AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಚಾಂಪಿಯನ್​​ ಗುಕೇಶ್​ಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಪ್ರಜ್ಞಾನಂದ

Tata Steel Masters 2025: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಚಾಲೆಂಜರ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ವಿರುದ್ಧ ಗೆದ್ದು ಡಿ. ಗುಕೇಶ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇದೀಗ ನಡೆದ ಟಾಟಾ ಸ್ಟೀಲ್ ಮಾಸ್ಟರ್ಸ್ 2025 ಚೆಸ್ ಟೂರ್ನಿ ಫೈನಲ್‌ನಲ್ಲಿ ಡಿ. ಗುಕೇಶ್​ಗೆ ಸೋಲುಣಿಸಿ ಆರ್ ಪ್ರಜ್ಞಾನಂದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ವಿಶ್ವ ಚಾಂಪಿಯನ್​​ ಗುಕೇಶ್​ಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಪ್ರಜ್ಞಾನಂದ
R. Pragnanandhaa
ಝಾಹಿರ್ ಯೂಸುಫ್
|

Updated on:Feb 03, 2025 | 11:20 AM

Share

ನೆದರ್‌ಲ್ಯಾಂಡ್‌ನ ವಿಜ್ಕ್ ಆನ್ ಝೀಯಲ್ಲಿ ನಡೆದ ಟಾಟಾ ಸ್ಟೀಲ್ ಮಾಸ್ಟರ್ಸ್ 2025 ಚೆಸ್ ಟೂರ್ನಿ ಫೈನಲ್‌ನಲ್ಲಿ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಭಾನುವಾರ (ಫೆ.2) ನಡೆದ ಅಂತಿಮ ಸುತ್ತಿನಲ್ಲಿ ಭಾರತೀಯ ಚೆಸ್ ಚತುರರಾದ ಪ್ರಜ್ಞಾನಂದ ಹಾಗೂ ವಿಶ್ವ ಚಾಂಪಿಯನ್ ಡಿ ಗುಕೇಶ್ ಮುಖಾಮುಖಿಯಾಗಿದ್ದರು.

ಇದಕ್ಕೂ ಮುನ್ನ ನಡೆದ ನಿರ್ಣಾಯಕ ಸುತ್ತಿನಲ್ಲಿ ಆರ್​. ಪ್ರಜ್ಞಾನಂದ ಜರ್ಮನಿಯ ವಿನ್ಸೆಂಟ್ ಕೀಮರ್ ಅವರನ್ನು ಸೋಲಿಸಿದರೆ, ಡಿ ಗುಕೇಶ್ ಅವರು ಅರ್ಜುನ್ ಎರಿಗೈಸಿ ವಿರುದ್ಧ ಸೋಲನುಭವಿಸಿದರು.

ಆ ಬಳಿಕ ನಡೆದ ಬ್ಲಿಟ್ಜ್ ಪ್ಲೇಆಫ್‌ಗಳಲ್ಲಿ, ಪ್ರಜ್ಞಾನಂದ ಅವರು ಗುಕೇಶ್ ವಿರುದ್ಧ ಮೊದಲ ಗೇಮ್‌ನಲ್ಲಿ ಸೋತರು. ಆ ಬಳಿಕ ಕಂಬ್ಯಾಕ್ ಮಾಡಿದ ಪ್ರಜ್ಞಾನಂದ ಸತತ ಎರಡು ಗೇಮ್​ಗಳನ್ನು ಗೆಲ್ಲುವ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಟ್ರೈಬ್ರೇಕರ್​ನಲ್ಲಿ ಪ್ರಜ್ಞಾನಂದ ಚಾಂಪಿಯನ್:

ಟಾಟಾ ಸ್ಟೀಲ್ ಮಾಸ್ಟರ್ಸ್ 2025 ಚೆಸ್ ಟೂರ್ನಿಯ ಫೈನಲ್​ ಸುತ್ತಿನ ಮುಕ್ತಾಯದ ವೇಳೆಗೆ ಡಿ ಗುಕೇಶ್ ಅಗ್ರಸ್ಥಾನ ಅಲಂಕರಿಸಿದರೆ, ಆರ್​. ಪ್ರಜ್ಞಾನಂದ ದ್ವಿತೀಯ ಸ್ಥಾನ ಪಡೆದಿದ್ದರು. ಇಬ್ಬರು 8.5 ಅಂಕಗಳನ್ನು ಹೊಂದಿದ್ದರಿಂದ ಚಾಂಪಿಯನ್ ನಿರ್ಣಾಯಕಕ್ಕಾಗಿ ಟ್ರೈಬ್ರೇಕರ್​ ಮೊರೆ ಹೋಗಲಾಯಿತು.

ಈ ನಿರ್ಣಾಯಕ ಸುತ್ತಿನಲ್ಲಿ ವಿಶ್ವ ಚಾಂಪಿಯನ್​ ಡಿ. ಗುಕೇಶ್ ವಿರುದ್ಧ ಮೇಲುಗೈ ಸಾಧಿಸುವ ಮೂಲಕ ಆರ್​. ಪ್ರಜ್ಞಾನಂದ ಟಾಟಾ ಸ್ಟೀಲ್ ಮಾಸ್ಟರ್ಸ್ 2025 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ಇದಾಗ್ಯೂ ಈ ಟೂರ್ನಿಯಲ್ಲಿ ಅತ್ಯಧಿಕ ರೇಟಿಂಗ್ ಪಡೆದಿರುವುದು ಡಿ. ಗುಕೇಶ್ ಎಂಬುದು ವಿಶೇಷ. ಗುಕೇಶ್ 2777 ರೇಟಿಂಗ್ ಹೊಂದಿದ್ದರೆ, ಆರ್​. ಪ್ರಜ್ಞಾನಂದ 2741 ರೇಟಿಂಗ್ ಪಡೆದುಕೊಂಡಿದ್ದಾರೆ.

ಇನ್ನು ಉಜ್ಬೇಕಿಸ್ತಾನ್​ನ ಚೆಸ್ ಚತುರ ನದಿರ್ಬೆಕ್ ಅಬ್ದುಸತ್ತೊರೊವ್ 2766 ರೇಟಿಂಗ್​ ಪಡೆದರೆ, ಸ್ಲೋವೆನಿಯಾದ ಗ್ರ್ಯಾಂಡ್ ಮಾಸ್ಟರ್ ವ್ಲಾಡಿಮಿರ್ ಫೆಡೋಸೀವ್ 2724 ರೇಟಿಂಗ್ ಪಡೆದುಕೊಂಡಿದ್ದಾರೆ.

Published On - 11:19 am, Mon, 3 February 25

Follow Us
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?