುಗೂಡಿಸಲಿದೆ.

ಯುವ ಸಂವಾದದ ಪ್ರಮುಖ ವಿಷಯಗಳು:

2036ರ ಒಲಿಂಪಿಕ್ ಕನಸು: ಭಾರತದಲ್ಲಿ 2036ರ ಒಲಿಂಪಿಕ್ಸ್ ಆಯೋಜಿಸುವ ಮತ್ತು ಅದರಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವುದು.

ವಿಕಸಿತ ಭಾರತ: 2047ರ ವೇಳೆಗೆ ಭಾರತವನ್ನು ಸದೃಢ ಮತ್ತು ಮುಂದುವರಿದ ರಾಷ್ಟ್ರವನ್ನಾಗಿ ಮಾಡಲು ಯುವ ನಾಯಕತ್ವದ ಪಾತ್ರವನ್ನು ಎತ್ತಿ ಹಿಡಿಯುವುದು.

ಮಾದಕ ಮುಕ್ತ ಭಾರತ: ಯುವ ಪೀಳಿಗೆಯು ವ್ಯಸನಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಮತ್ತು ಕ್ರೀಡೆಗಳತ್ತ ಗಮನ ಹರಿಸುವಂತೆ ಪ್ರೇರೇಪಿಸುವುದು.

ಕ್ರೀಡಾತಾರೆಗಳ ಒಡನಾಟ:

ಪ್ರಧಾನಮಂತ್ರಿಯವರ ರಾಷ್ಟ್ರೀಯ ಭಾಷಣದ ನಂತರ, ಪ್ರತಿ ಜಿಲ್ಲೆಯ ಕಾಲೇಜುಗಳಲ್ಲಿ ಸ್ಥಳೀಯ ಸಂವಾದಗಳು ಮುಂದುವರಿಯಲಿದೆ. ಇದರಲ್ಲಿ ದೇಶಕ್ಕಾಗಿ ಪದಕ ಗೆದ್ದ ಕ್ರೀಡಾಪಟುಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ, ಯುವಜನತೆಗೆ ಕ್ರೀಡೆಯಲ್ಲಿರುವ ಅವಕಾಶಗಳು ಮತ್ತು ಸವಾಲುಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.ಈ ಸಂವಾದವು ಕೇವಲ ಕ್ರೀಡೆಗೆ ಸೀಮಿತವಾಗಿರದೆ, ದೇಶದ ಒಟ್ಟಾರೆ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ.

Published On - 11:17 am, Thu, 27 August 26

Follow Us
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ