AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಪ್ರಜ್ಞಾನಂದ

R Praggnanandhaa: ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಪ್ರಜ್ಞಾನಂದನ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿ ಫೈನಲ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರಿಗೆ ಕಠಿಣ ಪೈಪೋಟಿ ನೀಡಿದರು. ಇದೇನು ಸಣ್ಣ ಸಾಧನೆಯಲ್ಲ. ಪ್ರಜ್ಞಾನಂದ ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಪ್ರಜ್ಞಾನಂದ
R Praggnanandha - Narendra Modi
TV9 Web
| Edited By: |

Updated on: Aug 31, 2023 | 10:31 PM

Share

ಚೆಸ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ಪ್ರಧಾನ ಮಂತ್ರಿಯ ನಿವಾಸಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರಜ್ಞಾನಂದ ಮೋದಿ ಅವರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ಞಾನಂದ, ಸನ್ಮಾನ್ಯ ಪ್ರಧಾನಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಿರುವುದು ದೊಡ್ಡ ಗೌರವ. ನನಗೆ ಮತ್ತು ನನ್ನ ಪೋಷಕರಿಗೆ ಅವರು ನೀಡಿದ ಪ್ರೋತ್ಸಾಹದ ಎಲ್ಲಾ ಮಾತುಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಇವತ್ತು ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ತಮ್ಮ ನಿವಾಸಕ್ಕೆ ವಿಶೇಷ ಅತಿಥಿಗಳು ಆಗಮಿಸಿದ್ದರು. ನಿಮ್ಮ ಕುಟುಂಬದ ಜೊತೆ ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಯಿತು. ನಿಮ್ಮ ಉತ್ಸಾಹ ಮತ್ತು ಪರಿಶ್ರಮವನ್ನು ನೀವು ನಿರೂಪಿಸಿದ್ದೀರಿ. ಭಾರತದ ಯುವಕರು ಯಾವುದೇ ಡೊಮೇನ್ ಅನ್ನು ಹೇಗೆ ಜಯಿಸಬಹುದು ಎಂಬುದಕ್ಕೆ ನೀವು ಉದಾಹರಣೆಯಾಗಿದ್ದೀರಿ. ನಿಮ್ಮ ಬಗ್ಗೆ ಹೆಮ್ಮೆಯಿದೆ ಪ್ರಜ್ಞಾನಂದ ಎಂದು ಟ್ವೀಟ್ ಮಾಡಿದ್ದಾರೆ.

ಅಝರ್​ಬೈಜಾನ್​ನಲ್ಲಿ ಆಗಸ್ಟ್ 24 ರಂದು, 18 ವರ್ಷ ವಯಸ್ಸಿನ ಪ್ರಜ್ಞಾನಂದ ಅವರು ಚೆಸ್ ವಿಶ್ವ ಕಪ್ ಫೈನಲ್‌ನಲ್ಲಿ ಪ್ರಸ್ತುತ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸೆನ್‌ ವಿರುದ್ಧ ಟೈಬ್ರೇಕರ್‌ನಲ್ಲಿ ಸೋತಿದ್ದರು. ಈ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಯುವ ಚೆಸ್ ತಾರೆಯನ್ನು ಹುರಿದುಂಬಿಸಿದ್ದರು.

FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಪ್ರಜ್ಞಾನಂದನ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿ ಫೈನಲ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರಿಗೆ ಕಠಿಣ ಪೈಪೋಟಿ ನೀಡಿದರು. ಇದೇನು ಸಣ್ಣ ಸಾಧನೆಯಲ್ಲ. ಪ್ರಜ್ಞಾನಂದ ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದೀಗ ಯುವ ಚೆಸ್ ತಾರೆಯನ್ನು ಪ್ರಧಾನಿ ನಿವಾಸಕ್ಕೆ ಕರೆಸಿ ಮೋದಿ ಕುಶಲೋಪರಿ ನಡೆಸಿದ್ದಾರೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!