AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIFA World Cup: ಕ್ಷಿಪಣಿ ದಾಳಿಯ ಭಯ; ಪೋಲೆಂಡ್ ತಂಡಕ್ಕೆ ಆಕಾಶದಲ್ಲೂ ಟೈಟ್ ಸೆಕ್ಯೂರಿಟಿ; ವಿಡಿಯೋ ನೋಡಿ

FIFA World Cup 2022: ಕೆಲವು ದಿನಗಳ ಹಿಂದೆ ಪೋಲೆಂಡ್‌ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ರಾಷ್ಟ್ರೀಯ ಫುಟ್ಬಾಲ್ ತಂಡವನ್ನು ಬಿಗಿ ಭದ್ರತೆಯಲ್ಲಿ ಕತಾರ್​ಗೆ ಕಳುಹಿಸಿಕೊಡಲಾಗಿದೆ.

FIFA World Cup: ಕ್ಷಿಪಣಿ ದಾಳಿಯ ಭಯ; ಪೋಲೆಂಡ್ ತಂಡಕ್ಕೆ ಆಕಾಶದಲ್ಲೂ ಟೈಟ್ ಸೆಕ್ಯೂರಿಟಿ; ವಿಡಿಯೋ ನೋಡಿ
ಪೋಲೆಂಡ್ ತಂಡಕ್ಕೆ ಭಿಗಿ ಭದ್ರತೆ
Follow us
TV9 Web
| Updated By: ಪೃಥ್ವಿಶಂಕರ

Updated on: Nov 18, 2022 | 12:32 PM

ಫುಟ್ಬಾಲ್ ವಿಶ್ವಕಪ್‌ಗೆ (FIFA World Cup 2022) ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20 ರಿಂದ ಕತಾರ್‌ನಲ್ಲಿ (Qatar) ಪ್ರಾರಂಭವಾಗುವ ಫಿಫಾ ವಿಶ್ವಕಪ್‌ನಲ್ಲಿ ಭಾಗವಹಿಸಲು ಬಹುತೇಕ ಎಲ್ಲಾ ತಂಡಗಳು ಕತಾರ್‌ ತಲುಪಿವೆ. ಇದೇ ವೇಳೆ ಪೋಲೆಂಡ್ ತಂಡ ವಿಶೇಷ ಭದ್ರತೆಯೊಂದಿಗೆ ಕತಾರ್ ತಲುಪಿದೆ. ಎಫ್16 ಯುದ್ಧ ವಿಮಾನದ ರಕ್ಷಣೆಯಲ್ಲಿ ಪೋಲೆಂಡ್ ತಂಡವನ್ನು ವಿಶ್ವಕಪ್‌ಗಾಗಿ ಕತಾರ್‌ಗೆ ಕರೆದೊಯ್ಯಲಾಯಿತು. ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಪೋಲೆಂಡ್‌ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ರಾಷ್ಟ್ರೀಯ ಫುಟ್ಬಾಲ್ ತಂಡವನ್ನು ಬಿಗಿ ಭದ್ರತೆಯಲ್ಲಿ ಕತಾರ್​ಗೆ ಕಳುಹಿಸಿಕೊಡಲಾಗಿದೆ. ಪೋಲೆಂಡ್ ತಂಡವು ಈ ಭದ್ರತೆಯ ವೀಡಿಯೊವನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದರಲ್ಲಿ ಎರಡು ಯುದ್ಧ ವಿಮಾನಗಳು ವಿಮಾನದ ಹಿಂದೆ ಹಾರುತ್ತಿರುವುದನ್ನು ಕಾಣಬಹುದಾಗಿದೆ.

ನವೆಂಬರ್ 22 ರಂದು ಮೊದಲ ಪಂದ್ಯ

ಪೋಲೆಂಡ್ ಮಾಧ್ಯಮ ವರದಿಗಳ ಪ್ರಕಾರ, ಪೋಲೆಂಡ್‌ನ ವಾಯುಪ್ರದೇಶದಿಂದ ಹೊರಡುವವರೆಗೂ ಯುದ್ಧ ವಿಮಾನಗಳು ಫುಟ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದ ಹಿಂದೆಯೇ ಸಾಗಿದ್ದವು ಎಂದು ವರದಿಯಾಗಿದೆ. ನವೆಂಬರ್ 22 ರಂದು ಪೋಲೆಂಡ್ ತಂಡ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ

ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಪೋಲೆಂಡ್‌ನ ಹಳ್ಳಿಯ ಮೇಲೆ ಕ್ಷಿಪಣಿ ದಾಳಿ ನಡೆದಿತ್ತು. ಈ ಕ್ಷಿಪಣಿ ದಾಳಿಯಲ್ಲಿ ಹಳ್ಳಿಯ ಇಬ್ಬರು ಸಾವನ್ನಪ್ಪಿದ್ದರು. ಪೋಲೆಂಡ್ ನ್ಯಾಟೋ ಸದಸ್ಯ ರಾಷ್ಟ್ರವಾಗಿರುವುದರಿಂದ ರಷ್ಯಾ, ಪೋಲೆಂಡ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ಉಕ್ರೇನ್ ಆರೋಪ ಹೊರಿಸಿತ್ತು. ಆದರೆ ದಾಳಿ ಬಳಿಕ ಹೊರಬಂದ ಪ್ರಾಥಮಿಕ ತನಿಖಾ ವರದಿ ಪ್ರಕಾರ, ಅಮೆರಿಕ ಕೂಡ ಇತರ ನ್ಯಾಟೊ ಸದಸ್ಯ ದೇಶಗಳಂತೆ ಇದು ಉಕ್ರೇನ್​ ಹಾರಿಬಿಟ್ಟ ರಾಕೆಟ್​ನಿಂದ ಸಂಭವಿಸಿದ ಸ್ಫೋಟ ಎಂದು ಒಪ್ಪಿಕೊಂಡಿದೆ. ಪ್ರಾಥಮಿಕ ತನಿಖೆಗಳ ನಂತರ ಈ ಮಾಹಿತಿಯನ್ನು ಮೊದಲು ಪೊಲೆಂಡ್ ಬಹಿರಂಗಪಡಿಸಿತ್ತು. ಉಕ್ರೇನ್ ಗಡಿಯ ಪೊಲೆಂಡ್​ನ ಹಳ್ಳಿಯಲ್ಲಿ ಕ್ಷಿಪಣಿ ದಾಳಿಯಿಂದಾಗಿ ಮಂಗಳವಾರ (ನ 15) ಇಬ್ಬರು ಮೃತಪಟ್ಟಿದ್ದರು. ಈ ವೇಳೆ ರಷ್ಯಾ ಉಕ್ರೇನ್​ನಲ್ಲಿರುವ ಮೂಲಸೌಕರ್ಯ ವ್ಯವಸ್ಥೆಯ ಮೇಲೆ ವ್ಯಾಪಕ ದಾಳಿ ನಡೆಸಿತ್ತು.

ಕ್ಷಿಪಣಿ ದಾಳಿ ರಷ್ಯಾದಿಂದ ನಡೆದಿಲ್ಲ

ಉಕ್ರೇನ್ ಗಡಿಯಾಚೆ ಸಂಭವಿಸಿದ ಸ್ಫೋಟವು ಜಾಗತಿಕ ಮಟ್ಟದಲ್ಲಿ ಆತಂಕ ಹುಟ್ಟುಹಾಕಿತ್ತು. ಆದರೆ ಕೆಲ ಹೊತ್ತಿನ ನಂತರ ಈ ಸ್ಫೋಟಕ್ಕೆ ರಷ್ಯಾದಿಂದ ಹಾರಿಬಂದ ಕ್ಷಿಪಣಿ ಕಾರಣವಲ್ಲ ಎಂಬುದು ದೃಢಪಟ್ಟ ನಂತರ ಹಲವು ದೇಶಗಳು ನಿಟ್ಟುಸಿರು ಬಿಟ್ಟಿದ್ದವು. ರಷ್ಯಾದಿಂದ ಬರುತ್ತಿದ್ದ ಕ್ಷಿಪಣಿಯನ್ನು ತಡೆಗಟ್ಟಲು ಉಕ್ರೇನ್ ಹಾರಿಬಿಟ್ಟ ಬರಾಜ್ (ಕ್ಷಿಪಣಿಗಳನ್ನು ಆಗಸದಲ್ಲಿಯೇ ತಡೆಯುವ ಯುದ್ಧೋಪಕರಣ) ಪೊಲೆಂಡ್ ಗಡಿಯೊಳಗೆ ಬಂದಿರಬಹುದು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ಹೊರಬಿದ್ದಿತ್ತು.

ಸಿ ಗುಂಪಿನಲ್ಲಿ ಪೋಲೆಂಡ್

ಪೋಲೆಂಡ್ ತಂಡದ ಬಗ್ಗೆ ಹೇಳುವುದಾದರೆ, ಈ ತಂಡ ವಿಶ್ವಕಪ್​ನಲ್ಲಿ ಮೆಕ್ಸಿಕೊ, ಅರ್ಜೆಂಟೀನಾ, ಸೌದಿ ಅರೇಬಿಯಾ ಜೊತೆಗೆ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಪೋಲೆಂಡ್ ಮೆಕ್ಸಿಕೋ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ಆ ಬಳಿಕ 4 ದಿನಗಳ ನಂತರ ಸೌದಿ ಅರೇಬಿಯಾ ಎದುರು ಸೆಣಸಾಡಲಿದೆ. ಹಾಗೆಯೇ ನವೆಂಬರ್ 30 ರಂದು ಪೋಲೆಂಡ್ ತನ್ನ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ಅರ್ಜೆಂಟೀನಾವನ್ನು ಎದುರಿಸಲಿದೆ.

ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು