AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Vs Australia Test Series 2020 | ಭಾರತ ತಂಡದಲ್ಲಿ ಪಂತ್ ಯಾಕಿಲ್ಲ: ಇದು ರಿಕ್ಕಿ ಪಾಂಟಿಂಗ್ ಪ್ರಶ್ನೆ

ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಬ್ ಪಂತ್​ರನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆರಿಸದಿರುವುದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಇದಕ್ಕೆ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕ್ಕಿ ಪಾಂಟಿಂಗ್ ಸಹ ಹೊರತಲ್ಲ.

India Vs Australia Test Series 2020 | ಭಾರತ ತಂಡದಲ್ಲಿ ಪಂತ್ ಯಾಕಿಲ್ಲ: ಇದು ರಿಕ್ಕಿ ಪಾಂಟಿಂಗ್ ಪ್ರಶ್ನೆ
ರಿಕ್ಕಿ ಪಾಂಟಿಂಗ್
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 18, 2020 | 7:40 PM

Share

ಸಿಡ್ನಿಯಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯ ‘ಎ’ ವಿರುದ್ಧ ಕೇವಲ 73 ಎಸೆತಗಳಲ್ಲಿ ಶತಕ ಬಾರಿಸಿದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಬ್ ಪಂತ್​ರನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆರಿಸದಿರುವುದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಇದಕ್ಕೆ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕ್ಕಿ ಪಾಂಟಿಂಗ್ ಸಹ ಹೊರತಲ್ಲ.

ಚ್ಯಾನೆಲ್ 7 ರಲ್ಲಿ ಕಾಮೆಂಟರಿ ನೀಡುತ್ತಿರುವ ಪಾಂಟಿಂಗ್ ಅಟಗಾರರ ಸಾಮರ್ಥ್ಯವನ್ನು ಅಳೆಯುವುದರಲ್ಲಿ ನಿಷ್ಣಾತರು. ಅಡಿಲೇಡ್ ಟೆಸ್ಟ್ ಪಂದ್ಯದ ಮೊದಲನೆ ದಿನ ಅವರು ಭಾರತದ ಆರಂಭಿಕ ಆಟಗಾರ ಪೃಥ್ವಿ ಶಾ ಅವರ ದೌರ್ಬಲ್ಯದ ಬಗ್ಗೆ ಮಾತಾಡಿದ್ದರು. ಫಾರ್ವರ್ಡ್ ಡಿಫೆನ್ಸ್ ಆಡುವಾಗ ಶಾ ಅವರ ಎಡಗಾಲು ಮತ್ತು ಬ್ಯಾಟ್ ನಡುವೆ ಅಂತರವಿರುತ್ತದೆ, ಆಸ್ಟ್ರೇಲಿಯಾದ ಬೌಲರ್​ಗಳು ಈ ದೌರ್ಬಲ್ಯವನ್ನು ಬಳಸಿಕೊಳ್ಳುತ್ತಾರೆ ಎಂದು ಪಾಂಟಿಂಗ್ ಹೇಳಿದ್ದರು.

ಶಾ ಅಕ್ಷರಶಃ ಅದೇ ರೀತಿಯಲ್ಲಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್​ಗೆ ವಿಕೆಟ್ ಒಪ್ಪಿಸಿದರು. ಸ್ಟಾರ್ಕ್ ಎಸೆದ ಇನ್​ಸ್ವಿಂಗರ್, ಶಾ ಅವರ ಪ್ಯಾಡ್ ಮತ್ತು ಬ್ಯಾಟ್ ನಡುವೆ ತೂರಿ ವಿಕೆಟ್​ಗೆ ಅಪ್ಪಳಿಸಿತು. ಶಾ ಔಟಾಗುವ ಕೇವಲ ಒಂದು ಎಸೆತ ಮೊದಲು ಪಾಂಟಿಂಗ್ ಹಾಗೆ ಕಾಮೆಂಟ್ ಮಾಡಿದ್ದರು!

ರಿಷಬ್ ಪಂತ್

ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಪಾಂಟಿಂಗ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಕೋಚ್ ಆಗಿದ್ದಾರೆ. ಈ ತಂಡಕ್ಕೆ ಪೃಥ್ವಿ ಶಾ ಮತ್ತು ರಿಷಭ್ ಪಂತ್ ಸಹ ಆಡುತ್ತಾರೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳು ಪಾಂಟಿಂಗ್​ಗೆ ಚೆನ್ನಾಗಿ ಗೊತ್ತಿದೆ. ಇದೇ ಹಿನ್ನೆಲೆಯಲ್ಲಿ ಅವರು ಪಂತ್​ ಆಡುವ ಎಲೆವೆನ್​ನಲ್ಲಿ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ವೃದ್ಧಿಮಾನ್ ಸಹಾ

‘ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್​ನಲ್ಲಿ ರಿಷಬ್ ಪಂತ್ ಇಲ್ಲದಿರುವುದು ನನಗೆ ಆಶ್ಚರ್ಯ ತಂದಿದೆ. ಅವರು ಅಪಾರ ಪ್ರತಿಭೆಯ ಯುವ ಆಟಗಾರ ಮತ್ತು ಟೀಮ್​ಗೆ ಎಕ್ಸ್-ಫ್ಯಾಕ್ಟರ್. ಅವರ ಸ್ಟ್ರೋಕ್ ರೇಂಜ್ ಅದ್ಭುತವಾಗಿದೆ. ನಾನಂದುಕೊಳ್ಳುವ ಹಾಗೆ ಅದೇ ಕಾರಣಕ್ಕೆ ಸಹಾ ಟೀಮಿನಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ರಾಯಶಃ ಅವರು ವೃದ್ಧಿಮಾನ್ ಸಹಾ ಅವರಷ್ಟು ಉತ್ತಮ ವಿಕೆಟ್​ಕೀಪರ್ ಅಲ್ಲದಿರಬಹುದು’ ಎಂದು ಪಾಂಟಿಂಗ್ ಹೇಳಿದರು.

Published On - 6:32 pm, Fri, 18 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ