AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ; ಅಭಿನಂದನೆ ಸಲ್ಲಿಸಿದ ಭಾರತೀಯ ಸೇನೆ

Neeraj Chopra: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇತಿಹಾಸ ಸೃಷ್ಟಿಸಿದ್ದಾರೆ . ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಅವರು ಜಾವೆಲಿನ್ ಚಿನ್ನದ ಪದಕ ಗೆದ್ದಿದ್ದಾರೆ. ಬಂಗಾರದ ಬೇಟೇಯಾಡಿದ ನೀರಜ್​ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಇಂದು ಟ್ವೀಟ್ ಮಾಡಿ ನೀರಜ್​ಗೆ ಅಭಿನಂದನೆ ಸಲ್ಲಿಸಿದ್ದಾರೆ.

Neeraj Chopra: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ; ಅಭಿನಂದನೆ ಸಲ್ಲಿಸಿದ ಭಾರತೀಯ ಸೇನೆ
ಪ್ರಧಾನಿ ಮೋದಿ, ನೀರಜ್ ಚೋಪ್ರಾ
ಪೃಥ್ವಿಶಂಕರ
|

Updated on:Aug 28, 2023 | 8:37 AM

Share

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ (Neeraj Chopra) ಇತಿಹಾಸ ಸೃಷ್ಟಿಸಿದ್ದಾರೆ . ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ (World Athletics Championships) ನೀರಜ್ ಚೋಪ್ರಾ ಅವರು ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್ 88.17 ಮೀಟರ್ ದೂರ ಎಸೆದು ಪಾಕಿಸ್ತಾನದ ಅರ್ಷದ್ ನದೀಮ್ ಸೇರಿದಂತೆ 11 ಅಥ್ಲೀಟ್‌ಗಳನ್ನು ಹಿಂದಿಕ್ಕಿ ಚಿನ್ನ ಗೆದ್ದರು. ಇದರೊಂದಿಗೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದೀಗ ಬಂಗಾರದ ಬೇಟೇಯಾಡಿದ ನೀರಜ್​ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur), ಭಾರತೀಯ ಸೇನೆ (Indian Army) ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಶ್ಲಾಘನೆ

ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪ್ರತಿಭಾವಂತ ನೀರಜ್ ಚೋಪ್ರಾ ಅವರು ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿರಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ಮೋದಿ ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ- ಠಾಕೂರ್

ಪ್ರಧಾನಿಯವರಂತೆ ಚಿನ್ನದ ಹುಡುಕನ ಸಾಧನೆಗೆ ಅಭಿನಂದನೆ ಸಲ್ಲಿಸಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ಟ್ವಿಟರ್ ಖಾತೆಯಲ್ಲಿ, ‘88.17 ಮೀಟರ್ ದೂರ ಜಾವೆಲಿನ್ ಎಸೆದು ನೀರಜ್ ಮತ್ತೆ ಈ ಸಾಧನೆ ಮಾಡಿದ್ದಾರೆ!. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವದರೊಂದಿಗೆ, ನೀರಜ್ ಚೋಪ್ರಾ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎನಿಸಿಕೊಂಡಿದ್ದಾರೆ. ನಿಮ್ಮ ಸಾಧನೆಗಳ ಬಗ್ಗೆ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ ಮತ್ತು ಈ ಕ್ಷಣವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಸುಬೇದಾರ್ ನೀರಜ್ ಚೋಪ್ರಾಗೆ ಅಭಿನಂದನೆ- ಭಾರತೀಯ ಸೇನೆ

ನೀರಜ್ ಚೋಪ್ರಾ ಅವರ ವಿಶೇಷ ಮತ್ತು ಸ್ಮರಣೀಯ ಸಾಧನೆಗಾಗಿ ಭಾರತೀಯ ಸೇನೆ ಕೂಡ ಶ್ಲಾಘಿಸಿದ್ದು, ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಭಾರತೀಯ ಸೇನೆ, ‘ನೀರಜ್ ಚೋಪ್ರಾ ನಮಗೆ ಮತ್ತೊಮ್ಮೆ ಹೆಮ್ಮೆ ತಂದಿದ್ದಾರೆ!! ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ 88.17 ಮೀಟರ್ ಎಸೆತದೊಂದಿಗೆ ಪುರುಷರ ಜಾವೆಲಿನ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಸುಬೇದಾರ್ ನೀರಜ್ ಚೋಪ್ರಾ ಅವರನ್ನು ಭಾರತೀಯ ಸೇನೆ ಅಭಿನಂದಿಸುತ್ತದೆ’ ಎಂದು ಬರೆದುಕೊಂಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:33 am, Mon, 28 August 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್